ಕುಂಬಾರಿಕೆ ಕೌಶಲ್ಯ, ಮಣ್ಣಿನಲ್ಲಿ ಅರಳಿದ ಕಲಾಕೃತಿಗಳು


Team Udayavani, Apr 29, 2019, 3:00 AM IST

kumbarike

ತಿ.ನರಸೀಪುರ: ವೃತ್ತಿ ಯಾವುದೇ ಆದರೂ ಬದುಕು ರೂಪಿಸಿಕೊಳ್ಳುವ ಛಲವಿದ್ದರೆ ಏನು ಬೇಕಾದರೂ ಸಾಧಿಸಬಹುದು. ಇಲ್ಲೋರ್ವ ಕುಂಬಾರಿಕೆ ವೃತ್ತಿ ಕೈಗೊಂಡು ಆಕರ್ಷಕ ಮಣ್ಣಿನ ಕಲಾಕೃತಿಗಳನ್ನು ತಯಾರಿಸಿ ರಾಜ್ಯ, ಹೊರ ರಾಜ್ಯಗಳಲ್ಲಿ ತನ್ನದೇ ಕೌಶಲ್ಯ ಪ್ರದರ್ಶಿಸಿ ಗಮನ ಸೆಳೆದಿದ್ದಾರೆ.

ತಾಲೂಕಿನ ಬನ್ನೂರು ಹೋಬಳಿ ದೊಡ್ಡಮುಲಗೂಡು ಗ್ರಾಮದ ಡಿ.ಗೋವಿಂದ ಅವರು ತಮ್ಮ ಅದ್ಭುತ ಕರ ಕುಶಲ ಕಲೆಯನ್ನು ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ದೆಹಲಿ, ಗೋವಾ, ಚೆನ್ನೈ ಸೇರಿದಂತೆ ವಿವಿಧೆಡೆ ತಮ್ಮ ಕಲೆಯ ಪ್ರಾತ್ಯಕ್ಷಿಕೆ, ಪ್ರದರ್ಶನ ನೀಡಿದ್ದಾರೆ.

ಬದುಕು ನಿರ್ವಹಣೆ: ತಮ್ಮ ಮನೆಯ ಹಿಂಭಾಗದ ಒಂದು ಸಣ್ಣ ಕೊಠಡಿಯಲ್ಲಿ ತಿರುಗುವ ಚಕ್ರದಲ್ಲಿ ಸಿಗುವ ಮಣ್ಣಿನಿಂದ ವಿವಿಧ ಕಲಾಕೃತಿಗಳನ್ನು ತಯಾರಿಸಿ, ಅವುಗಳಿಗೆ ಬಣ್ಣ ಹಚ್ಚಿ ಸೌಂದರ್ಯದ ಕಳೆ ನೀಡಿ ಬಳಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನದ ಮೂಲಕ ಮಾರಾಟ ಮಾಡಿ ಬದುಕಿನ ನಿರ್ವಹಣೆ ಮಾಡುತ್ತಿದ್ದಾರೆ. ಇವರ ಬೆನ್ನೆಲುಬಾಗಿ ಇವರ ಪತ್ನಿ ಎಸ್‌.ಬಿ.ಶ್ರುತಿ ಸಹಕರಿಸುತ್ತಿದ್ದಾರೆ.

ಆಕರ್ಷಕ ಕಲಾಕೃತಿಗಳು: ಉತ್ತಮ ಕೌಶಲ್ಯದೊಂದಿಗೆ ಕುಂಬಾರಿಕೆಯನ್ನು ವೃತ್ತಿ ಮಾಡಿಕೊಂಡಿರುವ ಗೋವಿಂದ್‌ ದಂಪತಿ ಮಣ್ಣಿನ ಜಗ್‌, ಗಣಪತಿ, ಹೂವಿನ ಕುಂಡ, ಆಮೆಯ ಬಟ್ಟಲು, ಮಾಯ ದೀಪ(ಮ್ಯಾಜಿಕ್‌ ಲ್ಯಾಂಪ್‌) ಬುದ್ಧನ ವಿಗ್ರಹ, ತೊಟ್ಟಿಲು, ಬುಟ್ಟಿ ಗೋಡೆಗಳಿಗೆ ಬಳಸಬಹುದಾದ ವಿವಿಧ ಕಲಾಕೃತಿಗಳನ್ನು ತಯಾರಿಸುತ್ತಾರೆ.

ಕನಸುಗಳಿಗೊಂದು ರೆಕ್ಕೆ ಕಟ್ಟಿ ಬೇಸಿಗೆ ರಜೆಯ ವೇಳೆ ಹಲವಾರು ಮಕ್ಕಳಿಗೆ ಕರಕುಶಲ ತರಬೇತಿ ನೀಡುತ್ತಿದ್ದಾರೆ. ರಾಜ್ಯ ಸರ್ಕಾರದ ಕೈಗಾರಿಕಾ ಹಾಗೂ ಉದ್ಯಮ ಶೀಲ ತರಬೇತಿ ಕಾರ್ಯಾಗಾರಗಳಲ್ಲಿ ಕೂಡ ಭಾಗವಹಿಸಿ ಫ‌ಲಾನುಭಗಳಿಗೆ ಕರಕುಶಲ ತರಬೇತಿ ನೀಡುತ್ತಿದ್ದಾರೆ.

ಬದುಕಿಗೆ ತಿರುವು ಕೊಟ್ಟ ತರಬೇತಿ: ಸ್ವಗ್ರಾಮದಲ್ಲಿ ಎಸ್‌ಎಸ್‌ಎಲ್‌ಸಿ ಓದಿನ ನಂತರ ರಾಮನಗರದ ಭಾವನ ಮನೆಗೆ ಉದ್ಯೋಗ ಹುಡುಕಲೆಂದು ಹೊರಟ ಗೋವಿಂದ ಅವರು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಡೆಸುತ್ತಿದ್ದ 9 ತಿಂಗಳ ಕರಕುಶಲ ತರಬೇತಿಗೆ ಸೇರಿದರು. ತರಬೇತಿ ಪಡೆಯುತ್ತಿದ್ದ ವೇಳೆ ಅವರಲ್ಲಿ ಮೂಡಿದ ಆಸಕ್ತಿ ಅದೇ ಬದುಕಿನ ವೃತ್ತಿಯಾಗುವಂತೆ ಮಾಡಿತು. ಅಲ್ಲಿಯೇ ಕಲಾಕೃತಿಗಳ ತಯಾರಿಕೆಗೆ ಅವಕಾಶ ದೊರಕಿದ್ದರಿಂದ ಸಾಕಷ್ಟು ಕೆಲಸ ಕಲಿತಿದ್ದಾರೆ.

ರಾಮನಗರದ ಮಣ್ಣು: ರಾಮನಗರ ಮೂಲದಿಂದ ಮಣ್ಣು ತಂದು ಅದನ್ನು ಹದ ಮಾಡಿ ಆಕೃತಿಗಳನ್ನು ತಯಾರಿಸುತ್ತಾರೆ. ಇವರ ಪ್ರದರ್ಶನಕ್ಕೆ ಹಲವಾರು ಪ್ರಮಾಣ ಪತ್ರ ಲಭ್ಯವಾಗಿದ್ದರೂ ಕಲೆಯನ್ನು ನಂಬಿರುವ ಇವರಿಗೆ ಅಗತ್ಯ ಪೋ›ತ್ಸಾಹ ದೊರಕುತ್ತಿಲ್ಲ.

ಸುಮಾರು 25 ವರ್ಷಗಳ ಸೇವೆ ಇದ್ದರೂ ಯಾರು ನಮ್ಮ ಕಲೆ ಗುರುತಿಸಿ ಗೌರವಿಸುತ್ತಿಲ್ಲ ಎಂಬ ನೋವಿದೆ ಆದರೂ ಕಲೆಯು ತಮಗೆ ಆತ್ಮ ತೃಪ್ತಿ ನೀಡುತ್ತಿದೆ. ಒಂದಷ್ಟು ಮಂದಿಯಾದರೂ ನಮ್ಮ ಪ್ರತಿಭೆಯನ್ನು ಪೋ›ತ್ಸಾಸಿ ಕಲಾಕೃತಿಗ‌ಳನ್ನು ಖರೀದಿಸುತ್ತಿದ್ದಾರೆ. ನಾವು ಕಲಿತ ಹಾಗೆ ಹಲವರಿಗೆ ತರಬೇತಿ ನೀಡಿ ಇಂತಹ ವೃತ್ತಿಗಳು ಸಮಾಜದಿಂದ ಅಳಿಸಿ ಹೋಗದಂತೆ ನೋಡಿಕೊಳ್ಳುವ ಜವಾಬ್ದಾರಿ ಇದೆ ಎನ್ನುತ್ತಾರೆ ಗೋವಿಂದ್‌.

* ಎಸ್‌.ಬಿ. ಪ್ರಕಾಶ್‌

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.