ನೀರು ಕುಡಿಯಲು ಹೋದ ಕುರಿಗಾಹಿ ಮೊಸಳೆಗಳಿಗೆ ಬಲಿ
Team Udayavani, Apr 29, 2019, 3:00 AM IST
ಸೈದಾಪುರ: ಯಾದಗಿರಿ ಜಿಲ್ಲೆ ಸೈದಾಪುರ ಸಮೀಪದ ಗುಡೂರು ಭೀಮಾ ನದಿ ದಡದಲ್ಲಿ ಭಾನುವಾರ ಮಧ್ಯಾಹ್ನ ನೀರು ಕುಡಿಯಲು ಹೋಗಿದ್ದ ಕುರಿಗಾಹಿಯೊಬ್ಬ ಎರಡು ಮೊಸಳೆಗಳಿಗೆ ಆಹಾರವಾಗಿದ್ದಾನೆ. ಗುಡೂರಿ ಬಸವಲಿಂಗಪ್ಪ (55) ಮೃತ ವ್ಯಕ್ತಿ.
ಬಸವಲಿಂಗಪ್ಪ ದಿನ ನಿತ್ಯದಂತೆ ತನ್ನ ಕುರಿಗಳನ್ನು ಮೇಯಿಸಲು ನದಿ ತೀರದ ಪ್ರದೇಶಕ್ಕೆ ಹೋಗಿದ್ದ. ಮಧ್ಯಾಹ್ನದ ವೇಳೆಗೆ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ. ಕುರಿಗಳಿಗೆ ನೀರುಣಿಸಿ ನಂತರ ನದಿ ದಂಡೆಯಲ್ಲಿ ಕುಳಿತು ಊಟ ಮಾಡಿ ನೀರು ಕುಡಿಯಲು ನದಿಗೆ ಇಳಿದ ವೇಳೆ ಎರಡು ಮೊಸಳೆಗಳು ಏಕಾಏಕಿ ದಾಳಿ ಮಾಡಿ ಆತನನ್ನು ಏಳೆದೊಯ್ದಿವೆ.
ಮೊಸಳೆ ಜತೆ ಸತತ 10-15 ನಿಮಿಷ ಕಾದಾಡಿ ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ. ಇದನ್ನು ನೋಡಿದ ಆತನ ಸಹಚರ ವೃದ್ಧನಾದ ಪರಿಣಾಮ ಸಹಾಯ ಮಾಡಲು ಸಾಧ್ಯವಾಗಿಲ್ಲ. ಆತ ಗ್ರಾಮಕ್ಕೆ ತೆರಳಿ ಮಾಹಿತಿ ನೀಡಿದ.
ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಮತ್ತು ಸ್ಥಳೀಯ ಮೀನುಗಾರರು ಮೊಸಳೆಗಳಿಂದ ಬಸವಲಿಂಗಪ್ಪನನ್ನು ಉಳಿಸಿಕೊಳ್ಳಲು ಯತ್ನಿಸಿದರು. ಅಷ್ಟರಲ್ಲಿಯೇ ಆತನ ಎಡಗೈ ಮತ್ತು ಬಲಗಾಲನ್ನು ಮೊಸಳೆಗಳು ತಿಂದಿದ್ದವು. ರಕ್ಷಣಾ ಕಾರ್ಯ ಪ್ರಯೋಜವಾಗದೆ ಆತ ಮೃತಪಟ್ಟಿದ್ದಾನೆ. ಸೈದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ