ಸಮಾಜೋದ್ಧಾರ ಕಾರ್ಯ ಮಾಡಿದ ಶಿವ ಶರಣರು


Team Udayavani, Apr 30, 2019, 11:45 AM IST

hub-4

ಧಾರವಾಡ : ವೀರವಿರಾಗಿಣಿ ಅಕ್ಕಮಹಾದೇವಿ, ಬಸವಣ್ಣನವರು, ಅಲ್ಲಮಪ್ರಭುದೇವರು ಸೇರಿದಂತೆ ವಿವಿಧ ಶರಣರು ಹಿಂಸೆಯನ್ನು ದೂರ ಮಾಡಲೆತ್ನಿಸಿ ಈ ಜಗತ್ತಿನಲ್ಲಿ ನಡೆಯುತ್ತಿದ್ದ ಶೋಷಣೆಯನ್ನು ಧಿಕ್ಕರಿಸಿ ಸಮಾಜೋದ್ಧಾರ ಕಾರ್ಯ ಮಾಡಿದ್ದಾರೆ ಎಂದು ಡಾ|ಶರಣಮ್ಮ ಗೋರೆಬಾಳ ಅಭಿಪ್ರಾಯಪಟ್ಟರು.

ರಾ.ಹ.ದೇಶಪಾಂಡೆ ಸಭಾಭವನದಲ್ಲಿ ಬಸವಕೇಂದ್ರ ವತಿಯಿಂದ ಆಯೋಜಿಸಿದ್ದ ‘ಅರಿವಿನ ಅಂಗಳ’ ಕಾರ್ಯಕ್ರಮದಲ್ಲಿ ಅಕ್ಕಮಹಾದೇವಿ ಜೀವನ ಕುರಿತಾಗಿ ಅವರು ಉಪನ್ಯಾಸ ನೀಡಿದರು.

12 ನೇ ಶತಮಾನದ ಪೂರ್ವದಲ್ಲಿ ಮಹಿಳೆಯನ್ನು ನಾಲ್ಕ ಗೋಡೆಗಳ ಮಧ್ಯೆ ಬಂಧಿಸಿಡುತ್ತಿದ್ದರು. ಆಗ ಸ್ತ್ರೀಯರಿಗೆ ಸ್ವಾತಂತ್ರ್ಯವಿರಲಿಲ್ಲ. ಅಕ್ಕಮಹಾದೇವಿಯನ್ನು ಮದುವೆಯಾಗಿದ್ದ ಕೌಶಿಕ ಮಹಾರಾಜ ಆಕೆಯನ್ನು ತನ್ನ ಅಧೀನದಲ್ಲಿರಿಸಿಕೊಂಡು ಶೋಷಣೆ ಮಾಡುತ್ತಿದ್ದ. ಅದನ್ನು ಧಿಕ್ಕರಿಸಿ ಚೆನ್ನಮಲ್ಲಿಕಾರ್ಜುನ ದೇವರೇ ನನ್ನ ಗಂಡನೆಂದು ಆತನ ದರ್ಶನಕ್ಕೆ ಹೊರಟಳು. ಶ್ರಿಶೈಲಕ್ಕೆ ಹೋಗಿ ಚೆನ್ನಮಲ್ಲಿಕಾರ್ಜುನ ದರ್ಶನ ಪಡೆದು ನಂತರ ಕದಳಿ ವನದಲ್ಲಿ ಆಕೆ ಲಿಂಗೈಕ್ಯಳಾದಳು. ಅಕ್ಕಮಹಾದೇವಿ ಮನೆಯಿಂದ ಹೊರಟ ನಂತರ ಆಕೆಗೆ ದಾರಿಯುದ್ದಕ್ಕೂ ಕಷ್ಟಗಳೇ ಬಂದವು ಆದರೂ ಹೆದರದೆ ಮುನ್ನಡೆದಳು ಆಕೆಯ ಧೈರ್ಯ, ಸಾಹಿತ್ಯ, ನಡೆ ನುಡಿಗಳು ಮಹಿಳೆಯರ ಮನದಲ್ಲಿ ಮೂಡಿದ ಪರಿಣಾಮ ಇಂದು ಸ್ತ್ರೀ ಸ್ವತಂತ್ರಳಾಗಿ ಬದುಕುವಂತಾಗಿದೆ ಎಂದರು.

ಅಂತರಂಗದ ಅರಿವಿನ ಕಣ್ಣು ತೆರೆಸಿ ಕರುಣೆ-ವಿನಯ-ಸಮತೆಗಳನ್ನು ಸ್ಪುರಿಸುವರೋ ಅಂತಹವರು ಜಾತಿ ಮತ ಪಂಥಾತೀತವಾಗಿ ಶ್ರೇಷ್ಠರಾಗುತ್ತಾರೆ. ಧರ್ಮ ಎಂದಿಗೂ ಶೋಷಣೆ ಮಾಡಲ್ಲ. ಶೋಷಣೆ ಮಾಡುವ ಧರ್ಮ ಧರ್ಮವೇ ಅಲ್ಲ. ಸಕಲ ಜೀವಾತ್ಮರಿಗೂ ಲೇಸು ಬಯಸುವ ಧರ್ಮವೆಂದರೆ ಅದು ಬಸವಧರ್ಮ, ಶರಣ ಧರ್ಮ ಎಂಬುದನ್ನು ಮನುಷ್ಯ ಅರ್ಥ ಮಾಡಿಕೊಳ್ಳಬೇಕು ಎಂದರು.

ಬಸವಕೇಂದ್ರ ಅಧ್ಯಕ್ಷ ಶಿವಣ್ಣ ಶರಣ್ಣನವರ, ನಟರಾಜ ಮೂರಶಿಳ್ಳಿ, ಮಲ್ಲಿಕಾರ್ಜುನ ಚೌಧರಿ, ಶಿವಶರಣ ಕಲಬಶೆಟ್ಟರ, ಚನಬಸಪ್ಪ ಕಗ್ಗಣ್ಣವರ, ಉಮೇಶ ಕಟಗಿ, ಶಾರದಾ ಕೌದಿ, ಸುನಿತಾ ಮೂರಶಿಳ್ಳಿ ಉಪಸ್ಥಿತರಿದ್ದರು. ಮಲ್ಲಿಕಾರ್ಜುನ ಬಾಗೇವಾಡಿ ನಿರೂಪಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.