ಆರೋಗ್ಯ ಕಾರ್ಡ್ ಕಡ್ಡಾಯವಲ್ಲ
Team Udayavani, Apr 29, 2019, 3:00 AM IST
ಬೆಂಗಳೂರು: “ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ’ ಅಡಿಯಲ್ಲಿ ಚಿಕಿತ್ಸೆ ಪಡೆಯಲು ಆರೋಗ್ಯ ಕಾರ್ಡ್ ಕಡ್ಡಾಯವಲ್ಲ. ರೋಗಿಯು ತನ್ನ ಪಡಿತರ ಚೀಟಿ ಅಥವಾ ಆಧಾರ್ ಕಾರ್ಡ್ ಸಲ್ಲಿಸಿ ಚಿಕಿತ್ಸೆ ಪಡೆಯಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಈ ಯೋಜನೆಯಡಿ ಬಿಪಿಎಲ್ ಕಾರ್ಡುದಾರರು ಉಚಿತವಾಗಿ ಹಾಗೂ ಎಪಿಎಲ್ ಕಾರ್ಡುದಾರರು ಶೇ.30ರಷ್ಟು ಚಿಕಿತ್ಸಾ ವೆಚ್ಚ ಭರಿಸುವ ಮೂಲಕ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ನೋಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ಈ ಯೋಜನೆಯಡಿ ಆರೋಗ್ಯ ಸೇವೆ ಪಡೆಯಲು “ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ ಕಾರ್ಡ್ ಕಡ್ಡಾಯ ಇರುವುದಿಲ್ಲ.
ರೋಗಿಯು ತನ್ನ ಪಡಿತರ ಚೀಟಿ ಅಥವಾ ಆಧಾರ್ ಕಾರ್ಡ್ ಸಲ್ಲಿಸಿ ಸೇವೆ ಪಡೆಯಬಹುದಾಗಿದೆ. ಆದಾಗ್ಯೂ ಯೋಜನೆಯ ಸೇವೆಗಳು ಸುಲಲಿತವಾಗಿ ಹಾಗೂ ಸುಲಭವಾಗಿ ದೊರೆಯಲಿ ಎಂಬ ಉದ್ದೇಶದಿಂದ “ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ’ ಕಾರ್ಡ್ ವಿತರಿಸಲಾಗುತ್ತಿದೆ.
ರಾಜ್ಯದ ಎಲ್ಲ ಸರ್ಕಾರಿ ವೈದ್ಯಕೀಯ ಕಾಲೇಜು, ಜಿಲ್ಲಾ ಆಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 10 ರೂ.ಶುಲ್ಕದೊಂದಿಗೆ ಎ4 ಹಾಳೆಯಲ್ಲಿ ಕುಟುಂಬದ ಮಾಹಿತಿ ಮುದ್ರಿಸಿ ಕಾರ್ಡ್ ನೀಡಲಾಗುತ್ತಿದೆ.
ಇವುಗಳ ಜತೆಗೆ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳು ಮತ್ತು ಸೇವಾ ಸಿಂಧು ಕೇಂದ್ರಗಳ ಮುಖಾಂತರ 10 ರೂ.ಶುಲ್ಕ ನೀಡಿ ಎ4 ಹಾಳೆಯಲ್ಲಿ ಅಥವಾ 35 ರೂ.ಶುಲ್ಕ ನೀಡಿ ಪಿವಿಸಿ ಕಾರ್ಡ್ ಪಡೆಯಬಹುದಾಗಿದೆ.
ಒಂದು ವೇಳೆ, ಕಾರ್ಡ್ಗೆ ಹೆಚ್ಚಿನ ಶುಲ್ಕ ಪಡೆದರೆ ಅಥವಾ ಕಾರ್ಡ್ ಇಲ್ಲವೆಂದು ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದರೆ ಇಲಾಖೆಗೆ ದೂರು ಸಲ್ಲಿಸಬಹುದು. ಇಲಾಖೆಯ ಸಹಾಯವಾಣಿ 104 ಹಾಗೂ “[email protected] / [email protected] / [email protected] ಗೆ ದೂರು ಸಲ್ಲಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ