ಬಿಸಿಲಿನ ಝಳಕ್ಕೆ ಜನ ಹೈರಾಣ


Team Udayavani, Apr 30, 2019, 1:19 PM IST

bag-2

ಬಾದಾಮಿ: ಬೇಸಿಗೆಯ ಬಿಸಿಲಿನ ಪ್ರತಾಪಕ್ಕೆ ಜನರು ಹೈರಾಣಾಗಿದ್ದು, ಜನ ತಂಪು ಪಾನೀಯಗಳಿಗೆ ಮೊರೆ ಹೋಗುತ್ತಿದ್ದಾರೆ.

ಸದ್ಯ ತಾಪಮಾನ 41 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ. ಮಧ್ಯಾಹ್ನ ಜನರು ಮನೆಯ ಹೊರಗಡೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಯಾವುದೇ ಕೆಲಸವಿದ್ದರೆ ಬೆಳಗ್ಗೆ 8ರಿಂದ 12 ಗಂಟೆಯೊಳಗೆ ಮಾಡಿ ಮುಗಿಸಲು ಜನರು ಪ್ರಯತ್ನ ಪಡುತ್ತಿದ್ದಾರೆ. ಸರಕಾರಿ ಕಚೇರಿಗಳ ವೇಳೆ ಏಪ್ರಿಲ್, ಮೇನಲ್ಲಿ ಬೆ. 8ರಿಂದ ಮ. 1.30ರವರೆಗೆ ಇರುತ್ತದೆ. ಗ್ರಾಮೀಣ ಭಾಗಗಳಿಂದ ಯಾವುದೆ ಕೆಲಸ-ಕಾರ್ಯಗಳಿದ್ದರೆ ತಾಲೂಕಾ ಕೇಂದ್ರಗಳಿಗೆ ಬೆಳಗ್ಗೆ ಬಂದು ಹೋಗುತ್ತಿದ್ದಾರೆ.

ಮಧ್ಯಾಹ್ನ ಬಿಸಿಲಿನ ಝಳಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಬೆಳಗ್ಗೆಯಿಂದಲೇ ಬೆವರು ಸುರಿಯಲು ಆರಂಭವಾಗುತ್ತದೆ. ಮಧ್ಯಾಹ್ನದ ಹೊತ್ತಿಗೆ ಬಿಸಿಲಿನ ಪ್ರಖರತೆ ಹೆಚ್ಚಾಗಿ ಜನರು ಒದ್ದಾಡುವಂತಾಗುತ್ತದೆ. ಜನರಲ್ಲಿ ಆತಂಕ ಮೂಡಿಸಿದೆ. ಹೆಚ್ಚುತ್ತಿರುವ ಬಿಸಿಲಿನ ಝಳದಿಂದ ಜನರು ಪರಿತಪಿಸುತ್ತಿದ್ದಾರೆ. ಒಂದೆಡೆ ಕೆರೆಕಟ್ಟೆಗಳು ಒಣಗುತ್ತಿರುವುದರಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಇನ್ನೊಂದೆಡೆ ಬಿಸಿಲಿನ ಬೇಗೆಗೆ ಜನರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುತ್ತಿದೆ.

ಬಿಸಿಲಿನ ಬೇಗೆಯಿಂದ ಪಾರಾಗಲು ಜನರು ಎರಡು ಬಾರಿ ಸ್ನಾನ ಮಾಡುತ್ತಿದ್ದಾರೆ. ತಾಲೂಕಿನ ಬಹುತೇಕ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ನೀರಿನ ಸಮಸ್ಯೆ ಉಂಟಾಗಿದೆ. ಆರ್‌ಸಿಸಿ ಮೇಲ್ಚಾವಣಿ ಬೆಂಕಿಯಂತಾಗುತ್ತಿವೆ. ಏರ್‌ ಕೂಲರ್‌, ಎಸಿ, ಫ್ಯಾನ್‌ಗಳ ಮಾರಾಟ ಜೋರಾಗಿದೆ. ಜನರು ಐಸ್‌ಕ್ರೀಮ್‌, ತಂಪುಪಾನೀಯ, ಎಳೆನೀರಿಗೆ ಮೊರೆ ಹೋಗುತ್ತಿದ್ದಾರೆ.

ಮಣ್ಣಿನ ವಸ್ತುಗಳಿಗೆ ಹೆಚ್ಚಿನ ಬೇಡಿಕೆ: ಬೇಸಿಗೆ ದಿನಗಳಲ್ಲಿ ಬಿಸಿಲು ಹೆಚ್ಚಾದ ಕಾರಣ ನೀರನ್ನು ತಂಪಾಗಿಸಲು ಮಣ್ಣಿನ ಬಿಂದಿಗೆ, ತತ್ರಾಣಿಗೆ ಬೇಡಿಕೆ ಬಂದಿದೆ. ಹೆಚ್ಚಾಗಿ ಮಣ್ಣಿನ ವಸ್ತುಗಳು ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿವೆ.

ಆರೋಗ್ಯ ಇಲಾಖೆ ಸೂಚನೆ: ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ಸೂರ್ಯಾಘಾತದಿಂದ ತಪ್ಪಿಸಲು ಸಡಿಲವಾದ ತೆಳು ಬಣ್ಣದ ಹತ್ತಿ ಬಟ್ಟೆ ಧರಿಸುವುದು, ಮನೆಯ ಹೊರಗಡೆ ಹೋದಾಗ ಛತ್ರಿ ತೆಗೆದುಕೊಂಡು ಹೋಗುವುದು, ಶುದ್ಧವಾದ ಕುಡಿಯುವ ನೀರು ಕುಡಿಯುವುದು, ಉಪ್ಪ್ಪು ಮಿಶ್ರಿತ ನೀರು ಕುಡಿಯುವುದು, ಹಣ್ಣಿನ ರಸ, ಪಾನಕ, ದ್ರವ ಆಹಾರ ಸೇವಿಸುವುದು,

ಹತ್ತಿಯ ನುಣುಪಾದ ಬಟ್ಟೆ, ಕರವಸ್ತ್ರದಿಂದ ಬೆವರು ಒರೆಸಿಕೊಳ್ಳುವುದು, ನೀರು, ಮಜ್ಜಿಗೆ, ಎಳೆನೀರು, ಕಲ್ಲಂಗಡಿ ಸೇವನೆ ಉಪಯುಕ್ತ, ಬೆಚ್ಚಗಿನ, ಮಸಾಲೆರಹಿತ ಶುದ್ಧ ಸಾತ್ವಿಕ ಆಹಾರ ಸೇವನೆ, ಗಾಳಿಯಾಡುವಂತಹ ಪಾದರಕ್ಷೆ ಧರಿಸುವುದು ಸೇರಿದಂತೆ ಮುನ್ನಚ್ಚರಿಕೆ ವಹಿಸಬೇಕೆಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ತೇರದಾಳದಲ್ಲಿ ಬಿಸಿಲಿನ ಪ್ರಖರತೆ: ಜನರ ಪರದಾಟ

ತೇರದಾಳ: ಪಟ್ಟಣದಲ್ಲಿ 2-3 ದಿನಗಳಿಂದ 41-42 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶವಿದ್ದು,Ê ಜನರು ಪರದಾಡುವಂತಾಗಿದೆ. ಮನೆ ಬಿಟ್ಟು ಹೊರಗೆ ಹೋಗಲಾಗದೆ, ಮನೆಯಲ್ಲಿರಲು ಸಾಧ್ಯವಾಗದಂತಾಗಿದೆ. ಬಿಸಿಲಿನ ತಾಪಕ್ಕೆ ನಲುಗಿ, ನರಕಯಾತನೆ ಅನುಭವಿಸುತ್ತಿದ್ದಾರೆ. ತಂಪು ಪಾನೀಯ, ಮಡಿಕೆಗಳಿಗೆ ಹೆಚ್ಚಿದ ಬೇಡಿಕೆ: ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನ ಎಳೆನೀರು, ಕಲ್ಲಂಗಡಿ ಹಣ್ಣು ಹಾಗೂ ತಂಪುಪಾನೀಯಗಳಿಗೆ ಮೊರೆ ಹೋಗುತಿದ್ದಾರೆ.
ಎಳೆನೀರಿಗೆ ಹೆಚ್ಚಿನ ಬೇಡಿಕೆಯಿದ್ದು, 30ರಿಂದ 50ರೂ.ಗಳವರೆಗೆ ಮಾರಾಟವಾಗುತ್ತಿವೆ. ಬಡವರ ಫ್ರೀಜ್‌ ಖ್ಯಾತಿಯ ಮಣ್ಣಿನ ಮಡಿಕೆಗಳ ಮಾರಾಟ ಸ್ವಲ್ಪ ಮಟ್ಟಿಗೆ ಏರಿದೆ ಎನ್ನುತ್ತಾರೆ ಪರಪ್ಪ, ಶಂಕರ, ಸಂಗಪ್ಪ . ವಿಪರಿತವಾಗಿ ಏರುತ್ತಿರುವ ಬಿಸಿಲಿನ ಪ್ರಖರತೆಗೆ ಜನ ಕಂಗಾಲಾಗಿದ್ದು, ನೆತ್ತಿ ಸುಡುವ ಉರಿ ಬಿಸಿಲಿನ ತಾಪದಿಂದ ಪಾರಾಗಲು ಸರಕಾರ ಎಲ್ಲ ಇಲಾಖೆಗಳ ಸಮಯವನ್ನು ಬೆಳಗ್ಗೆ 8ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಬದಲಾವಣೆ ಮಾಡಲಾಗಿದೆ.
ಕಳೆದ 40 ವರ್ಷಗಳಿಂದ ಇಂತಹ ಬಿಸಿಲು ಕಂಡಿಲ್ಲ. ಮಧ್ಯಾಹ್ನ ಹೊರಗಡೆ ಬಂದರೆ ಬೆವರು ಬಂದು ನೆರಳಿಗೆ ಹೋಗಬೇಕು ಅನಿಸುತ್ತಿದೆ. ಏನೆ ಕೆಲಸ ಇದ್ದರೂ ಮಧ್ಯಾಹ್ನ ವಿಪರಿತ ಬಿಸಿಲಿನ ಕಾರಣ ಆರೋಗ್ಯ ಇಲಾಖೆಯ ಸೂಚನೆಯಂತೆ ಸೂರ್ಯಾಘಾತ ತಪ್ಪಿಸಲು ಮುನ್ನಚ್ಚರಿಕೆ ವಹಿಸುವುದು ಮುಖ್ಯ.
•ಮಹಾಂತೇಶ ಮಮದಾಪುರ, ಗ್ರಾಮಸ್ಥ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.