ಗಣಿಗಾರಿಕೆ ಅಟ್ಟಹಾಸದಿಂದ ಕರಗಿದ ಗುಡ್ಡಗಳು


Team Udayavani, Apr 29, 2019, 11:39 AM IST

gudda

ತುಮಕೂರು : ಜಿಲ್ಲಾದ್ಯಂತ ನಡೆಯುತ್ತಿದ್ದ ಗಣಿಗಾರಿಕೆ ಅಟ್ಟಹಾಸದಿಂದ ಗೋಮಾಳ ಗುಡ್ಡಗಳೇ ಕರಗಿ ಹೋಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಣಿ, ಪಕ್ಷಿ ಗಳಿಗೆ ಆಶ್ರಯವಾಗಿದ್ದ ಗುಂಡು ತೋಪುಗಳು ಭೂಗಳ್ಳರ ಕಪಿಮುಷ್ಠಿಗೆ ಸಿಲುಕಿವೆ. ಈಗ ಸಾವಿರಾರು ವರ್ಷಗಳಿಂದ ಜನ ಜಾನುವಾರುಗಳಿಗೆ ನೀರು ಒದಗಿಸುವ ತಾಣವಾಗಿದ್ದ ಕೆರೆ ಕಟ್ಟೆಗಳನ್ನೂ ಕಬಳಿಸಲು ಭೂಮಾಫಿಯಾಗಳು ಸಂಚು ನಡೆಸುತ್ತಿರುವುದು ಬಯಲಾಗುತ್ತಿದೆ.

ಕೆರೆ ಕಟ್ಟೆಗಳನ್ನು ರಕ್ಷಿಸಿ ಅಂತರ್ಜಲ ವೃದ್ಧಿಗೊಳಿಸಿ ನೀರು ಶೇಖರಿಸಿ ಎನ್ನುವ ಘೋಷವಾಕ್ಯಗಳು ಎಲ್ಲೆಡೆ ರಾರಾಜಿಸುತ್ತವೆ. ಬಿದ್ದ ಮಳೆ ನೀರು ಹರಿದು ಹೋಗದೇ ಶೇಖರಿಸಿ ಭೂಮಿಗೆ ಇಂಗಿಸುವ ಕೆಲಸ ಮಾಡಿ ಅಂತರ್ಜಲ ಹೆಚ್ಚು ಮಾಡಿ ಎಂದು ಪ್ರಚಾರ ಗಳು ನಡೆಯುತ್ತಲೇ ಇವೆ.

ಭೂಗಳ್ಳರ ಪಾಲು: ಒಂದು ಕಾಲದಲ್ಲಿ ಕೆರೆ ಕಟ್ಟೆಗಳನ್ನು ಕಟ್ಟಿಸಿ ಜನ ಜಾನುವಾರುಗಳಿಗೆ ನೀರು ಒದಗಿಸಿದರೆ ಅದು ನಮ್ಮ ಪುಣ್ಯದ ಕೆಲಸ ಎಂದು ಭಾವಿಸುತ್ತಿದ್ದ ದಿನಗಳೂ ಇದ್ದವು. ಅದಕ್ಕಾಗಿ ಹಲವರು ಕೆರೆ ಕಟ್ಟೆ ಗಳನ್ನು ಕಟ್ಟಿಸಿದ್ದಾರೆ. ಬಾವಿ, ಕಲ್ಯಾಣಿ ನಿರ್ಮಿಸಿರುವ ಬಗ್ಗೆ ಇತಿಹಾಸದಿಂದ ತಿಳಿದು ಬರುತ್ತದೆ.

ಸಾರ್ವಜನಿಕ ಸಂಪತ್ತು ನಮ್ಮದಲ್ಲ ಅದು ಎಲ್ಲ ಜನರಿಗೆ ಸೇರಿದ್ದು, ಕೆರೆ, ಕಟ್ಟೆಗಳು, ಗುಂಡು ತೋಪು ಗಳು, ಗೋಮಾಳಗಳು ಸಾರ್ವಜನಿಕರ ಆಸ್ತಿ ಅದು ಸರ್ಕಾರಿ ಆಸ್ತಿ. ಇದನ್ನು ಯಾರೂ ಒತ್ತುವರಿ ಮಾಡು ವಂತಿಲ್ಲ, ಅಕ್ರಮವಾಗಿ ಪ್ರವೇಶಿಸುವಂತಿಲ್ಲ, ಈ ಆಸ್ತಿಗಳನ್ನು ಸಂರಕ್ಷಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಆದರೆ, ಇಂದು ಗೋಮಾಳಗಳು, ಗುಂಡು ತೋಪುಗಳು, ರಾಜಗಾಲುವೆಗಳು, ಕೆರೆಕಟ್ಟೆಗಳು, ಉದ್ಯಾನವನಗಳು ಭೂಗಳ್ಳರ ಪಾಲಾಗುತ್ತಿವೆ.

ಬರಗಾಲ ಪೀಡಿತ ಜಿಲ್ಲೆಯಾಗಿರುವ ಜಿಲ್ಲೆಯಲ್ಲಿ ಕೃಷಿ ಹಾಗೂ ಕುಡಿಯುವ ನೀರಿನ ಆಶ್ರಯ ತಾಣ ಗಳಾಗಿರುವ ಕೆರೆ, ಕಟ್ಟೆಗಳು ತುಂಬಿದ್ದರೆ ಇಡೀ ಜಿಲ್ಲೆಯಲ್ಲಿ ಸಮೃದ್ಧವಾದ ಮಳೆ ಬೆಳೆಯಾಗುತ್ತದೆ, ಅಂತರ್ಜಲವೂ ವೃದ್ಧಿಯಾಗಿ ಕುಡಿಯುವ ನೀರಿನ ಸಮಸ್ಯೆ ನೀಗುತ್ತದೆ.

ಎಲ್ಲೆಡೆ ಒತ್ತುವರಿ: ಆದರೆ, ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಸಮರ್ಪಕವಾಗಿ ಮಳೆ ಬೆಳೆಯಾಗದಿರಲು ಅಂತರ್ಜಲ ಮಟ್ಟ ಕುಸಿದಿರುವುದೇ ಮೂಲ ಕಾರಣ ವಾಗಿದೆ. ಇದಕ್ಕೆ ಕೆರೆ, ಕಟ್ಟೆಗಳಲ್ಲಿ ನೀರಿಲ್ಲದಿರುವುದು, ಇರುವ ಕೆರೆ, ಕಟ್ಟೆಗಳಿಗೆ ಹರಿದು ಬರುತ್ತಿದ್ದ, ರಾಜ ಕಾಲುವೆಗಳು, ಹಳ್ಳಗಳನ್ನು ಒತ್ತುವರಿ ಮಾಡಿರುವುದು. ಜೊತೆಗೆ ಕೆರೆ ಅಂಗಳವನ್ನು ಭೂಗಳ್ಳರು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿರುವುದೇ ಕೆರೆ, ಕಟ್ಟೆಗಳು ತುಂಬದೇ ಇರಲು ಕಾರಣವಾಗಿವೆ.

ಈ ಹಿಂದೆ ಇದ್ದ ಕೆರೆ ಅಂಗಳಗಳ ವಿಸ್ತೀರ್ಣಕ್ಕೂ ಇಂದು ಇರುವ ಕೆರೆ ಅಂಗಳಗಳಿಗೂ ಅಜಗಜಾಂತರ ವ್ಯತ್ಯಾಸಗಳು ಕಂಡು ಬರುತ್ತಿರುವುದಕ್ಕೆ ಕೆರೆ ಅಂಗಳಗಳನ್ನು ಒತ್ತುವರಿ ಮಾಡಿರುವುದೇ ಮೂಲ ಕಾರಣವಾಗಿದೆ.

ಕೈಗೊಂಡಿಲ್ಲ ಎನ್ನುವ ಆರೋಪ: ಸುಪ್ರೀಂಕೋರ್ಟ್‌ ಆದೇಶದಂತೆ ಯಾವುದೇ ಕೆರೆ ಕಟ್ಟೆ ಒತ್ತುವರಿ ಮಾಡುವಂತಿಲ್ಲ. ಇರುವ ಕೆರೆ, ಕಟ್ಟೆಗಳನ್ನು ಯಥಾಸ್ಥಿತಿ ಕಾಪಾಡಬೇಕು ಎನ್ನುವ ನಿಯಮವಿದೆ. ಅದೇ ರೀತಿ ಯಲ್ಲಿ ಭೂ ಕಂದಾಯ ಕಾಯ್ದೆ 192 (ಎ) ಪ್ರಕಾರ ಒತ್ತುವರಿ ದಾರನ ಮೇಲೆ 192 (ಬಿ) ಪ್ರಕಾರ ಒತ್ತುವರಿಗೆ ತೆರವು ಮಾಡದ ಅಧಿಕಾರಿ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಆದರೆ, ಈ ವರೆಗೂ ಕೆರೆ ಒತ್ತುವರಿದಾರರ ಮೇಲೆ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ ಎನ್ನುವ ಆರೋಪ ಸಾರ್ವ ಜನಿಕರಿಂದ ಕೇಳಿಬರುತ್ತಿದೆ.

ಕೆರೆ ಕಟ್ಟೆಗಳ ಒತ್ತುವರಿ ತಡೆ ಕಾನೂನುಗಳನ್ನೇ ಗಾಳಿಗೆ ತೂರಿ ತಮ್ಮ ಮನಸ್ಸಿಗೆ ಬಂದಂತೆ ಒತ್ತುವರಿ ಮಾಡುತ್ತಿರುವುದು ಎಲ್ಲೆಡೆ ಕಂಡು ಬರುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಎಚ್ಚೆತ್ತು ಕೆರೆ, ಕಟ್ಟೆಗಳನ್ನು ಸಂರಕ್ಷಿಸಿ ಒತ್ತುವರಿಯನ್ನು ತಡೆಯುವತ್ತ ಹೆಚ್ಚು ಗಮನ ನೀಡುವುದು ಅಗತ್ಯವಾಗಿದೆ.

ಕಣ್ಮರೆ ಆಗುತ್ತಿವೆ ರಾಜಗಾಲುವೆಗಳು: ಕೆರೆಗಳಿಗೆ ನೀರು ಹರಿದು ಬರುವ ರಾಜಗಾಲುವೆಗಳು ಮತ್ತು ಕೆರೆ ತುಂಬಿದ ನಂತರ ಕೋಡಿ ಬಿದ್ದು ನೀರು ಹರಿದು ಹೋಗುವ ಹಳ್ಳ ಕೊಳ್ಳಗಳು ಮತ್ತು ಕೆರೆಯ ನೀರಿನ ತೂಬು ಎತ್ತಿದಾಗ ರೈತರ ಜಮೀನುಗಳಿಗೆ ಕೆರೆ ನೀರು ಹರಿದು ಹೋಗುತ್ತಿದ್ದ ಹಳ್ಳಗಳು ಇಂದು ಭೂಗಳ್ಳರ ಪಾಲಾಗಿವೆ. ಸಿಕ್ಕಷ್ಟೇ ಸಿಗಲಿ ಎಂದು ನೀರು ಹರಿಯುವ ಜಾಗವನ್ನೆಲ್ಲಾ ಒತ್ತುವರಿ ಮಾಡಿಕೊಂಡು ನೀರು ಕೆರೆಗೆ ಹರಿಯದಂತೆ ಕೆರೆಯ ನೀರು ಹೊರ ಹೋಗದಂತೆ ಒತ್ತುವರಿ ಮಾಡಿರುವುದು ಎಲ್ಲೆಡೆ ಕಂಡು ಬಂದಿದೆ.

ತುಮಕೂರು ನಗರದ ಪ್ರಮುಖ ಕೆರೆಯಾಗಿರುವ ಅಮಾನಿಕೆರೆಗೆ ನೀರು ಹರಿದು ಬರುತ್ತಿದ್ದ ಪ್ರಮುಖ ರಾಜಗಾಲುವೆಗಳೇ ಇಂದು ಮಾಯವಾಗಿವೆ. ಇದರಿಂದ ಕೆರೆಗೆ ಹರಿದು ಬರುತ್ತಿದ್ದ ಮಳೆಯ ನೀರು ಬರದಂತಾಗಿದೆ. ಕೆರೆ ತುಂಬುವದೇ ಕಷ್ಟವಾಗಿದೆ. ಇದಲ್ಲದೇ ತುಮಕೂರು ಅಮಾನಿಕೆರೆ ಸುತ್ತಮುತ್ತಾ ಇದ್ದ ರಾಜಗಾಲುವೆಗಳು, ಹಳ್ಳಗಳನ್ನು ಒತ್ತುವರಿ ಮಾಡಿ ಕಟ್ಟಡಗಳನ್ನು ಕಟ್ಟಿಕೊಂಡಿದ್ದಾರೆ.

ಒಟ್ಟಾರೆಯಾಗಿ ಜಿಲ್ಲಾಡಳಿತ ಸರ್ಕಾರಿ ಜಮೀನು ಗಳನ್ನು ಭೂಗಳ್ಳರಿಂದ ಬಿಡಿಸಿ ಸರ್ಕಾರಕ್ಕೆ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಬೇಕಾಗಿದೆ. ತುಮಕೂರು ಈಗ ಸ್ಮಾರ್ಟ್‌ ಸಿಟಿಯಾಗಿ ಬೆಳವಣಿಗೆ ಆಗಲು ಎಲ್ಲ ರೀತಿಯ ತಯಾರಿ ನಡೆಯುತ್ತಿದೆ. ಸ್ಮಾರ್ಟ್‌ ಸಿಟಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ನಗರದ ಜನ ಸಂಖ್ಯೆ ಬೆಳೆವಣಿಗೆಗೆ ಅನುಗುಣವಾಗಿ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ. ಜೊತೆಗೆ ಭೂಮಿಯ ಅಂತರ್ಜಲ ವೃದ್ದಿಸಲು ಕೆರೆ ಕಟ್ಟೆಗಳು, ರಾಜಗಾಲುವೆ ಗಳನ್ನು ಉಳಿಸಿ, ಅಭಿವೃದ್ಧಿ ಪಡಿಸುವುದು ಮಹತ್ತರ ವಾಗಿದೆ. ಈ ಕಾರ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ ಕುಮಾರ್‌ ದಿಟ್ಟ ಹೆಜ್ಜೆ ಇಡುವರೇ?

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.