ಶಿರಾಡಿ ಘಾಟಿಯಲ್ಲಿ ಮತ್ತೆ ಎದುರಾಗಿದೆ ಅಪಾಯದ ಭೀತಿ


Team Udayavani, Apr 29, 2019, 3:05 AM IST

shiradi

ಸುಬ್ರಹ್ಮಣ್ಯ: ಶಿರಾಡಿ ಘಾಟಿಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಮಳೆಗಾಲದ ಅತಿವೃಷ್ಟಿ ಸಂದರ್ಭ ಉಂಟಾದ ಹಾನಿಯನ್ನು ಸರಿಪಡಿಸುವ ಕೆಲಸ ಇನ್ನೂ ಬಾಕಿ ಉಳಿದಿದೆ. ಮಳೆಗಾಲದ ಹೊಸ್ತಿಲಲ್ಲಿದ್ದರೂ ಪ್ರಯಾಣಿಕರ ಸುರಕ್ಷತೆಗೆ ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತಗಳು ಕ್ರಮಕ್ಕೆ ಮುಂದಾಗಿಲ್ಲ.

ಘಾಟಿ ರಸ್ತೆಯಲ್ಲಿ ಗುಂಡ್ಯದಿಂದ ಹೆಗ್ಗದ್ದೆ ತನಕ ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ 26 ಕಿ.ಮೀ.ಕಾಂಕ್ರೀಟ್‌ ರಸ್ತೆಯಲ್ಲಿ 12 ಕಡೆ ಭೂಕುಸಿತ ಉಂಟಾಗಿತ್ತು. ಉದ್ದಕ್ಕೂ ಹೊಳೆ ಇರುವ ಬದಿಯಲ್ಲಿ ಬೃಹತ್‌ ಪ್ರಮಾಣದಲ್ಲಿ ಭೂಕುಸಿತವಾಗಿತ್ತು. ಇದರಿಂದ ಸುದೀರ್ಘ‌ ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.

ಕುಸಿತವಾದಲ್ಲಿ ತಾತ್ಕಾಲಿಕ ಕ್ರಮವಾಗಿ ಮರಳಿನ ಚೀಲಗಳನ್ನು ಸೇರಿಸಿ, ಮಣ್ಣಿನ ಮೇಲೆ ಟಾರ್ಪಾಲ್‌ ಹಾಸಿ ಮುಚ್ಚಲಾಗಿದೆ. ಕಾಂಕ್ರೀಟ್‌ ಅಳವಡಿಸಿದ ಸ್ಥಳಗಳ ಮೇಲ್ಭಾಗದಲ್ಲೂ ತಾತ್ಕಾಲಿಕ ಗೋಡೆ ನಿರ್ಮಿಸಲಾಗಿದೆ. ಇಲ್ಲೆಲ್ಲಾ ಆಗ ಅಳವಡಿಸಿದ ಎಚ್ಚರಿಕೆ ಫಲಕಗಳು ಇಂದಿಗೂ ಇವೆ. ಇದಿಷ್ಟು ಬಿಟ್ಟರೆ ಕುಸಿತ ಉಂಟಾದ ಅಪಾಯಕಾರಿ ಸ್ಥಳಗಳಲ್ಲಿ ಬೇರಾವುದೇ ಶಾಶ್ವತ ಕೆಲಸ ಆಗಿಲ್ಲ.

ಕುಸಿತ ಉಂಟಾದಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಇದೆ. ಒಂದು ಕಡೆ ಗುಡ್ಡಗಳು ಅಪಾಯಕಾರಿ ಸ್ಥಿತಿಯಲ್ಲಿವೆ. ಇನ್ನೊಂದು ಬದಿ ಕುಸಿತದ ಕಾರಣ ರಸ್ತೆ ಇಕ್ಕಟ್ಟಾಗಿದೆ. ರಸ್ತೆಯ ಎರಡೂ ಬದಿಗೆ ಚರಂಡಿ ವ್ಯವಸ್ಥೆಯೂ ಇಲ್ಲ. ಇಂತಹ ಅಪಾಯಕಾರಿ ಸ್ಥಿತಿಯಲ್ಲಿ ಈಗ ಸಂಚರಿಸಬೇಕಿದೆ. ಸದ್ಯ ಹೆದ್ದಾರಿಯಲ್ಲಿ ವಾಹನಗಳ ಒತ್ತಡ ಕೂಡ ಹೆಚ್ಚಿದೆ.

ಒಂಭತ್ತು ತಿಂಗಳು ಬಂದ್‌: ಶಿರಾಡಿ ಹೆದ್ದಾರಿಯನ್ನು ಎರಡನೇ ಹಂತದ ಕಾಂಕ್ರೀಟ್‌ ಕಾಮಗಾರಿಗಾಗಿ ಕಳೆದ ವರ್ಷ ಜ.19ರಿಂದ ಬಂದ್‌ ಮಾಡಲಾಗಿತ್ತು. ಜೂ.15ರ ವೇಳೆಗೆ ಲಘು ವಾಹನಗಳಿಗೆ ಸಂಚರಿಸಲು ಅವಕಾಶ ನೀಡಲಾಗಿತ್ತು.

ಈ ಅವಧಿಯಲ್ಲಿ ಭಾರೀ ಮಳೆಯಾಗಿ ಭೂಕುಸಿತವಾದ ಕಾರಣ ಮತ್ತೆ ಸಂಚಾರ ನಿಷೇಧಿಸಲಾಯಿತು. ಬಳಿಕ ತಾತ್ಕಾಲಿಕ ದುರಸ್ತಿ ಕಾಮಗಾರಿ ನಡೆಸಿ, ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಬಳಿಕ ಇಲ್ಲಿ ಶಾಶ್ವತ ಕಾಮಗಾರಿಗಳು ನಡೆದಿಲ್ಲ.

ಶಿರಾಡಿ ರಸ್ತೆಯಲ್ಲಿ ಭೂಕುಸಿತ ನಡೆದ ಸ್ಥಳಗಳ ವೀಕ್ಷಣೆಗೆ ಹೈದರಾಬಾದ್‌ನ ವಿಶೇಷ ತಜ್ಞರ ತಂಡ ವಾರದೊಳಗೆ ಭೇಟಿ ನೀಡಲಿದೆ. ವರದಿ ಆಧರಿಸಿ ಕ್ರಮಕ್ಕೆ ಸರಕಾರಕ್ಕೆ ತಿಳಿಸುತ್ತೇವೆ. ಮಳೆಗಾಲಕ್ಕೆ ಮುನ್ನ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ.
-ಸುಬ್ಬರಾವ್‌ ಹೊಳ್ಳ, ಸಹಾಯಕ ಅಭಿಯಂತರ, ರಾ.ಹೆ. ವಿಭಾಗ, ಮಂಗಳೂರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.