ಮುಳಬಾಗಿಲಲ್ಲಿ ಕೆರೆ ಒತ್ತುವರಿ ತೆರವಿಗೆ ಗ್ರಹಣ
Team Udayavani, Apr 29, 2019, 10:28 AM IST
ಮುಳಬಾಗಿಲು: ಎ.ಟಿ.ರಾಮಸ್ವಾಮಿ ಮತ್ತು ಬಾಲಸುಬ್ರಮಣ್ಯಂ ವರದಿಗಳ ಅನ್ವಯ ರಾಜ್ಯ ಉಚ್ಚನ್ಯಾಯಾಲಯ ಆದೇಶದಂತೆ ಸರ್ಕಾರಿ ಭೂಮಿಗಳ ಒತ್ತುವರಿ ತಡೆಗಟ್ಟಲು ಮತ್ತು ತೆರವುಗೊಳಿಸಲು ರಚಿಸಲಾಗಿದ್ದ ಯೋಜನೆ ತಾಲೂಕಿ ನಲ್ಲಿ ಕಳೆದ 4-5 ವರ್ಷಗಳಿಂದ ಗ್ರಹಣ ಹಿಡಿದಿದೆ.
ಸರ್ಕಾರಿ ಭೂಮಿಗಳ ಒತ್ತುವರಿ ತಡೆಗಟ್ಟಲು ರಾಜ್ಯ ಸರ್ಕಾರ ಕರ್ನಾಟಕ ಭೂ ಕಂದಾಯ ಕಾಯ್ದೆ 1964ಕ್ಕೆ ತಿದ್ದುಪಡಿ ತಂದು 192ಎ ಅನ್ವಯ ಒತ್ತುವರಿದಾರರನ್ನು ಶಿಕ್ಷೆಗೆ ಗುರಿಪಡಿಸಲು ಕಾಯ್ದೆಯಲ್ಲಿ ಈಗಾಗಲೇ ಅವಕಾಶ ಕಲ್ಪಿಸಲಾಗಿತ್ತು. ಸರ್ಕಾರಿ ಭೂಮಿಗಳ ಒತ್ತುವರಿ ತಡೆಗಟ್ಟಲು ಎ.ಟಿ.ರಾಮಸ್ವಾಮಿ ಮತ್ತು ಬಾಲಸುಬ್ರಮಣ್ಯಂ ವರದಿಗಳ ಅನ್ವಯ ನ್ಯಾಯಾಲಯದ ಆದೇಶದಂತೆ ಸರ್ಕಾರಿ ಭೂಮಿಗಳ ಸಂರಕ್ಷಣೆ ಮತ್ತು ಒತ್ತುವರಿ ಜಮೀನು ತೆರವುಗೊಳಿಸಲು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಿ.ಲತಾ ಕೃಷ್ಣರಾವ್ 2013ರ ಮೇ 27 ರಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದರು.
ಅದರಂತೆ ಮೂಲಭೂತವಾಗಿ ಕಂದಾಯ ಇಲಾಖೆ ಸರ್ಕಾರದ ಭೂಮಿ ಗುರ್ತಿಸಿ ಅದರ ವಿಸ್ತೀರ್ಣ ಅಳತೆ ಮಾಡಿ ಒತ್ತುವರಿ ತೆರವುಗೊಳಿಸಲು ಸರ್ಕಾರ ಕಳೆದ ವರ್ಷ ಸುತ್ತೋಲೆ ಹೊರಡಿಸಿತ್ತು. ಅದರಂತೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಅಂದಿನ ಮುಳಬಾಗಿಲು ತಹಶೀಲ್ದಾರ್ ಎಂ.ಗಂಗಪ್ಪ, ತಾಲೂಕಿನ ಆವಣಿ, ಕಸಬಾ, ತಾಯಲೂರು, ಬೈರಕೂರು, ದುಗ್ಗಸಂದ್ರ ಸೇರಿ 5 ಹೋಬಳಿಯಲ್ಲಿನ 433 ಕೆರೆ, ಸ್ಮಶಾನ, ಗುಂಡು ತೋಪು ಒತ್ತುವರಿ ತೆರವುಗೊಳಿಸಲು ಅಧೀನ ಅಧಿಕಾರಿಗಳಿಗೆ ಸೂಚಿಸಿ ತಾವೂ ಕಾರ್ಯಪ್ರವೃತ್ತರಾಗಿದ್ದರು. ಅಲ್ಲದೇ, ತೆರವು ಕಾರ್ಯಾಚರಣೆ ಚುರುಕುಗೊಳಿಸಿದ್ದರು.
ಅದರಂತೆ ಇದುವವರೆಗೂ 211 ಕೆರೆಗಳಲ್ಲಿನ 366 ಎಕರೆ ಜಮೀನನ್ನು ತೆರವುಗೊಳಿಸಿ 81 ಜನರ ವಿರುದ್ಧ ಕ್ರಿಮಿನಲ್ ಮೊಕದೊಮ್ಮೆ ದಾಖಲಿಸುವ ಮೂಲಕ ಶೇ.75 ಕಾರ್ಯಾಚರಣೆ ಮುಗಿಸಿದ್ದರು. ಉಳಿದ ಶೇ.25 ಕೆಲಸ ಬಾಕಿ ಉಳಿದಿತ್ತು. ನಂತರ ಜಿಲ್ಲಾಧಿಕಾರಿ ತ್ರಿಲೋಕ್ಚಂದ್ರ ಅವರು ಒತ್ತುವರಿ ತೆರವು ಕಾರ್ಯಾಚರಣೆ ವರದಿಯನ್ನು ಕಳೆದ ಫೆ.15ರಂದು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿರುವುದರಿಂದ ಎಲ್ಲಾ ಕೆರೆಗಳನ್ನು ತೆರವುಗೊಳಿಸಲು ಸೂಚಿಸಿದ್ದರು. ಅದರಂತೆ ಹಿಂದಿನ ತಹಶೀಲ್ದಾರ್ ಉಳಿದ 83 ಕೆರೆಗಳ ಸರ್ವೆಗೆ ಸಿಬ್ಬಂದಿಯನ್ನು ಕಾರ್ಯಾಚರಣೆಗೆ ನಿಯೋಜಿಸಿದ್ದರು. ಅದರಂತೆ ಕೆಲವು ಕೆರೆಗಳನ್ನು ಸರ್ವೆ ಮಾಡಿದ್ದರೂ ತೆರವು ಕಾರ್ಯಾಚರಣೆ ಮಾಡದ ಕಾರಣ ಮತ್ತಷ್ಟು ಜಮೀನು ಒತ್ತುವರಿಯಾಗುತ್ತಿದೆ.
ನನೆಗುದಿಗೆ: ಕಳೆದ 4-5 ವರ್ಷದಿಂದ ತಾಲೂಕಿಗೆ ಹಲವಾರು ತಹಶೀಲ್ದಾರ್ಗಳು ತಾಲೂಕಿಗೆ ಬಂದರೂ ಯೋಜನೆ ಕುರಿತು ಕಿಂಚಿತ್ತೂ ಗಮನಹರಿಸದೇ ಕಾಲಹರಣ ಮಾಡಿದ್ದಾರೆ. ಸರ್ಕಾರದ ಮತ್ತು ಜಿಲ್ಲಾಧಿಕಾರಿ ಡಿ.ಕೆ.ರವಿ ಅವರ ಕನಸಿನ ಯೋಜನೆ ತಾಲೂಕು ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ನನೆಗುದಿಗೆ ಬೀಳುತ್ತಿದೆ.
● ಸಂಗಸಂದ್ರ ವಿಜಯಕುಮಾರ್, ದಸಂಸ(ಸಂಯೋಜಕ) ರಾಜ್ಯ ಸಂಘಟನಾ ಸಂಚಾಲಕ ವರದಿ ಬಳಿಕ ಕ್ರಮ ತೆರವುಗೊಳಿಸದೇ ಬಾಕಿ ಉಳಿದಿರುವ ಕೆರೆಗಳ ವಿವರ ಸಲ್ಲಿಸಲು 2 ತಿಂಗಳ ಹಿಂದೆ ತಹಶೀಲ್ದಾರ್ರಿಗೆ ಸೂಚಿಸಲಾಗಿದೆ. ಈ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ