ಬತ್ತಿ ಹೋಗಲಿದ್ದಾಳೆಯೇ ಜೀವನದಿ ಕಾವೇರಿ?


Team Udayavani, Apr 30, 2019, 3:00 AM IST

battu

ನವದೆಹಲಿ: ಕನ್ನಡನಾಡಿನ ಜೀವನದಿಯಾಗಿರುವ ಕಾವೇರಿ ಇನ್ನು ಕೆಲವೇ ವರ್ಷಗಳಲ್ಲಿ ಬತ್ತಿ ಹೋಗಲಿದೆಯೇ ಎಂಬ ಹೊಸ ಪ್ರಶ್ನೆಯೊಂದನ್ನು ಕೇಂದ್ರ ಜಲ ಆಯೋಗ (ಸಿಡಬ್ಲೂಸಿ) ತಯಾರಿಸಿರುವ ವರದಿಯೊಂದು ಹುಟ್ಟುಹಾಕಿದೆ. ಮುಂದೊಂದು ದಿನ ಬತ್ತಿ ಹೋಗುವ ಭಾರತದ ಕೆಲವು ನದಿಗಳನ್ನು ಈ ವರದಿಯಲ್ಲಿ ಪಟ್ಟಿ ಮಾಡಲಾಗಿದ್ದು, ಇದರಲ್ಲಿ ಕಾವೇರಿ ನದಿಯ ಹೆಸರನ್ನೂ ಉಲ್ಲೇಖೀಸಲಾಗಿರುವುದು ಹೊಸ ಆತಂಕಕ್ಕೆ ನಾಂದಿ ಹಾಡಿದೆ.

ಸಿಡಬ್ಲೂಸಿ ವರದಿಯಲ್ಲಿನ ದತ್ತಾಂಶದ ಪ್ರಕಾರ, ಕಳೆದ ಹತ್ತು ವರ್ಷಗಳಲ್ಲಿ ದೇಶಾದ್ಯಂತ ಬೀಸುತ್ತಿರುವ ಉಷ್ಣ ಹವೆ ಹೆಚ್ಚಾಗಿದ್ದು ಅದರ ಪರಿಣಾಮ, ಭಾರತದ ನದಿ, ಅಣೆಕಟ್ಟು ಹಾಗೂ ಇನ್ನಿತರ ಜಲಮೂಲಗಳ ನೀರಿನ ಪ್ರಮಾಣ ಶೇ. 21ರಷ್ಟು ಕಡಿಮೆಯಾಗಿದೆ ಎಂದು ಹೇಳಲಾಗಿದೆ.

ಉತ್ತರ ಭಾರತದಲ್ಲಿ ಸಿಂಧೂ ನದಿ ಮತ್ತು ನರ್ಮದಾ ನದಿ, ದಕ್ಷಿಣ ಭಾರತದಲ್ಲಿ ಪಶ್ಚಿಮ ಘಟ್ಟಗಳನ್ನು ಆಶ್ರಯಿಸಿರುವ ಕೆಲವು ನದಿಗಳನ್ನು ಬಿಟ್ಟರೆ ಮಿಕ್ಕೆಲ್ಲಾ ನದಿಗಳಲ್ಲಿ ಈ ನೀರಿನ ಕೊರತೆ ಈಗಾಗಲೇ ಸೃಷ್ಟಿಯಾಗಿದೆ. ಗುಜರಾತ್‌ನ ಕಛ್, ತಾಪಿ, ಸಬರ್ಮತಿ ನದಿ, ಕರ್ನಾಟಕದಲ್ಲಿ ಹರಿಯುವ ಕಾವೇರಿ, ಗೋದಾವರಿ, ಕೃಷ್ಣಾ, ಛತ್ತೀಸ್‌ಗಡದ ಮಹಾನದಿ ಸೇರಿದಂತೆ ದೇಶದ ಒಟ್ಟು 12 ನದಿಗಳು ಮುಂದೊಂದು ದಿನ ತಮ್ಮ ಅಸ್ತಿತ್ವ ಕಳೆದುಕೊಳ್ಳುವ ಅಪಾಯದಲ್ಲಿವೆ.

ಉಷ್ಣ ಹವೆಯ ಪರಿಣಾಮ, ಆಂಧ್ರ, ಮಹಾರಾಷ್ಟ್ರ, ಗುಜರಾತ್‌ಗಳಲ್ಲಿನ ಹಲವಾರು ಚಿಕ್ಕ ಅಣೆಕಟ್ಟುಗಳು ಈಗಾಗಲೇ ಬರಿದಾಗಿವೆ ಎಂದೂ ವರದಿಯಲ್ಲಿ ಉಲ್ಲೇಖೀಸಲಾಗಿದೆ ಎಂದು “ದ ಹಿಂದುಸ್ತಾನ್‌ ಟೈಮ್ಸ್‌’ ವರದಿ ಮಾಡಿದೆ. ನದಿಗಳಲ್ಲಿ ಕಡಿಮೆಯಾಗಿರುವ ನೀರಿನ ಪ್ರಮಾಣ ಸಾಧಾರಣ ಮಟ್ಟದ್ದಾಗಿದ್ದಾಗಿದ್ದರೂ, ಪರಿಸ್ಥಿತಿ ಹೀಗೇ ಮುಂದುವರಿದರೆ, ಈ ನದಿಗಳು ಮಾಯವಾಗುವ ಅಪಾಯ ಇಲ್ಲದಿಲ್ಲ ಎಂದು ವರದಿಯಲ್ಲಿ ಎಚ್ಚರಿಸಲಾಗಿದೆ.

ಹವಾಮಾನ ಇಲಾಖೆಯಿಂದಲೂ ಎಚ್ಚರ: ಈ ವರ್ಷ, ಮಾರ್ಚ್‌ನಿಂದ ಏಪ್ರಿಲ್‌ವರೆಗೆ ಬರಬೇಕಿದ್ದ ಮುಂಗಾರು ಪೂರ್ವ ಮಳೆಯ ಪ್ರಮಾಣದಲ್ಲಿ ಶೇ. 27ರಷ್ಟು ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ತಿಳಿಸಿದ್ದು, ದೇಶದ ಅರ್ಧಕ್ಕೂ ಹೆಚ್ಚು ಭಾಗ ಬರಗಾಲಕ್ಕೆ ತುತ್ತಾಗಿದೆ ಎಂದು ಹೇಳಿದೆ. ಜತೆಗೆ, 2019ರ ವರ್ಷವು ಎಲ್‌ ನಿನೋ ಇಯರ್‌ (ಹೆಚ್ಚು ಉಷ್ಣಾಂಶ-ಕಡಿಮೆ ಜಲ ವರ್ಷ) ಎಂದು ಪರಿಗಣಿಸಲ್ಪಟ್ಟಿದೆ ಎಂದು ಇಲಾಖೆ ತಿಳಿಸಿದೆ.

ಈ ಬಗ್ಗೆ ಹೆಚ್ಚಿನ ವಿವರಣೆ ನೀಡಿರುವ ಗಾಂಧಿನಗರದ ಐಐಟಿಯ ಸಹ ಪ್ರಾಧ್ಯಾಪಕರಾಗಿರುವ ವಿಮಲ್‌ ಶರ್ಮಾ, ಈಗಾಗಲೇ ಕರ್ನಾಟಕ, ಆಂಧ್ರಪ್ರದೇಶ, ಬಿಹಾರ, ಗುಜರಾತ್‌, ಜಾರ್ಖಂಡ್‌, ಮಹಾರಾಷ್ಟ್ರ, ಈಶಾನ್ಯ ರಾಜಸ್ಥಾನ, ತಮಿಳುನಾಡು ಹಾಗೂ ತೆಲಂಗಾಣದಲ್ಲಿ ಅತಿ ಉಷ್ಣ ಹವೆ ಬೀಸುತ್ತಿದೆ. ಇದರ ಪರಿಣಾಮ ಈ ಭಾಗದ ಜನರು ಈ ವರ್ಷದ ಬರಗಾಲದ ಬೇಗೆ ಅನುಭವಿಸಬೇಕಿದೆ ಎಂದಿದ್ದಾರೆ.

ಟಾಪ್ ನ್ಯೂಸ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.