ಕುಕನೂರಲ್ಲಿ ಬಿಂದಿಗೆ ಕುಡಿಯುವ ನೀರಿಗಾಗಿ ಅಲೆದಾಟ
Team Udayavani, Apr 29, 2019, 4:02 PM IST
ಕುಕನೂರು: ತಾಲೂಕಿನಲ್ಲಿ ದಿನೇ ದಿನೆ ಬರದ ಭೀಕರತೆ ತೀವ್ರಗೊಳ್ಳುತ್ತಿದ್ದು, ಕುಡಿಯುವ ನೀರಿನ ಹಾಹಾಕಾರ ಶುರುವಾಗಿದೆ. ಪ್ರಾಣಿ-ಪಕ್ಷಿಗಳು ಗುಟುಕು ನೀರಿಗೂ ನರಕಯಾತನೆ ಅನುಭವಿಸುತ್ತಿವೆ.
ಪಟ್ಟಣ ಸೇರಿದಂತೆ ತಾಲೂಕಿನ ಉತ್ತಮುತ್ತಲಿನ ಗ್ರಾಮಗಳಲ್ಲೂ ಕೂಡ ಕುಡಿಯುವ ನೀರಿನ ತಾತ್ಪರ್ಯ ಶುರುವಾಗಿದೆ. ಕೊಡ ನೀರಿಗಾಗಿಯೂ ಅಲೆದಾಡುವ ಸ್ಥಿತಿ ಎದುರಾಗಿದೆ. ಟ್ಯಾಂಕರ್ ಮೂಲಕ ಕೆಲಭಾಗಗಳಲ್ಲಿ ನೀರು ಒದಗಿಸಲಾಗುತ್ತಿದ್ದರೂ ನೀರಿನ ಸಮಸ್ಯೆ ಮಾತ್ರ ತಿಳಿಗೊಳ್ಳದಷ್ಟು ಪರಿಸ್ಥಿತಿ ನಿರ್ಮಾಣವಾಗಿದೆ.
ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೆಲವು ಸಂಘ ಸಂಸ್ಥೆಗಳು ಟ್ಯಾಂಕರ್ ಮೂಲಕ ಉಚಿತವಾಗಿ ವಿವಿಧ ಕಾಲೋನಿಗಳಿಗೆ ನೀರು ಕಲ್ಪಿಸಲಾಗುತ್ತಿದ್ದರೆ. ಆ ಟ್ಯಾಂಕರ್ ನೀರಿನ ಹೆಸರಿನಲ್ಲಿ ವಾರ್ಡ್ನ ಸದಸ್ಯರು ಪಂಚಾಯಿತಿ ಹಣವನ್ನು ಕಬಳಿಸುವ ಹುನ್ನಾರ ಮಾಡುತ್ತಿದ್ದರೆ.ಇನ್ನೂ ಕೆಲವು ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಸದಸ್ಯರು ತಮ್ಮ ಕಾಲೋನಿಯಲ್ಲಿನ ನೀರಿನ ಸಮಸ್ಯೆಯನ್ನು ತೋರಿಸುವುದರ ಮೂಲಕ ಪಂಚಾಯತ್ ಅಭಿವೃದ್ಧಿ ಅನುದಾನದಲ್ಲಿ ಬೋರ್ವೆಲ್ ಕೊರೆಸುವ ಒಪ್ಪಿಗೆ ಪತ್ರ ಪಡೆದು. ಬೋರ್ವೆಲ್ ಏಜೆನ್ಸಿಯವರಿಗೆ ಕಮಿಷನ್ ನೀಡಿ 100ರಿಂದ 200 ಅಡಿವರೆಗೆ ಕೊರೆಸಿ 400ರಿಂದ 500 ಅಡಿ ಎಂಬ ಲೆಕ್ಕ ಪಡೆದು ಬೋಗಸ್ ಬಿಲ್ನ್ನು ತೋರಿಸಿ ಪಂಚಾಯಿತಿ ಹಣ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಕೆಲವು ಗ್ರಾಪಂ, ಪಪಂ ಸದಸ್ಯರು ಆರೋಪಿಸುತ್ತಾರೆ. ಇದಲ್ಲದೆ ಟ್ಯಾಂಕರ್ ಮೂಲಕ ಕಾಲೋನಿಗಳಿಗೆ ನೀರು ಕಲ್ಪಿಸಲಾಗುತ್ತಿದೆ. ಇದು ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ ಎನ್ನುವಂತಾಗಿದೆ.
ಇತ್ತೀಚಿನ ದಿನಗಳಲ್ಲಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಜಿಲ್ಲಾಡಳಿತದಿಂದ ಇರುವ ಅನುದಾನ ಬಳಸಿಕೊಂಡು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದರೆ. ಇನ್ನೊಂದೆಡೆ ಕುಡಿಯುವ ನೀರಿನ ಸಮಸ್ಯೆ ತಗ್ಗಿಸಲು ಸರಕಾರದಿಂದ ಬರಬೇಕಾದ ಸಮರ್ಪಕ ಅನುದಾನವೂ ಬಂದಿಲ್ಲ ಎಂದು ಅಧಿಕಾರಿಗಳು ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ಸಾರ್ವಜನಿಕರಿಗೆ ಹೇಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ