ಸಚಿವ ರೇವಣ್ಣ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ


Team Udayavani, May 1, 2019, 3:00 AM IST

sachiva

ಹಾಸನ: ಅಕ್ರಮ ಮತದಾನಕ್ಕೆ ಕುಮ್ಮಕ್ಕು ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಅವರ ಮೇಲೂ ಪ್ರಕರಣ ದಾಖಲು ಮಾಡಬೇಕು ಎಂದು ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಅವರು ಜಿಲ್ಲಾ ಚುನಾವಣಾಧಿಕಾರಿಯವರನ್ನು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ಮೊದಲೇ ಹೊಳೆನರಸೀಪುರ ಮತ್ತು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಕ್ರಮಗಳು ನಡೆಯುವ ಶಂಕೆ ವ್ಯಕ್ತಪಡಿಸಿ ಸೂಕ್ತ ಬಿಗಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಬಿಜೆಪಿಯು ಜಿಲ್ಲಾ ಚುನಾವಣಾಧಿಕಾರಿಯವರಿಗೆ ದೂರು ನೀಡಿತ್ತು.

ಆದರೆ ಕ್ರಮ ಕೈಗೊಳ್ಳದ ಪರಿಣಾಮ ಮತದಾನದ ದಿನ ಸಂಜೆ 5 ಗಂಟೆವರೆಗೆ ಶೇ. 56 ರಷ್ಟಿದ್ದ ಮತದಾನ ಸಂಜೆ 6 ಗಂಟೆಗೆ ಕೆಲವು ಮತಗಟ್ಟೆಗಳಲ್ಲಿ ಶೇ.90 ರಷ್ಟಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದೇವೆ ಎಂದು ಹೇಳಿದರು.

ತನಿಖೆಯಾಗಲಿ: ಶೇ.90ಕಿಂತ ಹೆಚ್ಚು ಮತದಾನವಾಗಿರುವ ಮತಗಟ್ಟೆಗಳ ಬಗ್ಗೆ ತನಿಖೆ ನಡೆಸಬೇಕು. ಹೊಳೆನರಸೀಪುರ ವಿಧಾನಸಭಾ ವ್ಯಾಪ್ತಿಯ 19 ಬೂತ್‌ಗಳು, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಬೂತ್‌ಗಳಲ್ಲಿ ಅಕ್ರಮ ಮತದಾನ ನಡೆದಿರುವ ಶಂಕೆ ಇದೆ.

ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಯವರು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಕೆಲವು ಮತಗಟ್ಟೆಗಳಲ್ಲಿ ಶೇ.100 ರಷ್ಟು ಮತದಾನವಾಗಿದೆ ಈ ಬಗ್ಗೆ ತನಿಖೆ ನಡೆಯಬೇಕು ಎಂದು ಮನವಿ ಮಾಡಿದರು.

ಅಕ್ರಮ ಮತದಾನಕ್ಕೆ ಕುಮ್ಮಕ್ಕು: ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡುವಲಹಿಪ್ಪೆಯ ಮತಗಟ್ಟೆಯಲ್ಲಿ ಸಚಿವ ಎಚ್‌.ಡಿ.ರೇವಣ್ಣ ಅವರು ಅಕ್ರಮ ಮತದಾನಕ್ಕೆ ಕುಮ್ಮಕ್ಕು ನೀಡಿರುವುದು ವಿಡಿಯೋ ದೃಶ್ಯಾವಳಿಗಳಲ್ಲಿ ಸಾಬೀತಾಗಿದೆ. ರೇವಣ್ಣ ಅವರು ಅರ್ಧಗಂಟೆಗೂ ಹೆಚ್ಚು ಕಾಲ ಮತಗಟ್ಟೆಯಲ್ಲಿದ್ದರು.

ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಆ ಮತಗಟ್ಟೆಯ ಬಿಜೆಪಿ ಪೋಲಿಂಗ್‌ ಏಜೆಂಟ್‌ ಜಿಲ್ಲಾ ಚುನಾವಣಾಧಿಕಾರಿಯವರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯವರು ಮೂವರು ಮತಗಟ್ಟೆ ಅಧಿಕಾರಿಗಳನ್ನು ಸಸ್ಪಂಡ್‌ ಮಾಡಿ ಒಟ್ಟು 7 ಜನರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಆದರೆ ಸಚಿವ ರೇವಣ್ಣ ಅವರ ಮೇಲೆ ಏಕೆ ದೂರು ದಾಖಲಾಗಿಲ್ಲವೆಂದು ಪ್ರಶ್ನಿಸಿದರು.

ಕಾನೂನು ಪ್ರಕಾರ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಆದರೆ ಸಚಿವ ರೇವಣ್ಣ ಅವರು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಅಧಿಕಾರಿಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಎಲ್ಲಿ ಅಕ್ರಮ ನಡೆದಿದೆಯೋ ಅಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಪ್ರಜ್ವಲ್‌ ನಾಮಪತ್ರದಲ್ಲಿ ಲೋಪ: ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ನಾಮಪತ್ರದೊಂದಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸಾಕಷ್ಟು ಲೋಪಗಳಿವೆ. ಅವುಗಳು ಸಾಬೀತಾದರೆ ಅವರು ಚುನಾವಣಾ ಸ್ಪರ್ಧೆಗೆ 6 ವರ್ಷ ಅನರ್ಹರಾಗುವರು ಎಂದು ಎ. ಮಂಜು ಹೇಳಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.