ಸುಸಜ್ಜಿತ ಶೌಚಾಲಯಕ್ಕೆ 98ಲಕ್ಷ ರೂ. ಬಿಡುಗಡೆ

9 ಶಾಲೆಗಳ ಪೈಕಿ ಪ್ರತಿ ಶಾಲೆಗೆ 2 ಲಕ್ಷ ರೂ. | ಸರ್ಕಾರದ ಜತೆಗೆ ರೋಟರಿ ಸಂಸ್ಥೆ 2 ಲಕ್ಷ ರೂ. ನೀಡಲು ನಿರ್ಧಾರ

Team Udayavani, Apr 30, 2019, 4:02 PM IST

tumkur-1-tdy..

ತುಮಕೂರು: ಶೈಕ್ಷಣಿಕ ಜಿಲ್ಲೆಯ 22 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ 27 ಸೇರಿದಂತೆ ಒಟ್ಟು 49 ಸರ್ಕಾರಿ ಶಾಲೆಗಳಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಾಣ ಮಾಡಲಾಗುವುದು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್‌ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ನಡೆದ ಸುಸಜ್ಜಿತ ಶೌಚಾಲಯ ನಿರ್ಮಾಣ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರ ಪ್ರದೇಶದ ಶಾಲೆಗಳಲ್ಲಿದ್ದಂತೆ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿಯೂ ಸುವ್ಯವಸ್ಥಿತ ಮಾದರಿ ಶೌಚಾಲಯ ನಿರ್ಮಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸ್ವಚ್ಛ ಭಾರತ್‌ ಮಿಷನ್‌ನಡಿ 49 ಶಾಲೆಗಳ ಪೈಕಿ ಪ್ರತಿ ಶಾಲೆಗೆ 2 ಲಕ್ಷ ರೂ.ಗಳಂತೆ ಒಟ್ಟು 98ಲಕ್ಷ ರೂ.ಗಳನ್ನು ಈಗಾಗಲೇ ಆಯಾ ಶಾಲೆಯ ಎಸ್‌ಡಿಎಂಸಿ ಸಮಿತಿ ಖಾತೆಗೆ ಬಿಡುಗಡೆ ಮಾಡಿದೆ ಎಂದರು.

ಶೌಚಾಲಯ ನಿರ್ಮಾಣಕ್ಕೆ ಸಂಬಂಧಿಸಿದ ನೀಲನಕ್ಷೆ ಹಾಗೂ ಅಂದಾಜು ಪಟ್ಟಿ ತಯಾರಿಸಿ ಇಲಾಖೆಯ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಲಾಗುವುದು. ಆಯಾ ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರ ಸಭೆ ಕರೆದು ಕಾಮಗಾರಿಗಳನ್ನು ತಕ್ಷಣವೇ ಪ್ರಾರಂಭಿಸಲು ಸೂಚಿಸಬೇಕು. ಶೌಚಾಲಯ ನಿರ್ಮಾಣ ಕಾಮಗಾರಿಗಳನ್ನು ಇಲಾಖೆಯ ಮಾರ್ಗಸೂಚಿಯನ್ವಯ ಕೈಗೊಳ್ಳಬೇಕು ಎಂದು ಸೂಚಿಸಿದರು.

ರೋಟರಿ ಸಹಕಾರದಲ್ಲಿ ಸುಸಜ್ಜಿತ ಶೌಚಾಲಯ: ಶೌಚಾಲಯ ನಿರ್ಮಾಣಕ್ಕಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪ್ರತಿ ಶಾಲೆಗೆ ಬಿಡುಗಡೆ ಮಾಡಿರುವ ತಲಾ 2ಲಕ್ಷ ರೂ.ಗಳ ಜೊತೆಗೆ ರೋಟರಿ ಸಂಸ್ಥೆಯು 2 ಲಕ್ಷ ರೂ. ನೀಡಲು ಮುಂದೆ ಬಂದಿದೆ. ಆಯಾ ಶಾಲೆಯ ಎಸ್‌ಡಿಎಂಸಿ ಸಮಿತಿಯು ಒಪ್ಪಿದಲ್ಲಿ ರೋಟರಿ ಸಂಸ್ಥೆಯ 2ಲಕ್ಷ ರೂ.ಗಳನ್ನು ಬಳಸಿಕೊಂಡು ಒಟ್ಟು 4 ಲಕ್ಷ ರೂ.ಗಳ ವೆಚ್ಚದಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಾಣ ಮಾಡಲಾಗುವುದು. ಈ ಸುಸಜ್ಜಿತ ಶೌಚಾಲಯಗಳನ್ನು ವಿದೇಶಿ ಮಾದರಿಯಲ್ಲಿ ಟೈಲ್ಸ್ ಬಳಸಿ ವಿಶಾಲ ಅಳತೆಯಲ್ಲಿ ನಿರ್ಮಿಸಲಾಗುವುದಲ್ಲದೇ, ವಿದ್ಯಾರ್ಥಿಗಳು ಕೈತೊಳೆಯಲು ವಿಶೇಷವಾಗಿ ಪ್ರತ್ಯೇಕ ವಾಶ್‌-ಬೇಸಿನ್‌, ಗಾಳಿ-ಬೆಳಕಿನ ವ್ಯವಸ್ಥೆ ಕಲ್ಪಿಸಲಾಗುವುದು. ಶೌಚಾಲಯಗಳು ಸ್ವಚ್ಛತೆಯಿಂದ ಕೂಡಿದ್ದರೆ ಮಾತ್ರ ಮಕ್ಕಳಿಗೆ ಬಳಸಲು ಮನಸ್ಸಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಶಾಲಾ ಶೌಚಾಲಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕೆಂದು ಶಾಲಾ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಿದರು.

ಸ್ವಚ್ಛತೆ ಪರಿಶೀಲಿಸಿ: ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಕೃಷ್ಣಪ್ಪ ಮಾತನಾಡಿ, ಚುನಾವಣೆ ಘೋಷಣೆಯಾಗಿದ್ದರಿಂದ ಶೌಚಾಲಯ ನಿರ್ಮಾಣ ಅನುಷ್ಠಾನ ಶೀಘ್ರ ಕೈಗೊಳ್ಳಲಾಗಲಿಲ್ಲ. ಜಿಲ್ಲೆಯ ಕೆಲವು ಶಾಲೆಗಳಲ್ಲಿ ನೀರಿನ ಅವ್ಯವಸ್ಥೆ, ಸಮರ್ಪಕ ಶೌಚಾಲಯ ನಿರ್ವಹಣೆ ಇಲ್ಲದಿರುವುದರಿಂದ ಶೌಚಾಲಯಗಳ ಸೂಕ್ತ ಬಳಕೆಯಾಗುತ್ತಿಲ್ಲ. ಶಾಲಾ ಮುಖ್ಯೋಪಾಧ್ಯಾಯರು ಪ್ರತಿದಿನ ಶೌಚಾಲಯ ಸ್ವಚ್ಛತೆ ಪರಿಶೀಲಿಸುವ ಅಭ್ಯಾಸ ರೂಢಿಸಿಕೊಳ್ಳಬೇಕು. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಎಷ್ಟು ಮುಖ್ಯವೋ, ಆರೋಗ್ಯವೂ ಅಷ್ಟೇ ಮುಖ್ಯ. ಶಿಕ್ಷಕರು ಮಕ್ಕಳಿಗೆ ಶೌಚಾಲಯಗಳನ್ನು ಬಳಸುವ ಮುನ್ನ ಹಾಗೂ ಬಳಸಿದ ನಂತರ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು. ಪ್ರತಿದಿನ ಶೌಚಾಲಯ ಸ್ವಚ್ಛಗೊಳಿಸುವುದು ಪ್ರಮುಖ ಅಂಶ ಎಂದು ತಿಳಿಯದಿದ್ದಲ್ಲಿ ಎಷ್ಟೇ ಮಾದರಿ ಶೌಚಾಲಯಗಳನ್ನು ನಿರ್ಮಾಣ ಮಾಡಿದರೂ, ಸಾರ್ಥಕವಾಗುವುದಿಲ್ಲ ಎಂದು ತಿಳಿಸಿದರು.

ನಿರ್ವಹಣಾ ಸಿಬ್ಬಂದಿ ನೇಮಿಸಿ: ನಗರದ ಅರಳೀಮರದಪಾಳ್ಯ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸಿದ್ದರಾಮಯ್ಯ ಮಾತನಾಡಿ, ಶಾಲೆಗಳಲ್ಲಿರುವ ಶೌಚಾಲಯಗಳನ್ನು ಸಮರ್ಪಕ ರೀತಿಯಲ್ಲಿ ನಿರ್ವಹಣೆ ಮಾಡಲು ಕ್ಲಸ್ಟರ್‌ ಮಟ್ಟದಲ್ಲಿ ಸಂಚಾರಿ ಶೌಚಾಲಯ ನಿರ್ವಹಣಾ ಸಿಬ್ಬಂದಿಯನ್ನು ನೇಮಕ ಮಾಡಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ಡಿಡಿಪಿಐಗಳಾದ ಎಂ.ಆರ್‌.ಕಾಮಾಕ್ಷಿ, ರವಿಶಂಕರ್‌ ರೆಡ್ಡಿ, ವಿವಿಧ ಶಾಲೆಗಳ ಎಸ್‌ಡಿಎಂಸಿ ಅಧ್ಯಕ್ಷರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು, ಮತ್ತಿತರರು ಹಾಜರಿದ್ದರು.

ಶೌಚಾಲಯ ನಿರ್ಮಾಣ ಮಂಜೂರಾದ ಶಾಲೆಗಳು:

ಜಿಲ್ಲೆಯಲ್ಲಿ 4ಲಕ್ಷ ರೂ. ವೆಚ್ಚದಲ್ಲಿ ವಿದೇಶಿ ಮಾದರಿಯಲ್ಲಿ ಶೌಚಾಲಯ ನಿರ್ಮಾಣ ಮಾಡಲು ಈಗಾಗಲೇ 49 ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಿ ಮಂಜೂರಾತಿ ದೊರೆತಿದೆ. ಈ ಪೈಕಿ ತುಮಕೂರು ದಕ್ಷಿಣ ಜಿಲ್ಲೆ ವ್ಯಾಪ್ತಿಯ ಚಿಕ್ಕನಾಯಕನಹಳ್ಳಿ ತಾಲೂಕಿನ ಮಲಗೊಂಡನಹಳ್ಳಿ, ಆಶ್ರಿಹಾಳ್‌, ಚಿಕ್ಕರಾಂಪುರ, ಚಿಕ್ಕನಾಯಕನಹಳ್ಳಿ (ಉರ್ದು), ದಸೂಡಿ, ಓಟಿಕೆರೆ, ಮತಿಘಟ್ಟ, ಮರೆನಡುಪಾಳ್ಯ ಹಾಗೂ ಬೆಳ್ಳಾರ, ಗುಬ್ಬಿ ತಾಲೂಕಿನ ಚಿಕ್ಕಹೆಡಗೆಹಳ್ಳಿ, ಹರದಗೆರೆಗೊಲ್ಲರಹಟ್ಟಿ, ಗುಡ್ಡದಹಳ್ಳಿಹಟ್ಟಿ, ಕುಣಿಗಲ್ ತಾಲೂಕಿನ ಕೋಡಿಪಾಳ್ಯ (ಉರ್ದು), ಮಾಗಡಿಪಾಳ್ಯ (ಉರ್ದು), ತಿಪಟೂರು ತಾಲೂಕಿನ ಚಿಕ್ಕಮಾರ್ಪನಹಳ್ಳಿ, ರಂಗಾಪುರ, ತುಮಕೂರು ತಾಲೂಕಿನ ಸಿರವಾರ, ಜಕ್ಕೇನಹಳ್ಳಿ, ಕ್ಯಾತ್ಸಂದ್ರ, ಅರಳೀಮರದಪಾಳ್ಯ, ಹೆಗ್ಗೆರೆ, ಬೆಳಧರ, ಮಧುಗಿರಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿ ಕೊರಟಗೆರೆ ತಾಲೂಕು ಸಿ.ಎನ್‌.ದುರ್ಗ, ಶಕುನಿ ತಿಮ್ಮನಹಳ್ಳಿ, ಕಾಟೇನಹಳ್ಳಿ, ಎಂ.ವೆಂಕಟಾಪುರ, ನೇಗಲಾಲ, ಹೊಸಕೋಟೆ, ಮಲ್ಲೇಕಾವು, ಎಲೆರಾಂಪುರ, ಹೊಳವನಹಳ್ಳಿ, ಪಾವಗಡ ತಾಲೂಕಿನ ದಾಸರಮ್ಮನಹಳ್ಳಿ, ಹನುಮಂತನಹಳ್ಳಿ, ಚಿಕ್ಕಜಾಲೋಡು, ಜೆ.ಅಚ್ಚಮ್ಮನಹಳ್ಳಿ, ಕೊಡಮಡಗು, ಅರಸೀಕೆರೆ, ಪಾವಗಡ, ಮಧುಗಿರಿ ತಾಲೂಕಿನ ಮಧುಗಿರಿ, ಎಂ.ಎನ್‌.ಕೆರೆ, ಹುಣಸವಾಡಿ, ಕವನದಾಳ, ಯೆಲ್ಕೂರ್‌, ತಿಪ್ಪಾಪುರ, ದೊಡ್ಡಮಾಲೂರು, ಶಿರಾ ತಾಲೂಕಿನ ಬೆಂಚೆ, ಹುಲಿದೊರೆಕಾವಲ್, ಕೆಂಪನಹಳ್ಳಿ, ದೊಡ್ಡಅಗ್ರಹಾರ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದ್ದು, ಪ್ರತಿ ಶಾಲೆಗೆ ತಲಾ 2ಲಕ್ಷ ರೂ.ಗಳಂತೆ ಅನುದಾನ ಬಿಡುಗಡೆ ಮಾಡಲಾಗಿದೆ. ರೋಟರಿಯವರು 2 ಲಕ್ಷ ರೂ. ನೀಡಲಿದ್ದು ಒಟ್ಟು 4ಲಕ್ಷ ರೂ. ವೆಚ್ಚದಲ್ಲಿ ಸರ್ಕಾರಿ ಶಾಲೆಯಲ್ಲಿ ಆಧುನಿಕ ಶೌಚಾಲಯ ನಿರ್ಮಾಣವಾಗಲಿವೆ.

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.