ಜನಕ್ಕೆ ನೀರಿಲ್ಲ ದನಕ್ಕೆ ಮೇವಿಲ್ಲ


Team Udayavani, Apr 30, 2019, 3:40 PM IST

hav-3

ಕುಕನೂರು: ತಾಲೂಕನ್ನು ಸರ್ಕಾರ ಬರಗಾಲ ಪೀಡಿತವೆಂದು ಘೋಷಿಸಿ 50 ಲಕ್ಷ ರೂ. ಮಂಜೂರು ಮಾಡಿ, ಪ್ರತಿ ರೈತನ ಖಾತೆಗೆ ಇಂತಿಷ್ಟು ಎಂದು ಹಣ ಜಮೆ ಮಾಡಿ ಪರಿಹಾರ ನೀಡಿದ್ದೇವೆ ಎಂದು ಕೈ ತೊಳೆದುಕೊಂಡಿದೆ. ಆದರೆ ಬರ ನಿರ್ವಹಣೆಗೆ ಸಮಪರ್ಕ ಕಾರ್ಯ ನಿರ್ವಹಿಸಿಲ್ಲ. ತಾಲೂಕಿನಲ್ಲಿ ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ಎದುರಾಗಿದೆ.

ಸತತ ಮೂರು ವರ್ಷಗಳಿಂದ ಬರಗಾಲಕ್ಕೆ ತುತ್ತಾಗಿರುವ ಕುಕನೂರು ತಾಲೂಕು ಜನತೆಯ ಪರಿಸ್ಥಿತಿ ಹೇಳತೀರದು. ಒಣಬೇಸಾಯವನ್ನೇ ನಂಬಿಕೊಂಡಿರುವ ಇಲ್ಲಿನ ರೈತರ ಜಾನುವಾರುಗಳಿಗೆ ಯರೆ ಭಾಗದ ಕೆರೆ ನೀರೇ ಗತಿ. ಆದರೆ ಬರಗಾಲದಿಂದಾಗಿ ಕೆರೆ ಅಂಗಳದಲ್ಲಿ ಹನಿ ನೀರು ಸಿಗುವುದು ದುಸ್ಥರವಾಗಿದೆ.

ಗಗನಕ್ಕೇರಿದ ಮೇವಿನ ಬೆಲೆ: ಜಾನುವಾರುಗಳಿಗೆ ಮೇವು ಖರೀದಿಸಿ, ಸಂಗ್ರಹಿಸಬೇಕೆಂದಿರುವ ರೈತರಿಗೆ ಹಣ ನೀಡಿದರೂ ಮೇವು ಸಿಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಸಕ್ತ ಬರಗಾಲದಲ್ಲಿ ಮೇವಿಗೆ ತಾಲೂಕಿನಲ್ಲಿ ಚಿನ್ನದ ಬೆಲೆ ಬಂದಿದೆ. ರೈತರು ನೀರಾವರಿ ಭಾಗದಿಂದ ಹೆಚ್ಚಿನ ಬೆಲೆಕೊಟ್ಟು ನೆಲ್ಲುಹುಲ್ಲನ್ನು ಖರೀದಿಸಿ ತರುತ್ತಿದ್ದಾರೆ. ನೀರಾವರಿ ವಂಚಿತ ತಾಲೂಕಿನ ಕುಕನೂರು, ತಳಕಲ್ ಹಾಗೂ ಮಂಗಳೂರು ಹೋಬಳಿಗಳ ಬಹುತೇಕ ಗ್ರಾಮಗಳಲ್ಲಿ ಮೇವಿನ ಸಮಸ್ಯೆ ಹೆಚ್ಚಿದೆ.

ಜಾನುವಾರುಗಳನ್ನು ಸದೃಢಗೊಳಿಸುವ ಕಾಳುಕಡಿ ಬಿಟ್ಟು ಮೆಕ್ಕೆಜೋಳದ ಮೇವು ಬಂಡಿಗೆ 1200, ಟ್ರ್ಯಾಕ್ಟರ್‌ಗೆ 3500, ಜೋಳದ ಮೇವು ಕ್ರಮವಾಗಿ 4000 ಮತ್ತು 6000, ಭತ್ತದ ಹುಲ್ಲು ಕ್ರಮವಾಗಿ 5500 ಮತ್ತು 6500 ಹಾಗೂ ಶೇಂಗಾ ಹೊಟ್ಟು ಕ್ರಮವಾಗಿ 4000 ಮತ್ತು 5000 ಕೊಟ್ಟು ತರುವುದು ಅನಿವಾರ್ಯವಾಗಿದೆ. ತಾಲೂಕಿನಲ್ಲಿ 60 ಸಾವಿರ ಜಾನುವಾರುಗಳಿವೆ. ಬರಗಾಲದ ಹಿನ್ನೆಲೆಯಲ್ಲಿ ಮೇವು ಮತ್ತು ನೀರು ಕೊರತೆಯಿಂದ 30 ಸಾವಿರ ಜಾನುವಾರುಗಳ ಸ್ಥಿತಿ ಗಂಭೀರವಾಗಲಿದೆ. ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಗೋಶಾಲೆ ಆರಂಭಿಸಲಾಗಿದೆ. ಆದರೆ ಕುಕನೂರು ತಾಲೂಕಿನಲ್ಲಿ ಇದುವರೆಗೂ ಗೋ ಶಾಲೆ ಪ್ರಾರಂಭಿಸಿಲ್ಲ. ಗೋ ಶಾಲೆಯಾದರೂ ಪ್ರಾರಂಭವಾದರೆ ಹೇಗೊ ಬದಕು ಸಾಗಿಸಬಹುದು ಎನ್ನುತ್ತಾರೆ ರೈತರು.

ಜನಕ್ಕೆ ನೀರಿಲ್ಲ ದನಕ್ಕೆ ಮೇವಿಲ್ಲ

ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ಸಿಗುತ್ತಿಲ್ಲ. ಬೆಳೆ ಹಾನಿಯಾದರು ಬೆಳೆವಿಮೆ ಬರುತ್ತಿರುವುದು ಬೆರೆಳನಿಕೆಯ ರೈತರಿಗೆ ಮಾತ್ರ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ತಾಲೂಕಿನ ರೈತರು ದುಡುಕಿನ ನಿರ್ಧಾರ ತೆಗೆದುಕೊಳ್ಳಬಹುದು.

•ಅಂದಪ್ಪ ಕೋಳೂರು ಜಿಲ್ಲಾ ರೈತ ಸಂಘದ ಮುಖಂಡ

ತಾಲೂಕಿನ ಚಂಡೂರು, ಭಾನಾಪೂರ ಹಾಗೂ ಮಂಗಳೂರು ಗ್ರಾಮಗಳಲ್ಲಿ ಕೂಡಿಯುವ ನೀರಿನ ಸಮಸ್ಯೆ ಇದೆ. ಈ ಕುರಿತು ಮಂಗಳವಾರ ನಡೆಯುವ ಕೋರ್‌ ಕಮಿಟಿ ಮಿಟಿಂಗ್‌ನಲ್ಲಿ ಚರ್ಚಿಲಾಗುವುದು. ಪಟ್ಟಣದಲ್ಲಿ ಮೇವು ಬ್ಯಾಂಕ್‌ ಪ್ರಾರಂಭಿಸಿದ ಕಾರಣ ಗೋ ಶಾಲೆ ಕುಕನೂರು ತಾಲೂಕಿಗೆ ಅಗತ್ಯ ಇಲ್ಲ ಎಂದು ಮೆಧೀಲಾಧಿಕಾರಿಗಳು ಹೇಳಿದ್ದಾರೆ.

•ನೀಲಪ್ರಭಾ, ತಹಶೀಲ್ದಾರ್‌

ಹೆಚ್ಚಾಗುತ್ತಿದೆ ನೀರಿನ ಸಮಸ್ಯೆ

ತಾಲೂಕಿನ ಬಹುತೇಕ ಯರೇ ಹಾಗೂ ಮಸಾರಿ ಭಾಗದಲ್ಲಿ ಮೂರು ತಿಂಗಳಿಂದ ಕುಡಿವ ನೀರಿನ ಸಮಸ್ಯೆ ತೀವ್ರಗೊಂಡಿದೆ. ನೀರನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವುದಕ್ಕೆ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ಜನತೆ ಆರೋಪಿಸುತ್ತಾರೆ. ಯರೇ ಭಾಗದ ಯರೇಹಂಚಿನಾಳ ಚಿಕೇನಕೊಪ್ಪ ಭಟಪ್ಪನಹಳ್ಳಿ ಹಾಗೂ ಮಸಾರಿ ಭಾಗದ ಕುಕನೂರು ಸೇರಿದಂತೆ ಮಂಗಳೂರು ಕೇಂಪಳ್ಳಿ ಗ್ರಾಮಗಳಲ್ಲಿ ಮೂರ್‍ನಾಲ್ಕು ತಿಂಗಳಿಂದ ಕುಡಿವ ನೀರಿನ ಸಮಸ್ಯೆ ಎದುರಾಗಿದೆ. ಕುಡಿವ ನೀರಿಗಾಗಿ ಇಲ್ಲಿನ ಜನತೆ ಗ್ರಾಮದ ಅಕ್ಕಪಕ್ಕದ ತೋಟಗಳಿಗೆ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿದಿನ ಬೆಳಗ್ಗೆ ಊರಿಂದ ಊರಿಗೆ ತೆರಳಿ ನೀರು ತರುವದು ಮತ್ತು ನೀರಿಗಾಗಿ ನಿತ್ಯದ ಕೆಲಸವನ್ನು ಬಿಡುವ ಪರಿಸ್ಥಿತಿ ಎದರಾಗಿದೆ. ಈ ಕುರಿತು ಮೇಲಾಕಾರಿಗಳ ಗಮನಕ್ಕೆ ತಂದರು ಪ್ರಯೋಜನ ಕೂಡ ಆಗದೆದಿರುವುದು ಕೂಡ ಸಾರ್ವಜನಿಕ ವಲಯದಲ್ಲಿ ಚರ್ಚಿಗೆ ಗ್ರಾಸವಾಗಿದೆ. ಕುಡಿವ ನೀರಿನ ಸಮಸ್ಯೆಯ ಬಗ್ಗೆ ಗ್ರಾಪಂ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಇನ್ನು ಗ್ರಾಮದಲ್ಲಿ ಉಂಟಾದ ಕುಡಿವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ ಎಂದು ತಾಲೂಕಿನ ಜನತೆ ಯಲಬುರ್ಗಾ ಪಟ್ಟಣಕ್ಕೆ ತೆರಳಿ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಹಲವು ಭಾರಿ ಮನವಿ ಮಾಡಿದರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಬದಲಾಗಿ ನೀರಿನ ಸಮಸ್ಯೆಯ ಬಗ್ಗೆ ನನಗ್ಯಾಕೆ ಹೇಳುತ್ತೀರಿ. ನಿಮ್ಮ ಗ್ರಾಪಂ ಪಿಡಿಒ, ತಾಪಂ ಇಒ ಮತ್ತು ತಹಶೀಲ್ದಾರ್‌ಗೆ ಹೇಳಿ ಎಂದು ಗ್ರಾಮಸ್ಥರನ್ನು ಗದರಿಸಲು ಮುಂದಾಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಾರೆ. ಶಾಶ್ವತ ಪರಿಹಾರಕ್ಕೆ ಮುಂದಾಗದೇ ಎರಡು ದಿನಗಳಿಂದ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.
ಎಲ್. ಮಂಜುನಾಥ ಪ್ರಸಾದ್‌

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.