ಕುಕ್ಕೆ: ಕುಮಾರ ಸಂಸ್ಕಾರ ಆಂದೋಲನ ಯಶಸ್ವಿ

ತ್ಯಾಜ್ಯ ರಾಶಿ, ಮದ್ಯದ ಬಾಟಲಿ ತೆರವು

Team Udayavani, Apr 29, 2019, 10:14 AM IST

puthur-4..04

ನದಿಯಲ್ಲಿನ ತ್ಯಾಜ್ಯಗಳನ್ನು ತೆರವುಗೊಳಿಸಿದ ತಂಡ ಸದಸ್ಯರು

ಸುಬ್ರಹ್ಮಣ್ಯ ಎ. 28: ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಪ್ರಮುಖ ಎರಡು ಪುಣ್ಯ ನದಿಗಳ ಸಹಿತ ಕ್ಷೇತ್ರವನ್ನು ಸ್ವಚ್ಛಗೊಳಿಸುವ ಯುವ ಬ್ರಿಗೇಡ್‌ ಆಂದೋಲನ ‘ಕುಮಾರ ಸಂಸ್ಕಾರ’ ರವಿವಾರ ಯಶಸ್ವಿಯಾಗಿ ಪೂರ್ಣಗೊಂಡಿತು. ಕ್ಷೇತ್ರದ ಪ್ರಮುಖ ನದಿಗಳು ಸಹಿತ ಪರಿಸರದಲ್ಲಿ ಸ್ವಚ್ಛತಾ ಆಂದೋಲನದ ವೇಳೆ ಹತ್ತಕ್ಕೂ ಅಧಿಕ ಟನ್‌ ತ್ಯಾಜ್ಯ ಸಂಗ್ರಹವಾಗಿದೆ.

ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ ಯುವ ಬ್ರಿಗೇಡ್‌ ಕಾರ್ಯಕರ್ತರು ಚಕ್ರವರ್ತಿ ಸೂಲಿಬೆಲೆ ಅವರ ನೇತೃತ್ವದಲ್ಲಿ ಎರಡು ದಿನಗಳ ಕಾಲ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರಾ ಹಾಗೂ ದರ್ಪಣತೀರ್ಥ ನದಿಗಳನ್ನು ಹಾಗೂ ದೇಗುಲದ ಪರಿಸರವನ್ನು ಸ್ವಚ್ಛಗೊಳಿಸಿದರು. ಸೋದರಿ ನಿವೇದಿತಾ ಪ್ರತಿಷ್ಠಾನ ಹಾಗೂ ನಮ್ಮ ಸುಬ್ರಹ್ಮಣ್ಯ ಯುವ ಸಂಘಟನೆಯ ಕಾರ್ಯಕರ್ತರು ಸ್ವಚ್ಛತೆಯಲ್ಲಿ ತೊಡಗಿಕೊಂಡಿದ್ದರು.

ರವಿವಾರ ಬೆಳಗ್ಗೆ ದೇವಸ್ಥಾನದ ಸುತ್ತ ಮುತ್ತಲ ಪ್ರದೇಶ ಹಾಗೂ ರಥಬೀದಿಯಿಂದ ಕುಮಾರಧಾರಾ ತನಕ ಪ್ಲಾಸ್ಟಿಕ್‌ ಬಾಟಲಿ, ಬಟ್ಟೆ, ಗುಟ್ಕಾ ಚೀಟಿಗಳು ಇತ್ಯಾದಿ ಕಸ ಹೆಕ್ಕಿ ಪರಿಸರವನ್ನು ಸ್ವಚ್ಛಗೊಳಿಸಲಾಯಿತು. ಸಾರ್ವಜನಿಕ ಸ್ಥಳ, ವಾಹನ ಪಾರ್ಕಿಂಗ್‌ ಹಾಗೂ ಮುಖ್ಯ ರಸ್ತೆಯಲ್ಲಿ ಬರುವ ಬಸ್‌ ತಂಗುದಾಣಗಳನ್ನು ಕಾರ್ಯಕರ್ತರು ತೊಳೆದು ಶುಚಿಗೊಳಿಸಿದರು.

ಕ್ಷೇತ್ರಕ್ಕೆ ಆಗಮಿಸುವ ಭಕ್ತರು ಕುಮಾರ ಧಾರಾ ಹಾಗೂ ದರ್ಪಣತೀರ್ಥ ನದಿ ಯಲ್ಲಿ ಪುಣ್ಯ ಸ್ನಾನ ಮಾಡಿ ನದಿಗೆ ತ್ಯಾಜ್ಯಗಳನ್ನು ಹಾಕುತ್ತಿದ್ದರು.

ಭಕ್ತರು ಎಸೆದ ಫೋಟೋಗಳನ್ನು, ತೆಂಗಿನಕಾಯಿ, ಸ್ನಾನ ಮಾಡಿ ಬಿಟ್ಟ ಬಟ್ಟೆಗಳು, ಸಾಬೂನು, ಕನ್ನಡಿ, ಚಾಚಣಿಕೆ, ಟೂತ್‌ ಬ್ರಶ್‌, ಚಪ್ಪಲಿಗಳು, ಮಕ್ಕಳ ಆಟಿಕೆಗಳು ಇತ್ಯಾದಿ ವಸ್ತುಗಳನ್ನು ತೆಗೆದು ರಾಶಿ ಹಾಕಿದರು.

ತಾಜ್ಯ ಹಾಕಬೇಡಿ:

ನದಿಗಳಿಗೆ ತ್ಯಾಜ್ಯ ಹಾಕಬಾರದು. ಭಕ್ತರು ಮೂಢನಂಬಿಕೆಗಳಿಗೆ ಒಳಗಾಗದೆ ಎಚ್ಚರಿಕೆ ಮತ್ತು ಹೊಣೆಗಾರಿಕೆಯಿಂದ ವರ್ತಿಸಬೇಕು. ಸ್ನಾನ ಮಾಡಿ ನದಿ ನೀರಿನಲ್ಲಿ ಬಟ್ಟೆ ಒಗೆಯುವುದು, ನೀರಿನಲ್ಲಿ ತ್ಯಾಜ್ಯ ವಸ್ತುಗಳನ್ನು ಬಿಡುವುದನ್ನು ನಿಲ್ಲಿಸಿ ಪಾವಿತ್ರ್ಯ ಕಾಪಾಡಬೇಕು. ಕ್ಷೇತ್ರವನ್ನು ಅಪವಿತ್ರಗೊಳಿಸುವ ಯಾವುದೇ ಚಟುವಟಿಕೆಯನ್ನು ಕ್ಷೇತ್ರದ ವ್ಯಾಪ್ತಿಯಲ್ಲಿ ಮಾಡಬಾರದು ಎಂದು ಯುವ ಬ್ರಿಗೇಡ್‌ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಮನವಿ ಮಾಡಿದರು.

ಕ್ಷೇತ್ರದ ಎರಡು ಪುಣ್ಯ ನದಿಗಳನ್ನು ಸ್ವಚ್ಛಗೊಳಿಸಿದ್ದೇವೆ. ಈ ವೇಳೆ ವಸತಿಗೃಹಗಳ ಮಲೀನ ನೀರನ್ನು ನದಿಗೆ ಬಿಡುತ್ತಿರುವುದು ಕಂಡು ಬಂದಿದೆ. ಇದಕ್ಕೆಲ್ಲ ನಿಯಂತ್ರಣ ಅಗತ್ಯ ಎಂದು ಅಭಿಪ್ರಾಯಪಟ್ಟರು.

ಯುವ ಬ್ರಿಗೇಡ್‌ ರಾಜ್ಯ ಸಂಚಾಲಕ ಚಂದ್ರಶೇಖರ ಬೆಂಗಳೂರು, ಜಿಲ್ಲಾ ಸಂಚಾಲಕ ತಿಲಕ್‌ ಶಿಶಿಲ, ತಾಲೂಕು ಸಂಚಾಲಕ ಶರತ್‌, ಸುಳ್ಯ, ಸುಬ್ರಹ್ಮಣ್ಯ ಯುವ ಬ್ರಿಗೇಡ್‌ ಕಾರ್ಯಕರ್ತರು, ಸ್ವಯಂಸೇವಕರು ಉಪಸ್ಥಿತರಿದ್ದರು. ಬೆಂಗಳೂರು. ಮಡಿಕೇರಿ, ಮೈಸೂರು ಮೊದಲಾದ ಕಡೆಗಳಿಂದ ಕಾರ್ಯಕರ್ತರು ಆಗಮಿಸಿದ್ದರು.

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಿಂದ ಸ್ವಚ್ಛತಾ ಕಾರ್ಯಕ್ಕೆ ಪೂರ್ಣ ಸಹಕಾರ ಹಾಗೂ ಕಾರ್ಯಕರ್ತರಿಗೆ ಎರಡು ದಿನ ಊಟ, ವಸತಿ ಹಾಗೂ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಸ್ಥಳಿಯ ಗ್ರಾ.ಪಂ. ಕೂಡ ಸಹಕಾರ ನೀಡಿತ್ತು.

ಸ್ವಚ್ಛಗೊಳಿಸುವ ವೇಳೆ ಅಪಾರ ಪ್ರಮಾಣದ ತ್ಯಾಜ್ಯದ ಜತೆ 2 ಸಾವಿರಕ್ಕೂ ಹೆಚ್ಚು ಮದ್ಯದ ಬಾಟಲಿಗಳು ದೊರಕಿವೆ. ಇದನ್ನು ಕಂಡು ದಿಗ್ಬ್ರಮೆ ವ್ಯಕ್ತಪಡಿಸಿದ ಯುವ ಬ್ರಿಗೇಡ್‌ ಕಾರ್ಯಕರ್ತರು ಇಷ್ಟು ಪ್ರಮಾಣದಲ್ಲಿ ಮದ್ಯದ ಬಾಟಲಿಗಳು ಎರಡು ದಿನಗಳ ಸ್ವಚ್ಛತೆ ಕಾರ್ಯದ ವೇಳೆ ಸಿಕ್ಕಿವೆ. ಪವಿತ್ರ ಕ್ಷೇತ್ರದಲ್ಲೂ ದುಶ್ಚಟಗಳನ್ನು ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಇಲ್ಲಿ ದೊರಕಿರುವ ಮದ್ಯದ ಬಾಟಲಿಗಳೇ ಇದಕ್ಕೆ ಸಾಕ್ಷಿ. ಪುಣ್ಯಕ್ಷೇತ್ರಗಳು ಈ ರೀತಿ ಅಪವಿತ್ರವಾಗುತ್ತಿರುವುದು ಕಳವಳಕಾರಿ ಎಂದರು.

ಜಾಗೃತಿ ಕರಪತ್ರ:

ನದಿ ಹಾಗೂ ಪರಿಸರ ಸ್ವಚ್ಛಗೊಳಿಸಿದ ಕಾರ್ಯಕರ್ತರು ಅದರ ಜತೆ ರವಿವಾರ ಸ್ಥಳಿಯರಲ್ಲಿ ಹಾಗೂ ಭಕ್ತರಲ್ಲಿ ಜಾಗೃತಿ ಮೂಡಿಸಿದರು. ಯುವ ಬ್ರಿಗೇಡ್‌ ಕುಕ್ಕೆ ಸುಬ್ರಹ್ಮಣ್ಯ ಸಿದ್ಧಪಡಿಸಿದ ಕರಪತ್ರಗಳನ್ನು ಅಂಗಡಿಮುಂಗಟ್ಟುಗಳಿಗೆ, ಭಕ್ತರಿಗೆ ಕಾರ್ಯಕರ್ತರು ಹಂಚಿ ಸ್ವಚ್ಛತೆಯ ಪಾಠ ಬೋಧಿಸಿದರು.

ಟಾಪ್ ನ್ಯೂಸ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.