ಬಂಗಾಲ: ಹಿಂಸೆ ಜತೆಗೆ ಮತ
Team Udayavani, Apr 30, 2019, 6:00 AM IST
ಮಧ್ಯಪ್ರದೇಶದ ಜಬಲ್ಪುರದಲ್ಲಿ ನಾಗರಿಕರು ಮತದಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.
ಹೊಸದಿಲ್ಲಿ: ಆಡಳಿತಾರೂಢ ಬಿಜೆಪಿಗೆ ಮಹತ್ವದ್ದು ಎನಿಸಿರುವ ನಾಲ್ಕನೇ ಹಂತದ ಮತದಾನ ಸೋಮವಾರ ಮುಕ್ತಾಯವಾಗಿದೆ. ಪಶ್ಚಿಮ ಬಂಗಾಲದಲ್ಲಿ ಕೇಂದ್ರ ಸಚಿವ ಬಾಬುಲಾಲ್ ಸುಪ್ರಿಯೋ ಅವರ ಕಾರು ಧ್ವಂಸ ಸೇರಿದಂತೆ ಕೆಲವು ಹಿಂಸಾತ್ಮಕ ಘಟನೆಗಳು ನಡೆದಿವೆ.
ಒಂಬತ್ತು ರಾಜ್ಯಗಳ 72 ಕ್ಷೇತ್ರಗಳಿಗೆ ನಡೆದ ಮತದಾನ ಸೋಮವಾರ ಪೂರ್ಣಗೊಂಡಿದ್ದು, ಶೇ. 64ರಷ್ಟು ಹಕ್ಕು ಚಲಾವಣೆಯಾಗಿದೆ. ಪ. ಬಂಗಾಲದಲ್ಲಿ 4ನೇ ಹಂತದ ಮತದಾನದಲ್ಲೂ ಹಿಂಸಾಚಾರ, ವಿವಿಧ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆಗಳು ನಡೆದಿವೆ. ಹೀಗಾಗಿ ಬಿಜೆಪಿ ಚುನಾವಣ ಆಯೋಗಕ್ಕೆ ದೂರು ನೀಡಿ ಅಲ್ಲಿ ಮುಂದಿನ ಹಂತಗಳಲ್ಲಿ ನಡೆಯಲಿರುವ ಚುನಾವಣೆ ವೇಳೆ ಸಂಪೂರ್ಣವಾಗಿ ಕೇಂದ್ರ ಪಡೆಗಳನ್ನು ನಿಯೋಜಿಸಬೇಕು ಎಂದು ಒತ್ತಾಯಿಸಿದೆ.
ಒಡಿಶಾ, ಉತ್ತರಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರಗಳಲ್ಲಿ ಇವಿಎಂ ದೋಷದಿಂದ ಮತದಾನ ವಿಳಂಬವಾಗಿದೆ. ಪ. ಬಂಗಾಲದಲ್ಲಿ ಶೇ. 76.47, ಉತ್ತರ ಪ್ರದೇಶದಲ್ಲಿ ಶೇ. 53.12, ಮಧ್ಯಪ್ರದೇಶದಲ್ಲಿ ಶೇ. 65.86, ರಾಜಸ್ಥಾನದಲ್ಲಿ ಶೇ. 62ರಷ್ಟು ಹಕ್ಕು ಚಲಾವಣೆಯಾಗಿದೆ. ಹಿಂದಿ ಭಾಷಿಕ ರಾಜ್ಯಗಳಲ್ಲಿ 2014ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿ 72 ಸ್ಥಾನಗಳ ಪೈಕಿ 56ರಲ್ಲಿ ಜಯ ಸಾಧಿಸಿತ್ತು.
ಮುಂಬಯಿಯಲ್ಲಿ ಬಾಲಿವುಡ್ ತಾರೆಯರಾದ ಅಮಿತಾಭ್ ಬಚ್ಚನ್, ಐಶ್ವರ್ಯಾ-ಅಭಿಷೇಕ್, ಶಾರುಖ್ ಖಾನ್, ಸಲ್ಮಾನ್ ಖಾನ್, ಅಮೀರ್ ಖಾನ್, ಕಿರಣ್ ರಾವ್, ದೀಪಿಕಾ ಪಡುಕೋಣೆ, ಪ್ರಿಯಾಂಕಾ ಛೋಪ್ರಾ, ರೇಖಾ ಸೇರಿದಂತೆ ಪ್ರಮುಖರು ಹಕ್ಕು ಚಲಾಯಿಸಿದರು ಮತ್ತು ಸಾರ್ವಜನಿಕರಿಗೆ ಮತ ಹಾಕುವಂತೆ ಪ್ರೇರೇಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ