ಸಂವಿಧಾನ ಆಶಯಕ್ಕೆ ಬದ್ಧರಾಗಿ


Team Udayavani, Apr 29, 2019, 3:00 AM IST

sanvidhana

ಚಿಕ್ಕಬಳ್ಳಾಪುರ: ಸರ್ಕಾರದ ಸೇವೆಯಲ್ಲಿದ್ದಾಗ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಕಾನೂನು ಚೌಕಟ್ಟಿನಲ್ಲಿ ಬದ್ಧವಾಗಿ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸರ್ಕಾರಿ ಸೇವೆಯಲ್ಲಿ ಸಾರ್ಥಕತೆ ಪಡೆದು ಜನಮನ್ನಣೆ ಗಳಿಸಬಹುದು ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಎಸ್‌.ಎಚ್‌.ಕೋರಡ್ಡಿ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಸಭಾಂಗಣದಲ್ಲಿ ಭಾನುವಾರ ಜಿಲ್ಲಾ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ನ್ಯಾಯಾಧೀಶರಿಗೆ ಜಿಲ್ಲಾ ನ್ಯಾಯಾಲಯ ಹಾಗೂ ವಕೀಲರ ಸಂಘದಿಂದ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಉತ್ತಮ ಸೇವೆ: ನ್ಯಾಯಾಂಗ ಇಲಾಖೆ ಇಂದಿಗೂ ಜನರ ವಿಶ್ವಾಸ, ನಂಬಿಕೆ ಉಳಿಸಿಕೊಂಡಿದೆ ಅಂದರೆ ಅಧಿಕಾರಿಗಳ ಹಾಗೂ ನ್ಯಾಯಾಧೀಶರ ಪ್ರಾಮಾಣಿಕ ಸೇವೆ, ಜನಪರವಾದ ತೀರ್ಪುಗಳೇ ಕಾರಣ. ಸರ್ಕಾರಿ ಸೇವೆಯಲ್ಲಿ ಕಾರ್ಯನಿರ್ವಹಿಸುವವರಿಗೆ ವರ್ಗಾವಣೆ ಖಾಯಂ ಆಗಿರುತ್ತದೆ. ಸೇವೆಯನ್ನು ಸಾರ್ಥಕತೆ ಪಡಿಸಿಕೊಳ್ಳುವ ದಿಸೆಯಲ್ಲಿ ಕಾರ್ಯನಿರ್ವಹಿಸಬೇಕೆಂದರು. ಹಲವು ವರ್ಷಗಳ ಕಾಲ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಯಾಗಿರುವ 2 ನೇ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶೆ ಸಾಯೆಬಾ ಸುಲ್ತಾನ, 2 ನೇ ಹೆಚ್ಚುವರಿ ಕಿರಿಯ ಸಿವಿಲ್‌ ನ್ಯಾಯಾಧೀಶೆ ಶೈಲಜಾ ಅವರು ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದರು.

ನ್ಯಾಯಸಮ್ಮತ ತೀರ್ಪು: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಜಿಲ್ಲಾಧ್ಯಕ್ಷ ಕೆ.ಎಚ್‌.ತಮ್ಮೇಗೌಡ ಮಾತನಾಡಿ, ಜಿಲ್ಲಾ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿರುವ ಇಬ್ಬರೂ ನ್ಯಾಯಾಧೀಶರು ನಿಷ್ಪಕ್ಷಪಾತ ತೀರ್ಪುಗಳಿಗೆ ಹೆಸರಾದವರು. ಇಲ್ಲಿದ್ದ ಕಡಿಮೆ ಅವಧಿಯಲ್ಲಿ ಎಲ್ಲಾ ವಕೀಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ತಮ್ಮ ಪೀಠದ ಮುಂದೆ ಬರುವ ಎಲ್ಲಾ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯ ಸಮ್ಮತವಾಗಿ ನ್ಯಾಯದಾನ ಮಾಡಿದ್ದಾರೆ. ಇವರ ಸಲಹೆ ಮಾರ್ಗದರ್ಶನ ನಮಗೆ ಅಲಭ್ಯವಾಗುತ್ತಿರುವುದಕ್ಕೆ ಬೇಸರವಾಗಿದೆ ಎಂದರು.

ಕಿರಿಯರಿಗೆ ಬುದ್ಧಿವಾದ: ವಕೀಲರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್‌ಕುಮಾರ್‌ ಮಾತನಾಡಿ, ಇಬ್ಬರೂ ನ್ಯಾಯಾಧೀಶರು ಕೂಡ ನ್ಯಾಯಾಲಯದ ಕಲಾಪಗಳಲ್ಲಿ ಲವಲವಿಕೆಯಿಂದ ಭಾಗವಹಿಸಿ ಸಕಾಲದಲ್ಲಿ ನ್ಯಾಯದಾನವಾಗುವಂತೆ ನೋಡಿಕೊಂಡಿದ್ದಾರೆ. ಇದರೊಟ್ಟಿಗೆ ನ್ಯಾಯವಾದಿಯಾಗಿ ವೃತ್ತಿ ಪ್ರಾರಂಭಿಸಿರುವ ಕಿರಿಯ ವಕೀಲರಿಗೆ ಕಾಲ ಕಾಲಕ್ಕೆ ಬುದ್ಧಿವಾದ ಹೇಳುತ್ತಾ ಅಗತ್ಯ ಸಲಹೆ ಸೂಚನೆ ನೀಡುತ್ತಿದ್ದ ಪರಿ ಇವರ ಸೇಹಶೀಲ ವ್ಯಕ್ತಿತ್ವವನ್ನು ಎತ್ತಿ ತೋರುವಂತಿತ್ತು. ಇಂತಹ ಪ್ರಾಮಾಣಿಕ ದಕ್ಷ ನ್ಯಾಯಾಧೀಶರು ವರ್ಗಾವಣೆ ಆಗಿರುವುದು ಬೇಸರದ ಸಂಗತಿ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮೂರನೇ ಪ್ರಧಾನ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಭಾನುಮತಿ, ನ್ಯಾಯಾಧೀಶರಾದ ಲೋಕೇಶ್‌, ನಟರಾಜ್‌, ವಕೀಲರ ಸಂಘದ ಉಪಾಧ್ಯಕ್ಷ ಕೆ.ವಿ.ಬಾಲಾಜಿ, ಖಜಾಂಚಿ ನವೀನ್‌ಕುಮಾರ್‌, ಹಿರಿಯ ವಕೀಲರಾದ ಸುಬ್ರಹ್ಮಣಿ, ನಾರಾಯಣ ಮೂರ್ತಿ, ಬಾಲಕೃಷ್ಣರಾಜು, ಎಚ್‌.ವಿ.ನಾರಾಯಣಪ್ಪ ಇದ್ದರು.

ನ್ಯಾಯಾಂಗ ಇಲಾಖೆಯಲ್ಲಿ ಕೆಲಸ ಮಾಡುವವರು ಯಾವುದೇ ಜಾತಿ, ದ್ವೇಷಗಳಿಗೆ ಆಸ್ಪದ ಇಲ್ಲದಂತೆ ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕಿದೆ. ಸರ್ಕಾರಿ ಸೇವೆ ಹೆಸರಿಗೆ ಮಾತ್ರ ದೇವರ ಸೇವೆ ಆಗಬಾರದು. ಕಾಯಕದಲ್ಲಿ ಕೂಡ ನಾವು ವೃತ್ತಿ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು.
-ಎಸ್‌.ಎಚ್‌.ಕೋರಡ್ಡಿ, ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.