ಅಂಧನ ಕೈಹಿಡಿದು ಮಾದರಿಯಾದ ಮಧುಶ್ರೀ


Team Udayavani, Apr 29, 2019, 5:43 PM IST

29-April-33

ಶಹಾಪುರ: ಭೀಮರಾಯನಗುಡಿಯಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ ಸತಿಪತಿಗಳಾದ ಅಂಧ ಯುವಕ ದೇವದುರ್ಗ ತಾಲೂಕಿನ ರಮೇಶ ಹಾಗೂ ಧೋರ‌ಹಳ್ಳಿ ಗ್ರಾಮದ ಮಧುಶ್ರೀ.

ಶಹಾಪುರ: ತಾಲೂಕಿನ ಭೀಮರಾಯನಗುಡಿ ವಸಾಹತು ಪ್ರದೇಶದಲ್ಲಿ ರವಿವಾರ ನಡೆದ ಸಾಮೂಹಿಕ ವಿವಾಹದ ಸಮಾರಂಭದಲ್ಲಿ ಯುವತಿಯೊಬ್ಬಳು ದೇವದುರ್ಗ ತಾಲೂಕಿನ ಅಂಧ ಯುವಕನ ಕೈ ಹಿಡಿದು ಮಾದರಿಯಾಗಿದ್ದಾಳೆ.

ಭೀಮರಾಯನ ಗುಡಿ ಕೆಬಿಜೆಎನ್‌ಎಲ್ ವಸಾಹತುವಿನ ಪ್ರದೇಶದಲ್ಲಿ ಡಾ| ಅಂಬೇಡ್ಕರ್‌ ಪೀಪಲ್ಸ್ ಪಾರ್ಟಿ, ಡಾ| ಅಂಬೇಡ್ಕರ್‌ ಸಂಘ ಮತ್ತು ಕರ್ನಾಟಕ ಪ್ರದೇಶ ಚಲುವಾದಿ ಸಂಘ, ಕಪ್ರ ಮಾದಿಗರ ಸಂಘದ ಆಶ್ರಯದಲ್ಲಿ ರವಿವಾರ ಡಾ| ಅಂಬೇಡ್ಕರ್‌ 128ನೇ ಜಯಂತಿ ಅಂಗವಾಗಿ ಉಚಿತ ಸಾಮೂಹಿಕ ವಿವಾಹ ಜಿಲ್ಲಾ ಮಟ್ಟದ ಅಸ್ಪೃಶ್ಯರ ರಾಜಕೀಯ ಸಂಕಲ್ಪ ದಿನದ ಬೃಹತ್‌ ಸಮಾವೇಶ ನಡೆಯಿತು.

ಸಾಮೂಹಿಕ ವಿವಾಹದಲ್ಲಿ 29 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದವು. ಇದರಲ್ಲಿ ದೇವದುರ್ಗ ತಾಲೂಕಿನ ಅಂಧ ಯುವಕ ರಮೇಶ ಅವರನ್ನು ಶಹಾಪುರ ತಾಲೂಕಿನ ಧೋರನಹಳ್ಳಿ ಯುವತಿ ಮಧುಶ್ರೀ ಮದುವೆಯಾಗಿ ಮಾದರಿ ಎನಿಸಿದರು.

ಅಂಧ ಯುವಕ ರಮೇಶ ಅವರಿಗೊಂದು ಬಾಳು ನೀಡಬೇಕು ಎಂಬ ಆಸೆಯಿಂದಲೇ ಮದುವೆ ಮಾಡಿಕೊಂಡಿದ್ದೇನೆ. ಇದರಲ್ಲಿ ಯಾವುದೇ ಅನ್ಯತಾ ಭಾವ ಇಲ್ಲ ಎಂದು ಯುವತಿ ಮಧುಶ್ರೀ ಸಂತಸದಿಂದಲೇ ಅನಿಸಿಕೆ ಹಂಚಿಕೊಂಡರು.

ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಚಿತ್ರದುರ್ಗ ಛಲವಾದಿ ಗುರುಪೀಠದ ಹರಳಯ್ಯ ಮಹಾಸ್ವಾಮಿಗಳು ಮಾತನಾಡಿ, ನವ ದಂಪತಿಗಳ ಬದುಕು ಪಾವನವಾಗಲಿ. ಸಾಮೂಹಿಕ ವಿವಾಹದಡಿ ಮದುವೆಯಾದ ನವ ಜೋಡಿಗಳ ಮುಂದಿನ ಜೀವನ ಉತ್ತಮವಾಗಿರಲಿ. ಸತಿಪತಿಗಳು ಪರಸ್ಪರ ಒಂದಾಗಿ ಜೀವನದ ಬಂಡಿ ಸಾಗಿಸಬೇಕು. ಸಂಸಾರದಲ್ಲಿ ಹೆಚ್ಚು ಕಡಿಮೆ ಆಗುವುದು ಸಹಜ. ನಿರಮ್ಮಳಾಗಿ ಸಮಾಧಾನದಿಂದ ಯಾವುದೇ ಸಮಸ್ಯೆಗೆ ಉತ್ತರ ಕಂಡುಕೊಂಡು ಮುಂದೆ ಸಾಗಬೇಕು. ಇಬ್ಬರು ನಿರಂತರ ಶ್ರಮವಹಿಸಿ ದುಡಿದು ಸ್ವಾಲಂಬಿ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ಹೈಕೋರ್ಟ್‌ ವಕೀಲ, ಡಾ| ಅಂಬೇಡ್ಕರ್‌ ಪೀಪಲ್ಸ್ ಪಾರ್ಟಿ ಸಂಸ್ಥಾಪಕ ದೇವಮಿತ್ರ, ಅಂಬೇಡ್ಕರ್‌ ಪೀಪಲ್ಸ್ ಪಾರ್ಟಿ ಸಂಸ್ಥಾಪಕ ಮಾರುತಿ ಜಂಬಗಾ ಮಾತನಾಡಿದರು. ಚಲವಾದಿ ಸಂಘದ ಜಿಲ್ಲಾ ಕಾರ್ಯದರ್ಶಿ ಮಂಜು ಸೈದಾಪುರ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಶಕುಂತಲಾ ಹಡಗಲಿ, ಗುತ್ತಪ್ಪ ಅರಿಕೇರಿ, ಶರಣಪ್ಪ ಹೊಸ್ಮನಿ, ಜಗನ್ನಾಥ ಕಳಸಕರ್‌, ರಾಜಶ್ರೀ ಬಾವಿಮನಿ, ಶಾಂತಪ್ಪ ಸಾಲಿಮನಿ ಇದ್ದರು. ಮತ್ತು ವಧು-ವರರ ಕುಟುಂಬ ಸದಸ್ಯರು ಇದ್ದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.