ಖರ್ಗೆದ್ವಯರ ವಿರುದ್ಧ ಮಾನನಷ್ಟ ಮೊಕದ್ದಮೆ: ಜಾಧವ್‌ ಎಚ್ಚರಿಕೆ


Team Udayavani, Apr 30, 2019, 12:13 PM IST

gul-2

ಕಲಬುರಗಿ: ತಾವು 50 ಕೋಟಿಗೆ ಬಿಜೆಪಿಗೆ ಮಾರಾಟವಾಗಿದ್ದೇನೆ ಎಂದು ಪದೇ-ಪದೇ ಆರೋಪ ಮಾಡುತ್ತಿರುವ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆಯವರು ಆರೋಪ ಸಾಬೀತು ಮಾಡಬೇಕು. ಇಲ್ಲವೇ ಆರೋಪ ಮಾಡುವುದನ್ನು ಕೈಬಿಡಬೇಕು. ಆರೋಪ ಪುನರಾವರ್ತಿಸಿದರೇ ಅಪ್ಪ-ಮಗನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಬೇಕಾಗುತ್ತದೆ ಎಂದು ಬಿಜೆಪಿ ಮುಖಂಡ ಡಾ| ಉಮೇಶ ಜಾಧವ ಎಚ್ಚರಿಸಿದ್ದಾರೆ.

ಅವರು ‘ಉದಯವಾಣಿ’ಯೊಂದಿಗೆ ಮಾತ ನಾಡಿ, ಚಿಂಚೋಳಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಅಪ್ಪ-ಮಗ ಸಹಕಾರ ನೀಡದ ಕಾರಣದಿಂದ ಶಾಸಕ ಸ್ಥಾನಕ್ಕೆ ಹಾಗೂ ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವೆ. ಬಿಜೆಪಿಗೆ ಸೇರಲು ತಮಗೆ ಯಾರು 50 ಕೋಟಿ ಹಣ ನೀಡಿಲ್ಲ. ತಮ್ಮ ಸ್ವಂತ ಇಚ್ಛೆಯಿಂದ ಅಭಿವೃದ್ಧಿಯ ಉದ್ದೇಶದಿಂದ ಪಕ್ಷ ಬಿಟ್ಟಿರುವೆ ಎಂದು ಸ್ಪಷ್ಟಪಡಿಸಿದರು.

ತಾವು ಕಾಂಗ್ರೆಸ್‌ ತ್ಯಜಿಸಿದ ದಿನದಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್‌ ಖರ್ಗೆಯವರು ತಾವು 50 ಕೋಟಿಗೆ ಚಿಂಚೋಳಿ ಮಾರಿಕೊಂಡಿದ್ದಾಗಿ ಹೇಳುತ್ತಾ ಬರುತ್ತಿದ್ದಾರೆ. ಅವರ ಬಳಿ ಈ ಬಗ್ಗೆ ಏನು ಸಾಕ್ಷಿ ಇದೆ ಎಂಬುದನ್ನು ಅವರು ಹೊರಗೆ ಹಾಕಲಿ ಎಂದು ಸವಾಲು ಹಾಕಿದರು.

ಮಲ್ಲಿಕಾರ್ಜುನ ಖರ್ಗೆಯವರು 50 ಕೋಟಿ ರೂ. ಅಕ್ರಮ ಆಸ್ತಿ ಮಾಡಿದ್ದಾರೆಂದು ಅವರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದ್ದು, ಅದರ ಬಗ್ಗೆ ನಾನೇನಾದರೂ ಮಾತನಾಡಿದ್ದೇನಾ? ಎಂದ ಅವರು, ತಮ್ಮ ಬಗ್ಗೆ ಇಲ್ಲ-ಸಲ್ಲದ ಸುಳ್ಳು ಹೇಳುವುದನ್ನು ಬಿಡದಿದ್ದರೇ ಅವರ ಬಗ್ಗೆಯೂ ನಾನು ಮಾತನಾಡಬೇಕಾಗುತ್ತದೆ ಹಾಗೂ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಬೇಕಾಗುತ್ತದೆ ಎಂದು ಗುಡುಗಿದರು.

ಮಲ್ಲಿಕಾರ್ಜುನ ಖರ್ಗೆ ಅಭಿವೃದ್ದಿಯ ಹರಿಕಾರ ಎಂದು ಹೇಳುತ್ತಾರೆ. ಆದರೆ ಗುರಮಿಠಕಲ್ ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ. ಅಲ್ಲಿನ ಶೇ.80 ರಷ್ಟು ಜನರು ಗುಳೆ ಹೋಗುತ್ತಿದ್ದಾರೆ.ಆದರೆ ಅವರು ಚಿಂಚೋಳಿ ತಾಲೂಕಿನಲ್ಲಿ ಗುಳೆ ಹೋಗುತ್ತಿದ್ದಾರೆ ಎಂದು ಪದೇ-ಪದೇ ಹೇಳುತ್ತಾರೆ. ಚಿಂಚೋಳಿಯಲ್ಲಿರುವವರು ಗುಳೆ ಹೋಗಲು ತಾವು ಕಾರಣರಲ್ಲ. 50 ವರ್ಷ ಅಧಿಕಾರದಲ್ಲಿದ್ದ ಖರ್ಗೆಯವರು ಕಾರಣ ಎಂದು ಟೀಕಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡು 9 ತಿಂಗಳಾದರೂ ಪ್ರಿಯಾಂಕ್‌ ಖರ್ಗೆ ಒಮ್ಮೆಯೂ ಚಿಂಚೋಳಿಗೆ ಬಂದಿಲ್ಲ. ಅಲ್ಲಿನ ಜನರ ಕಷ್ಟ ಸುಖಕ್ಕೆ ಸ್ಪಂದಿಸಿಲ್ಲ. ಕೊಂಚಾವರಂನಲ್ಲಿ ಮಕ್ಕಳ ಮಾರಾಟ ಪ್ರಕರಣ ನಡೆದಾಗ ಅಲ್ಲಿಗೆ ಭೇಟಿ ನೀಡಿ ಅವರು ವಿವರ ಪಡೆದಿಲ್ಲ. ತಾವು ಚಿಂಚೋಳಿಗೆ ತೆರಳಿ ವರದಿ ಪಡೆದು ಈ ಬಗ್ಗೆ ಚರ್ಚೆ ನಡೆಸಲು ಸಭೆ ಕರೆಯುವಂತೆ ಎಷ್ಟು ಬಾರಿ ಮನವಿ ಮಾಡಿದರೂ ಅವರು ಸ್ಪಂದಿಸಿಲ್ಲ. ಇದು ಅವರ ಕಾಳಜಿ ಎಂದು ವ್ಯಂಗ್ಯವಾಡಿದರು.

ಸುಭಾಷ ರಾಠೊಡ ಹೊರಗಿನವರು
ಕಾಂಗ್ರೆಸ್‌ ಅಭ್ಯರ್ಥಿ ಸುಭಾಷ ರಾಠೊಡರು ಚಿಂಚೋಳಿ ಕ್ಷೇತ್ರದವರಲ್ಲ, ಆಳಂದನವರು. ಆದರೆ ತಮ್ಮನ್ನು ಹೊರಗಿನವರು ಎನ್ನುತ್ತಾರೆ. ಸುಭಾಷ ರಾಠೊಡ ಖರ್ಗೆಯವರ ಕಾಲಿಗೆ ಬಿದ್ದು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿ, ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಖರ್ಗೆಯವರು ಯಾರು ತಮ್ಮ ಕಾಲಿಗೆ ಬಿಳುತ್ತಾರೆ ಅವರಿಗೆ ಟಿಕೆಟ್ ನೀಡುತ್ತಾರೆ ಎಂಬುದಕ್ಕೆ ನಿದರ್ಶನವಾಗಿದೆ. ಚಿಂಚೋಳಿಯ ಜನತೆ ಯಾರು ತಮ್ಮ ಹಿತ ಬಯಸುವವರು ಹಾಗೂ ಯಾರು ಅಲ್ಲ ಎಂಬುದರ ಬಗ್ಗೆ ಚಿಂತಿಸಿ ಮತ ನೀಡಲಿದ್ದಾರೆ ಎಂಬ ಉಮೇಶ ಜಾಧವ್‌ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.