ಮತ್ತೆ ಅಗ್ರಸ್ಥಾನಕ್ಕೇರಲು ಚೆನ್ನೈ ಕಾತರ


Team Udayavani, May 1, 2019, 10:21 AM IST

csk

ಚೆನ್ನೈ: ಈಗಾಗಲೇ ಪ್ಲೇ ಆಫ್ ಪ್ರವೇಶಿಸಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ಬುಧವಾರ ಇನ್ನೊಂದು ಪಂದ್ಯಕ್ಕೆ ಸಜ್ಜಾಗಿವೆ. ಎಂ. ಚಿದಂಬರಂ ಸ್ಟೇಡಿಯಂನಲ್ಲಿ ಇತ್ತಂಡಗಳು ಅಗ್ರಸ್ಥಾನಕ್ಕಾಗಿ ಪೈಪೋಟಿ ನಡೆಸಲಿವೆೆ.

ಕೂಟದ ಮೊದಲ ಮುಖಾಮುಖೀ ಯಲ್ಲಿ ಚೆನ್ನೈ ಡೆಲ್ಲಿ ವಿರುದ್ಧ 6 ವಿಕೆಟ್‌ಗಳ ಗೆಲುವು ಸಾಧಿಸಿತ್ತು. ಸೋಲಿನ ಸೇಡಿಗೆ ಡೆಲ್ಲಿ ಕಾದು ಕುಳಿತಿದೆ. ಆದರೆ ಡೆಲ್ಲಿಗೆ ಈ ಸವಾಲು ಸುಲಭದ್ದಲ್ಲ. ಚೆನ್ನೈ ತವರಿನಂಗಳದಲ್ಲಿ ಹೆಚ್ಚು ಬಲಿಷ್ಠವಾಗಿದೆ ಮಾತ್ರ ವಲ್ಲದೇ ಅಗ್ರಸ್ಥಾನಕ್ಕೇರಲು ಹಾತೊರೆಯುತ್ತಿದೆ.

ಡೆಲ್ಲಿಗೆ ಯುವ ಆಟಗಾರರ ಬಲ
ಈ ಬಾರಿಯ ಐಪಿಎಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ಲೇ ಆಫ್ ಪ್ರವೇಶಿಸಿ ಅಚ್ಚರಿ ಮೂಡಿಸಿರುವ ಡೆಲ್ಲಿ ತಂಡ ಯುವ ಆಟಗಾರರ ದಂಡನ್ನು ಹೊಂದಿದೆ. ನಾಯಕ ಶ್ರೇಯಸ್‌ ಅಯ್ಯರ್‌, ಪೃಥ್ವಿ ಶಾ, ರಿಷಬ್‌ ಪಂತ್‌, ಕಾಗಿಸೋ ರಬಾಡ, ಅಕ್ಷರ್‌ ಪಟೇಲ್‌ ತಂಡದ ಆಸ್ತಿಯಾಗಿದ್ದಾರೆ. ಅನುಭವಿ ಆಟಗಾರ ಶಿಖರ್‌ ಧವನ್‌ ಉತ್ತಮ ಫಾರ್ಮ್ನಲ್ಲಿರುವುದೂ ತಂಡಕ್ಕೆ ಬಲ ನೀಡಿದೆ.

ಬೌಲಿಂಗ್‌ನಲ್ಲಿ ಇಶಾಂತ್‌, ಲಮಿಚಾನೆ, ಮಾರಿಸ್‌ ಉತ್ತಮ ಲಯದಲ್ಲಿದ್ದಾರೆ. ಹೀಗಾಗೀ ಡೆಲ್ಲಿ ಎಲ್ಲ ವಿಭಾಗಗಳಲ್ಲೂ ಬಲಿಷ್ಠವಾಗಿ ತೋರ್ಪಡಿಸಿಕೊಂಡಿದೆ.

ಚೆನ್ನೈ ಬೌಲಿಂಗ್‌ ಹೆಚ್ಚು ಘಾತಕ
ಬ್ಯಾಟಿಂಗ್‌ಗಿಂತ ಚೆನ್ನೈ ಬೌಲಿಂಗ್‌ ಹೆಚ್ಚು ಘಾತಕವಾಗಿದೆ. ತಾಹಿರ್‌, ಚಹರ್‌, ಹರ್ಭಜನ್‌, ಜಡೇಜ ಎದುರಾಳಿಗಳನ್ನು ಕಟ್ಟಿ ಹಾಕುವಲ್ಲಿ ಸಮರ್ಥರಿದ್ದಾರೆ. ಆದರೆ ಬ್ಯಾಟಿಂಗ್‌ ವೈಫ‌ಲ್ಯದಿಂದಾಗಿ ತಂಡಕ್ಕೆ ಹಿನ್ನಡೆಯಾಗುತ್ತಿದೆ. ಯಾರೊಬ್ಬರೂ ಸ್ಥಿರ ಬ್ಯಾಟಿಂಗ್‌ ನಡೆಸುತ್ತಿಲ್ಲ. ವಾಟ್ಸನ್‌ ಒಂದು ಪಂದ್ಯವಾಡಿದರೆ ಮತ್ತೆರಡು ಪಂದ್ಯದಲ್ಲಿ ತೀರಾ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಇನ್ನು ಕೇದಾರ್‌ ಜಾಧವ್‌, ಅಂಬಾಟಿ ರಾಯುಡು, ರೈನಾ ಕೂಡ ಈ ಬಾರಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ.

ಮತ್ತೆ ಕಾಡಲಿದೆಯೇ ಧೋನಿ ಗೈರು!
ಧೋನಿ ಅನುಪಸ್ಥಿತಿಯಲ್ಲಿ ಮುಂಬೈ ವಿರುದ್ಧದ ಪಂದ್ಯದಲ್ಲಿ ತವರಿನಲ್ಲೇ ಚೆನ್ನೈ 46 ರನ್‌ಗಳ ಸೋಲನುಭವಿಸಿತ್ತು. ಡೆಲ್ಲಿ ವಿರುದ್ಧವೂ ಅವರು ಆಡುವುದೂ ಅನುಮಾನವಾಗಿದೆ. ಧೋನಿ ಅನುಪಸ್ಥಿತಿಯಲ್ಲಿ ತಂಡ ಸೋಲುತ್ತದೆ ಎಂಬುದು ಈಗಾಗಲೇ ಸಾಬೀತಾಗಿದೆ. ಅವರ ಗೈರಿನಲ್ಲಿ ಚೆನ್ನೈ 2 ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿ ಸೋತಿದೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.