ಸಮಸ್ಯೆ ಈಗಿಲ್ಲ; ನೀರು ಮಿತ ಬಳಕೆಗೆ ಸಕಾಲ


Team Udayavani, Apr 29, 2019, 9:32 AM IST

puthur-1-tdy..

ಕುಮಾರಧಾರಾ ನದಿಗೆ ಕಟ್ಟಿರುವ 34ನೇ ನೆಕ್ಕಿಲಾಡಿ ಅಣೆಕಟ್ಟಿನಲ್ಲಿ ಶೇಖರಣೆಗೊಂಡಿರುವ ನೀರು.

 

ಪುತ್ತೂರು ಎ. 28: ಪುತ್ತೂರು ನಗರ ವ್ಯಾಪ್ತಿಗೆ ನೀರು ಪೂರೈಕೆ ಪ್ರಧಾನ ವ್ಯವಸ್ಥೆ ಯಾದ ಕುಮಾರಧಾರಾ ನದಿಯ ನೆಕ್ಕಿಲಾಡಿ ಕಿಂಡಿ ಅಣೆಕಟ್ಟಿನಲ್ಲಿ 630 ಮಿಲಿಯನ್‌ ಲೀಟರ್‌ ನೀರು ಶೇಖರಣೆಗೊಂಡಿದೆ. ಮುಂದಿನ ಒಂದು ತಿಂಗಳಿಗೆ ಶೇಖರಣೆ ಯಾದ ನೀರು ಸಾಕಾಗುತ್ತದೆ. ಈ ನಡುವೆ ಕುಮಾರಧಾರಾ ನದಿ ಮೂಲ ಭಾಗಗಳಲ್ಲಿ ಮಳೆಯಾಗಿರುವುದರಿಂದ ನೀರಿನ ಮಟ್ಟ ಏರಿಕೆ ಕಂಡಿದೆ.

80 ಲಕ್ಷ ಲೀ. ನೀರು ಆವಶ್ಯ:

ಪುತ್ತೂರು ನಗರಸಭೆಯ ವ್ಯಾಪ್ತಿಯಲ್ಲಿ ಸುಮಾರು 60 ಸಾವಿರ ಜನಸಂಖ್ಯೆಯಿದೆ. ಪ್ರತೀ ದಿನ 80 ಲಕ್ಷ ಲೀ. (8 ಮಿ.ಲೀ.) ನೀರಿನ ಆವಶ್ಯಕತೆ ಇಲ್ಲಿದೆ. ಇದನ್ನು ಪೂರೈಸಲು 10,700 ನೀರು ಸಂಪರ್ಕ ಗಳನ್ನು ನೀಡಲಾಗಿದೆ. ಇದರ ಜತೆಗೆ 34 ಶಿಕ್ಷಣ ಸಂಸ್ಥೆಗಳು, ಅಂಗನವಾಡಿ ಕೇಂದ್ರಗಳು ಸಂಪರ್ಕ ಪಡೆದಿವೆ. ಕಾಲನಿ ಪ್ರದೇಶಗಳಲ್ಲಿ ಅಂದಾಜು 500 ನಳ್ಳಿ ಸಂಪರ್ಕಗಳಿವೆ.

ಸುಮಾರು 75 ಲಕ್ಷ ಲೀಟರ್‌ (7.5 ಮಿ.ಲೀ.) ನೀರು ಉಪ್ಪಿನಂಗಡಿ ಕುಮಾರ ಧಾರಾ ನದಿಯಿಂದ ನೆಕ್ಕಿಲಾಡಿ ರೇಚಕ ಸ್ಥಾವರದ ಮೂಲಕ ನಗರಸಭಾ ವ್ಯಾಪ್ತಿಗೆ ಪೂರೈಕೆಯಾಗುತ್ತದೆ. ಉಳಿದ ನೀರನ್ನು ಬೋರ್‌ವೆಲ್ಗಳಿಂದ ಪಡೆಯಲಾಗುತ್ತಿದೆ. ನಗರಸಭಾ ವ್ಯಾಪ್ತಿಯಲ್ಲಿ ಒಟ್ಟು 144 ಬೋರ್‌ವೆಲ್ಗಳಿವೆ.

 

ಪುತ್ತೂರು ನಗರ ನೀರು ಸರಬರಾಜು ಯೋಜನೆಯ ರೇಚಕ ಯಂತ್ರ ಸ್ಥಾವರ 34ನೇ ನೆಕ್ಕಿಲಾಡಿ ಗ್ರಾಮದಲ್ಲಿ ಕುಮಾರ ಧಾರಾ ನದಿ ದಂಡೆಯ ಬಳಿ ಇದೆ. ಇಲ್ಲಿ 35 ಅಶ್ವಶಕ್ತಿಗಳ 3 ಪಂಪ್‌ಗ್ಳಿವೆ. ಇಲ್ಲಿಂದ ಸುಮಾರು 12 ಕಿ.ಮೀ. ದೂರದ ಪುತ್ತೂರು ನಗರಕ್ಕೆ ದಿನಂಪ್ರತಿ 70 ಲಕ್ಷ ಲೀ. ನೀರು ಸರಬರಾಜಾಗುತ್ತಿದೆ. ನೀರು ಸರಬರಾಜು ವ್ಯವಸ್ಥೆಯ ರೇಚಕ ಯಂತ್ರ ಸ್ಥಾವರಕ್ಕೆ ಪುತ್ತೂರು ಉಪವಿದ್ಯುತ್‌ ಕೇಂದ್ರದಿಂದ 11 ಕೆ.ವಿ. ಸಾಮರ್ಥ್ಯದ ಎಕ್ಸ್‌ಪ್ರೆಸ್‌ ಫೀಡರ್‌ ಲೈನ್‌ ಎಳೆಯಲಾಗಿದೆ.

ಮಂಗಳೂರಿಗೆ ಬೇಕಾದರೆ?:

2016ನೇ ಸಾಲಿನ ಬೇಸಗೆಯಲ್ಲಿ ಮಂಗಳೂರು ನಗರದಲ್ಲಿ ನೀರಿಗೆ ಸಮಸ್ಯೆ ಉಂಟಾದಾಗ ನೆಕ್ಕಿಲಾಡಿ ಅಣೆಕಟ್ಟಿನಿಂದ ನೀರು ಹರಿಸಲು ಜಿಲ್ಲಾಧಿಕಾರಿ ಆದೇಶಿಸಿ ದ್ದರು. ಆಗ ಪುತ್ತೂರಿಗೂ ನೀರಿನ ಕೊರತೆ ಯಾಗುವ ಭೀತಿ ಎದುರಾಗಿತ್ತು. ಆದರೆ ಕೆಲವೇ ದಿನಗಳಲ್ಲಿ ಘಟ್ಟ ಭಾಗದಲ್ಲಿ ಮಳೆಯಾಗಿ ಸಮಸ್ಯೆ ನಿವಾರಣೆಯಾಗಿತ್ತು. ಈ ಬಾರಿಯೂ ಮಂಗಳೂರು ನಗರ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಉಂಟಾದರೆ ಮತ್ತು ನೆಕ್ಕಿಲಾಡಿಯಿಂದ ನೀರು ಹರಿಸುವುದು ಅನಿವಾರ್ಯದರೆ ಮಾತ್ರ ಪುತ್ತೂರು ಭಾಗಕ್ಕೂ ಸಮಸ್ಯೆಯಾಗಲಿದೆ.

ಬೇಸಿಗೆಯಲ್ಲಿ ಉಂಟಾಗುವ ನೀರಿನ ಕೊರತೆಯ ಬಗ್ಗೆ ವರದಿ ಮಾಡಿ ಅದಕ್ಕೆ ಶಾಶ್ವತ ಪರಿಹಾರ ಒದಗಿಸುವಲ್ಲಿ ‘ಉದಯವಾಣಿ-ಸುದಿನ’ ಮುಂದಾಗಿದ್ದು ಇದಕ್ಕೆ ಅನುಗುಣವಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಜನರು ಅನುಭವಿಸುತ್ತಿರುವ ನೀರಿನ ಬವಣೆಗಳನ್ನು ತಿಳಿಸುವ ಒಂದು ಪ್ರಯತ್ನ.

ನೆಕ್ಕಿಲಾಡಿ ಅಣೆಕಟ್ಟಿನ ತಳಭಾಗದಲ್ಲಿ ನೀರಿನ ಸೋರಿಕೆ ಹಲವು ವರ್ಷಗಳಿಂದ ಇದೆ. ಸಣ್ಣಪುಟ್ಟ ಪರ್ಯಾಯ ವ್ಯವಸ್ಥೆಗಳನ್ನು ಮಾಡಿದ್ದರೂ ಸೋರಿಕೆಯನ್ನು ತಡೆಗಟ್ಟಲು ಸಾಧ್ಯವಾಗಿಲ್ಲ. ಇದರ ಜತೆಗೆ ಡ್ಯಾಂ ವ್ಯಾಪ್ತಿಯಲ್ಲಿ ಅನಧಿಕೃತ ಪಂಪ್‌ಗ್ಳಿಂದ ನೀರು ಮೇಲಕ್ಕೆತ್ತುವ ಕಾರ್ಯವೂ ನಡೆ ಯುತ್ತಿದೆ. ಕೃಷಿ ಹಾಗೂ ಇತರ ವಾಣಿಜ್ಯ ಚಟುವಟಿಕೆಗೆ ನದಿ ನೀರಿನ ಬಳಕೆ ನಿಷಿದ್ಧವಿದ್ದರೂ ಕದ್ದು ಮುಚ್ಚಿ ಪಂಪ್‌ ಅಳವಡಿಸಿ ನೀರು ಸರಬರಾಜು ಮಾಡಲಾಗುತ್ತಿದೆ ಎನ್ನುವ ಆರೋಪವೂ ಇದೆ.

 

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

10

Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.