ಕತ್ತಿ ಮುನಿಸು, ಕೈಗೆ ಜಯದ ಕನಸು

ನೆಪ ಮಾತ್ರಕ್ಕೆ ಸೋದರರ ಪ್ರಚಾರ

Team Udayavani, Apr 28, 2019, 1:08 PM IST

belegavi-1..

ಬೆಳಗಾವಿ: ಲೋಕಸಭೆ ಚುನಾವಣೆಯ ಮಹಾಸಮರ ಮುಗಿದಿದೆ. ಫಲಿತಾಂಶ ಹೊರಬರಬೇಕಷ್ಟೆ. ಮತದಾನ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಮಾಜಿ ಸಂಸದರ ಕ್ಷೇತ್ರ ಹುಕ್ಕೇರಿಯಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ.

ಚುನಾವಣೆಗೆ ಮುನ್ನ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ರಾಜ್ಯಮಟ್ಟದಲ್ಲಿ ಭಾರೀ ಸುದ್ದಿಮಾಡಿದ್ದ ಹುಕ್ಕೇರಿ ವಿಧಾನಸಭಾ ಕ್ಷೇತ್ರ ಹಾಗೂ ಕತ್ತಿ ಸಹೋದರರು ಕೊನೆಯವರೆಗೂ ತಮ್ಮ ಕುತೂಹಲದ ನಡೆಯನ್ನು ಉಳಿಸಿಕೊಂಡು ಬಂದರು. ಇದೇ ಆಧಾರದ ಮೇಲೆ ಈಗ ಇಲ್ಲಿ ರಾಜಕೀಯ ಲೆಕ್ಕಾಚಾರಗಳು ಆರಂಭವಾಗಿವೆ.

ಈ ಬಾರಿಯ ಚುನಾವಣೆಯಲ್ಲಿ ಹುಕ್ಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 73.27 ರಷ್ಟು ಮತದಾನವಾಗಿದೆ. ಕಳೆದ ಚುನಾವಣೆಯಲ್ಲಿ ಶೇ.76 ರಷ್ಟು ಮತದಾನವಾಗಿತ್ತು. ಅದಕ್ಕೆ ಹೋಲಿಸಿದರೆ ಸುಮಾರು ಮೂರು ಪ್ರತಿಶತದಷ್ಟು ಮತದಾನ ಕಡಿಮೆಯಾಗಿದೆ. ಆದರೆ ಈ ಮತದಾನದ ಲೆಕ್ಕದ ಪ್ರಕಾರ ಬಿಜೆಪಿಗೆ ಆನುಕೂಲವಾಗಬಹುದು ಎಂಬುದು ಕ್ಷೇತ್ರದ ಜನರ ಹಾಗೂ ರಾಜಕೀಯ ಅನುಭವಿಗಳ ಲೆಕ್ಕಾಚಾರ. ಇದೇ ಆಧಾರದ ಮೇಲೆಯೇ ಬೆಟ್ಟಿಂಗ್‌ ಸಹ ನಡೆದಿದೆ.

ಉಮೇಶ ಕತ್ತಿ ಹಾಗೂ ರಮೇಶ ಕತ್ತಿ ಚುನಾವಣೆಯ ಪ್ರಚಾರದಲ್ಲಿ ಅಷ್ಟಾಗಿ ತಮ್ಮನ್ನು ತೊಡಗಿಸಿಕೊಳ್ಳಲಿಲ್ಲ. ಕೊನೆಯ ಮೂರ್‍ನಾಲ್ಕು ದಿನ ಉಮೇಶ ಕತ್ತಿ ಕ್ಷೇತ್ರದಲ್ಲೇ ಇರಲಿಲ್ಲ. ಇನ್ನು ಟಿಕೆಟ್ ಸಿಗದೇ ಇರುವ ಬಗ್ಗೆ ಮೊದಲೇ ಅಸಮಾಧಾನಗೊಂಡಿದ್ದ ಮಾಜಿ ಸಂಸದ ರಮೇಶ ಕತ್ತಿ ಸಹ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದು ಸುದ್ದಿಯಾಗಲೇ ಇಲ್ಲ. ಬದಲಾಗಿ ಮನೆಯಲ್ಲೇ ಕುಳಿತು ತಮ್ಮ ಬೆಂಬಲಿಗರಿಗೆ ಸೂಚನೆ ನೀಡಿದರು ಎಂಬ ಮಾತುಗಳು ಕ್ಷೇತ್ರದಲ್ಲಿ ಕೇಳಿಬಂದವು. ಕತ್ತಿ ಸಹೋದರರ ಈ ನಡೆ ಅಭ್ಯರ್ಥಿಗಳ ಸೋಲು ಗೆಲುವಿನಲ್ಲಿ ಬಹಳ ಪರಿಣಾಮ ಬೀರಲಿದೆ ಎಂಬ ಮಾತುಗಳು ಕ್ಷೇತ್ರದಲ್ಲಿ ಚರ್ಚೆಯಾಗುತ್ತಿವೆ.

ಚುನಾವಣೆಯಲ್ಲಿ ರೈತ ಸಮುದಾಯ ನಮ್ಮ ಪರವಾಗಿ ನಿಂತಿರುವುದರಿಂದ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಸಿಗಲಿದೆ ಎಂಬುದು ಪಕ್ಷದ ಕಾರ್ಯಕರ್ತರ ವಿಶ್ವಾಸ. ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿದ್ದ ರೈತ ಸಂಘಟನೆಗಳ ಕಾರ್ಯಕರ್ತರು ಈ ಬಾರಿ ನಮಗೆ ಬೆಂಬಲ ನೀಡಿದ್ದಾರೆ. ಅನೇಕ ಗ್ರಾಮಗಳಲ್ಲಿ ಇದು ಪರಿಣಾಮ ಬೀರಿದೆ ಎಂಬುದು ಕಾಂಗ್ರೆಸ್‌ ಮುಖಂಡರ ಲೆಕ್ಕಾಚಾರ.

ಮತದಾನದ ಪ್ರಮಾಣ ಹಾಗೂ ಮೋದಿ ಮತ್ತೆ ಪ್ರಧಾನಿ ಆಗಬೇಕು ಎಂಬ ಕಾರಣದಿಂದ ನಗರ ಪ್ರದೇಶಗಳಲ್ಲಿ ವಿಶೇಷವಾಗಿ ಯುವ ಸಮೂಹ ಬಿಜೆಪಿ ಬೆಂಬಲಿಸಿದೆ. ಇದು ಅನೇಕ ಕಡೆ ಮತದಾನದ ಸಮಯದಲ್ಲಿ ಕಂಡುಬಂತು. ನಮ್ಮ ಪ್ರಚಾರ ಸಾಕಷ್ಟು ಪರಿಣಾಮ ಬೀರಿತ್ತು ಎನ್ನುತ್ತಾರೆ ಬಿಜೆಪಿ ಕಾರ್ಯಕರ್ತರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.