ದಲಿತರಿಗೊಮ್ಮೆ ಶಾಸಕರಾಗುವ ಅವಕಾಶ ನೀಡಿ

ಎಡಗೈ-ಬಲಗೈ ಸಮುದಾಯಕ್ಕೂ ರಾಜಕೀಯ ಲಾಭ ದೊರಕಿಸಿ

Team Udayavani, Apr 27, 2019, 5:47 PM IST

27-April-39

ಚಿಂಚೋಳಿ: ಎಡಗೈ ಮತ್ತು ಬಲಗೈ ಸಮುದಾಯಗಳ ಬೃಹತ್‌ ಸಮಾವೇಶದಲ್ಲಿ ದಲಿತ ಹಿರಿಯ ಮುಖಂಡ ರಮೇಶ ಯಾಕಾಪುರ, ಭೀಮರಾವ ತೇಗಲತಿಪ್ಪಿ, ಗಣಪತ್‌ರಾವ ಚಿಮ್ಮನಚೋಡಕರ್‌, ಸಂಜೀವನ್‌ ಯಾಕಾಪುರ ಒಗ್ಗಟ್ಟು ಪ್ರದರ್ಶಿಸಿದರು.

ಚಿಂಚೋಳಿ: ಮೀಸಲು (ಪರಿಶಿಷ್ಟ ಜಾತಿ)ವಿಧಾನಸಭೆಯಲ್ಲಿ ಸ್ಪರ್ಧಿಸುವ ಸ್ಥಳೀಯ ಎಡಗೈ ಮತ್ತು ಬಲಗೈ ಸಮುದಾಯಗಳ ಮುಖಂಡರ ಮೇಲೆ ಸವರ್ಣೀಯರು ಕರುಣೆ ಮತ್ತು ಪ್ರೀತಿ ತೋರಿಸಿ ಒಂದು ಸಲ ಶಾಸಕರಾಗುವ ಅವಕಾಶ ನೀಡಬೇಕೆಂದು ದಲಿತ ಹಿರಿಯ ಮುಖಂಡ ರಮೇಶ ಯಾಕಾಪುರ ಮನವಿ ಮಾಡಿದರು.

ಮಾಜಿ ಮುಖ್ಯಮಂತ್ರಿ ದಿ.ವೀರೇಂದ್ರ ಪಾಟೀಲರ ಸಮಾಧಿ ಸ್ಥಳದಲ್ಲಿ ಶುಕ್ರವಾರ ಎಡಗೈ ಮತ್ತು ಬಲಗೈ ಸಮುದಾಯಗಳ ಬೃಹತ್‌ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಎಡಗೈ ಮತ್ತು ಬಲಗೈ ಸಮುದಾಯದ 46 ಸಾವಿರ ಮತದಾರರು ಇದ್ದರೂ ನಮಗೆ ಶಾಸಕರಾಗುವ ಅವಕಾಶಗಳು ಸಿಗುತ್ತಿಲ್ಲ. ಪ್ರತಿಯೊಂದು ತಾಂಡಾಗಳಲ್ಲಿ ಕೇವಲ ಒಂದೆರಡು ಮನೆಗಳಿರುವ ತಾಂಡಾಗಳನ್ನೇ ಹೆಚ್ಚು ಗಣನೆಗೆ ತೆಗೆದುಕೊಳ್ಳಲಾಗುತ್ತಿದೆ. ಆದರೆ ಪ್ರತಿ ಗ್ರಾಮಗಳಲ್ಲಿ ದಲಿತರು ವಾಸಿಸುತ್ತಿದ್ದಾರೆ ಎಂದು ಹೇಳಿದರು.

ಅನೇಕ ವರ್ಷಗಳಿಂದ ಮೇಲ್ವರ್ಗದ ಸವರ್ಣೀಯರ ರಕ್ಷಣೆ ಹಾಗೂ ಹೊಲಗದ್ದೆಗಳಲ್ಲಿ ದುಡಿಯುವ, ಸತ್ತ ದನಕರುಗಳನ್ನು ಎತ್ತಿ ಬೀಸಾಡುವ ನಾವು ಮೇಲ್ವರ್ಗದವರ ಸೇವಕರಾಗಿ ದುಡಿಯುತ್ತಿದ್ದೇವೆ. ಆದರೆ ನಮಗೆ ರಾಜಕೀಯ ಅಧಿಕಾರ ಸಿಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿದ್ದ ಬಂಜಾರಾ ಲಂಬಾಣಿ ಸಮಾಜವನ್ನು ಮುಖ್ಯಮಂತ್ರಿ ಡಿ. ದೇವರಾಜ ಅರಸು ಸಚಿವ ಸಂಪುಟದಲ್ಲಿ ಭೋವಿ ಮತ್ತು ಲಂಬಾಣಿ ಜಾತಿ ಶಾಸಕರೇ ಇಲ್ಲದಿದ್ದರೂ ಎಡಗೈ ಮತ್ತು ಬಲಗೈ ಶಾಸಕರು ಸಂವಿಧಾನದಲ್ಲಿ ತಿದ್ದುಪಡಿ ಮಾಡಿ ಎಸ್‌ಸಿ ಪಟ್ಟಿಗೆ ಸೇರಿಸಿರುವುದರಿಂದ ಲಂಬಾಣಿ ಜನಾಂಗಕ್ಕೆ ಎಲ್ಲ ಅವಕಾಶಗಳು ಸಿಗುತ್ತಿವೆ. ಸಂವಿಧಾನದ ಪ್ರಕಾರ ಮೀಸಲಾತಿ ಕೇವಲ ದಲಿತರಿಗಾಗಿದ್ದು, ಈಗ ಎಲ್ಲ ವರ್ಗದವರಿಗೆ ಕಲ್ಪಿಸಲಾಗಿದೆ. ಇಂದು ಎರಡೂ ಸಮುದಾಯದವರು ಒಗ್ಗಟ್ಟಾಗಿ ಲೋಕಸಭೆ, ವಿಧಾನಸಭೆ ಹಾಗೂ ಜಿಪಂ, ತಾಪಂ ಚುನಾವಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಬೇಕಾಗಿದೆ ಎಂದರು.

ಜಿ.ಪಂ ಮಾಜಿ ಅಧ್ಯಕ್ಷ ಭೀಮರಾವ ತೇಗಲತಿಪ್ಪಿ ಮಾತನಾಡಿ, ನಾವೆಲ್ಲರೂ ಮುಸ್ಲಿಂ ಮತ್ತು ಲಂಬಾಣಿ ಜಾತಿಯವರಂತೆ ಒಗ್ಗಟ್ಟಿನಿಂದ ಕೂಡಿರಬೇಕಾಗಿದೆ. ನಮ್ಮ ಸಮಾಜ ತಾಲೂಕಿನಲ್ಲಿ ಹೆಚ್ಚಿನ ಮತಗಳು ಹೊಂದಿದ್ದರೂ ಚುನಾವಣೆ ಸಂದರ್ಭದಲ್ಲಿ ಕಡೆಗಾಣಿಸಲಾಗುತ್ತಿದೆ. ಹೀಗಾಗಿ ನಾವೆಲ್ಲ ಒಂದೇ ಎನ್ನುವ ಭಾವನೆ ಬರಬೇಕಾಗಿವೆ ಎಂದು ಹೇಳಿದರು.

ಗಣಪತರಾವ್‌ ಚಿಮ್ಮನಚೋಡಕರ, ಗೋಪಾಲರಾವ್‌ ಕಟ್ಟಿಮನಿ, ಮಾಣಿಕರಾಗ ಗುಲಗುಂಜಿ, ಆನಂದ ಟೈಗರ್‌, ಗೌತಮ ಬೊಮ್ಮನಳ್ಳಿ, ಶಿವಕುಮಾರ ಕೊಳ್ಳೂರ, ನಿವೃತ್ತ ಬ್ಯಾಂಕ್‌ ಅಧಿಕಾರಿ ಎಚ್.ಎಸ್‌. ಮಟ್ಟಿ, ಜಿ.ಪಂ ಸದಸ್ಯ ಸಂಜೀವನ್‌ ಯಾಕಾಪುರ, ರಾಜಾ ಶಿವಶರಣಪ್ಪ ಮಾತನಾಡಿದರು.

ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು ಸಿವಿಲ್ ನ್ಯಾಯಲಯದ ನಿವೃತ್ತ ನ್ಯಾಯಾಧೀಶ ಜಿ.ಕೆ. ಗೋಖಲೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಂತಕುಮಾರ ಕಟ್ಟಿಮನಿ, ಈರಪ್ಪ ಓಂಕಾರ, ಸುಭಾಷ ಶೀಲವಂತ, ಶರಣಪ್ಪ ಮಾಳಗಿ, ಸೈಬಣ್ಣ ಕೊಂಡಂಪಳ್ಳಿ ಇನ್ನಿತರರಿದ್ದರು. ಆರ್‌. ಗಣಪತರಾವ ಸ್ವಾಗತಿಸಿದರು, ಪ್ರೇಮಕುಮಾರ ಕಟ್ಟಿ ನಿರೂಪಿಸಿದರು, ಮಾರುತಿ ಗಂಜಗಿರಿ ವಂದಿಸಿದರು.

ಟಾಪ್ ನ್ಯೂಸ್

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-thirthahalli

Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

14-thirthahalli

Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.