ಪ್ರತಿಫಲಾಪೇಕ್ಷೆ ಬಯಸದೇ ಸೇವೆ ಮಾಡಿ
Team Udayavani, Apr 27, 2019, 2:14 PM IST
ಹೊಳೆಆಲೂರ: ಸಮಾಜದಲ್ಲಿ ಉಳ್ಳವರು ಹಾಗೂ ಧಾರ್ಮಿಕ ಸತ್ಪುರುಷರು ಸಮಾಜದ ದುರ್ಬಲ ವರ್ಗದವರ ಸೇವೆಯನ್ನು ಯಾವುದೇ ಪ್ರತಿಫಲಾಪೇಕ್ಷೆ ಬಯಸದೇ ಅರ್ಪಣಾ ಮನೋಭಾವದಿಂದ ಮಾಡಿದಾಗ ಸುಂದರ ಹಾಗೂ ಸಮಾನ ಸಾಮಾಜಿಕ ವ್ಯವಸ್ಥೆ ರೂಪುಗೊಳ್ಳಲು ಸಾಧ್ಯ ಎಂದು ಕಾಶೀ ಸಿಂಹಾಸನದ ಜ| ಡಾ| ಚಂದ್ರಶೇಖರ ಶಿವಾಚಾರ್ಯರು ಹೇಳಿದರು.
ಕುರುವಿನಕೊಪ್ಪ ಗ್ರಾಮದಲ್ಲಿ ಶುಕ್ರವಾರ ಜರುಗಿದ ಕೊಪ್ಪದಾಂಬಿಕಾ ದೇವಿ ನೂತನ ದೇವಸ್ಥಾನದ ಉದ್ಘಾಟನೆ, ಸಾಮೂಹಿಕ ವಿವಾಹ ಹಾಗೂ ಧಾರ್ಮಿಕ ಸಭೆ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ವ್ಯಕ್ತಿ ಜೀವನದಲ್ಲಿ ಕೋಟಿ ಕೋಟಿ ಗಳಿಸಿದರೂ ಮರಣ ಹೊಂದಿದಾಗ ಅದನ್ನು ತೆಗೆದುಕೊಂಡು ಹೋಗಲಾಗದು. ನಾವು ಸುಖವಾಗಿರುವುದರ ಜೊತೆಗೆ ನಮ್ಮನ್ನು ನಂಬಿರುವ ಬಂಧು ಭಾಂಧವರು, ನಮ್ಮ ಸುತ್ತಲಿನ ದುರ್ಬಲರು, ನಿರ್ಗತಿಕರಿಗೆ ಕೈಲಾದ ಸಹಾಯ ಮಾಡವುದರ ಮುಖಾಂತರ ಸಾಮಾಜಿಕ ಸೇವೆ ಹಾಗೂ ಮಾನಸಿಕ ನೆಮ್ಮದಿ, ಶಾಂತಿ ಪಡೆದುಕೊಳ್ಳಬೇಕು ಎಂದರು.
ಐತಿಹಾಸಿಕ ಕಾಲದಿಂದಲೂ ಭಾರತದಲ್ಲಿ ಹೆತ್ತ ತಾಯಿ ಮತ್ತು ಹೊತ್ತ ಭೂಮಿ ಅತ್ಯಂತ ಪವಿತ್ರ ಸ್ಥಾನವನ್ನು ಪಡೆದುಕೊಂಡಿವೆ. ಆದರೆ ಇತ್ತೀಚೆಗೆ ಪಾಶ್ಚಿಮಾತ್ಯರ ಪ್ರಭಾವೋ ಮಾನವರ ಅತಿಯಾದ ತಿಳಿವಳಿಕೆವೋ ಮುಪ್ಪಿನ ವ್ಯವಸ್ಥೆಯಲ್ಲಿ ತಂದೆ ತಾಯಿಗಳನ್ನು ಮರಗಿಸುತ್ತಿದ್ದಾರೆ. ಮನುಷ್ಯ ತನ್ನ ಕ್ಷಣಿಕ ಆಸೆ ದುರಾಶೆಗಳಿಂದ ಭೂ ತಾಯಿಯನ್ನು ಅಗೆದು ಹಾಳು ಮಾಡುತ್ತಿದ್ದಾನೆ. ಹೀಗಾಗಿ ಅವರ ಶಾಪದಿಂದ ಪ್ರಕೃತಿ ವಿಕೋಪದ ರೂಪದಲ್ಲಿ ಸಾಕಷ್ಟು ಕಷ್ಟ ಅನುಭವಿಸುವಂತಾಗಿದೆ ಎಂದರು.
ಸಮ್ಮಖ ವಹಿಸಿದ್ದ ನವಲಗುಂದ ಗವಿ ಮಠದ ಬಸವಲಿಂಗ ಸ್ವಾಮಿಗಳು ಮಾತನಾಡಿ, ವ್ಯಕ್ತಿ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಸ್ಥಾನಮಾನ ಹೊಂದಿದ್ದ ಗ್ರಾಮಗಳಲ್ಲಿರುವ ದೇವಸ್ಥಾನ, ಧಾರ್ಮಿಕ ಕೇಂದ್ರಗಳು ಇತ್ತೀಚೆಗೆ ಇಸ್ಪೀಟ್, ಜೂಜಿನಂತಹ ಅನೈತಿಕ ಚಟುವಟಿಕೆಗಳ ತಾಣವಾಗುತ್ತಿರುವುದು ಅತ್ಯಂತ ಆತಂಕಕಾರಿ ಸಂಗತಿಯಾಗಿದ್ದು, ಪವಿತ್ರ ಸ್ಥಾನದಲ್ಲಿ ಕೆಟ್ಟ ಕಾರ್ಯ ಮಾಡಿದರೆ ನೋವು ಅನುಭವಿಸಬೇಕಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ನೆರವಾದ ಸೇಡಂ ತಾಲೂಕಿನ ಗೌಡನಹಳ್ಳಿಯ ಬೋಜಲಿಂಗೇಶ್ವರ ಮಠದ ಪ್ರಕಾಶ ತಾತನವರನ್ನು ಗ್ರಾಮಸ್ಥರು ಸನ್ಮಾನಿಸಿದರು.
ಬೆನಹಾಳದ ಸದಾಶಿವ ಮಹಾಂತ ಸ್ವಾಮಿಗಳು, ಭೈರನಹಟ್ಟಿಯ ಶಾಂತಲಿಂಗ ಸ್ವಾಮಿಗಳು, ಬಳಗಾನೂರ ಶಾಂತವೀರ ಸ್ವಾಮಿಗಳು, ಹಾಲಪ್ಪಯ್ಯ ವಿರಕ್ತ ಮಠದ ಪಂಚಾಕ್ಷರ ಸ್ವಾಮಿಗಳು, ಸೂಗೂರ ಹಿರೇಮಠದ ಚನ್ನರುದ್ರ ಶಿವಾಚಾರ್ಯರು, ಹೊಳೆಆಲೂರಿನ ಯಚ್ಚರೇಶ್ವರ ಸ್ವಾಮಿಗಳು, ಗುಳೇದಗುಡ್ಡದ ಒಪ್ಪತ್ತೇಶ್ವರ ಸ್ವಾಮಿಗಳು ಆಶೀರ್ವಚನ ನೀಡಿದರು.
ಗ್ರಾಪಂ ಸದಸ್ಯ ಅಡಿಯಪ್ಪ ಮೇಟಿ, ನಾಗಪ್ಪ ಕುರಿ, ಶಾಂತಪ್ಪ ಮೇಟಿ, ಮೋಹನ ಅಳಗವಾಡಿ, ಶರಣಪ್ಪ ಹವಾಜಿ, ರೇವಣಪ್ಪ ಮೇಟಿ, ಹುಸೇನಸಾನ ನದಾಫ್, ಶಿವಪ್ಪ ಮೇಟಿ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು
Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ
Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ
Mundargi: ದುರಸ್ತಿ ಸಂದರ್ಭ ವಿದ್ಯುತ್ ಶಾಕ್ ; ಕೂಲಿಕಾರ ಸಾವು
ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ