ಮನೆಗೆ ಸಿಡಿಲು ಬಡಿದು ಅಪಾರ ನಷ್ಟ


Team Udayavani, May 2, 2019, 3:00 AM IST

sidilu

ನೆಲಮಂಗಲ: ಪಟ್ಟಣದ ಸುಭಾಷ್‌ನಗರದ ಕೇಶವಶೆಟ್ಟಿ ಬಡಾವಣೆಯ ನಾರಾಯಣರಾವ್‌ ಮನೆಗೆ ಮಂಗಳವಾರ ತಡರಾತ್ರಿ ಸುರಿದ ಭಾರಿಮಳೆಯ ವೇಳೆ ಸಿಡಿಲು ಬಡಿದು ಅಪಾರ ಹಾನಿ ಸಂಭವಿಸಿದೆ.

ಮಳೆಯ ಜೊತೆ ಬೀಸುತ್ತಿದ್ದ ಬಿರುಗಾಳಿಯನ್ನು ಕಂಡು ಜನರು ಭಯಭೀತರಾಗಿ ಮನೆ ಸೇರಿದ್ದರು. ಇದೇ ಸಂದರ್ಭದಲ್ಲಿ ಮಿಂಚಿನಂತೆ ಮನೆಗೆ ಬಡಿದ ಸಿಡಿಲು ಮನೆಯ ಮಂದಿ ಸೇರಿದಂತೆ ಬಡಾವಣೆಯ ಜನರು ಬೆಚ್ಚಿಬೀಳುವಂತೆ ಮಾಡಿದೆ.

ಬಿರುಕುಬಿಟ್ಟ ಗೋಡೆಗಳು: ಕೇಶವಶೆಟ್ಟಿ ಬಡಾವಣೆಯ ನಿವೃತ್ತ ಶಿಕ್ಷಕ ನಾರಾಯಣರಾವ್‌ ಅವರ ಮೂರು ಮಹಡಿಯ ಮನೆಗೆ ರಾತ್ರಿ ಬಡಿದ ಸಿಡಿಲಿನಿಂದಾಗಿ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆಯ ಮೇಲಿನ ನೀರಿನ ಟ್ಯಾಂಕ್‌, ಪೈಪ್‌ಗ್ಳಿಗೆ ಅಪಾರ ಹಾನಿಯಾಗಿದೆ.

ಮನೆಯೊಳಗಿನ ಎಲ್ಲಾ ವಿದ್ಯುತ್‌ ಬಲ್ಪ್ಗಳು ಕ್ಷಣಾರ್ಧದಲ್ಲಿ ಪುಡಿಪುಡಿಯಾಗಿವೆ. ಮನೆಯ ಒಂದನೇ ಮತ್ತು ಎರಡನೇ ಮಹಡಿಯಲ್ಲಿ ಬಾಡಿಗೆ ಮನೆಯವರಿದ್ದು, ಸಿಡಿಲು ಬಡಿದ ಮೂರನೇ ಮಹಡಿಯಲ್ಲಿ ಸರಕುಗಳನ್ನು ಸಂಗ್ರಹಣೆ ಮಾಡಿದ್ದರು. ಸ್ವಲ್ಪದರಲ್ಲಿಯೇ ಸಂಭವಿಸಬಹುದಾದ ಪ್ರಾಣಹಾನಿ ತಪ್ಪಿದಂತಾಗಿದೆ.

ಆತಂಕಗೊಂಡ ಜನತೆ: ಮೂರನೇ ಮಹಡಿಯಲ್ಲಿ ಯಾರೂ ವಾಸವಿಲ್ಲದ ಕಾರಣ ಯಾವುದೇ ಪ್ರಾಣಾಪಾಯವಾಗಿಲ್ಲ. ಸಿಡಿಲು ಬಡಿದ ತಕ್ಷಣ ಹೆಚ್ಚು ಶಬ್ದ ಹಾಗೂ ಬೆಳಕು ರಾಚಿದ ಪರಿಣಾಮ ಸುತ್ತಮುತ್ತಲ ಜನರು ಆತಂಕಕ್ಕೆ ಒಳಗಾಗಿದ್ದೆವು ಎನ್ನುತ್ತಾರೆ ಬಡಾವಣೆಯ ನಿವಾಸಿ ಮಿಲಿó ಮೂರ್ತಿ.

ಅಪಾರ ಹಾನಿ: ಸಿಡಿಲು ಬಡಿದ ಮನೆಯಲ್ಲದೇ ಅಕ್ಕಪಕ್ಕದಲ್ಲಿದ್ದ ಬಡಾವಣೆಯ ಸುಮಾರು 30ಕ್ಕೂ ಹೆಚ್ಚು ಮನೆಗಳಲ್ಲಿನ 25 ಟಿ.ವಿ.ಗಳು, 3 ಫ್ಯಾನ್‌, 10 ರೆಫ್ರಿಜಿರೇಟರ್‌, 4ಯುಪಿಎಸ್‌, 1ಬೋರ್‌ವೆಲ್‌, 50ಕ್ಕೂ ಹೆಚ್ಚು ಬಲ್ಪ್ಗಳಿಗೆ ಹಾನಿಗೊಳಗಾಗಿದೆ. ಸಿಡಿಲು ಬಡಿದ ಸಮಯದಲ್ಲಿ ವಿದ್ಯುತ್‌ ಸಂಪರ್ಕ ಖಡಿತವಾಗಿಲ್ಲದ ಕಾರಣ ವಿದ್ಯುತ್‌ ಉಪಕರಣಗಳಿಗೆ ಬಹಳಷ್ಟು ಹಾನಿಯಾಗಿದೆ ಎನ್ನಲಾಗಿದೆ.

ಹೆದರಿದ ಜನರು: ಪಟ್ಟಣದಲ್ಲಿ ಇದೇ ಮೊದಲ ಬಾರಿಗೆ ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಹಾನಿ ಸಂಭವಿಸಿದ್ದು, ಮನೆಗೆ ಸಿಡಿಲು ಬಡಿದ ವೇಳೆಯಲ್ಲಿ ಬಡಾವಣೆಯ ಜನರು ಎಚ್ಚರವಾಗಿದ್ದರಿಂದ ಬೆಳಕು ಮತ್ತು ಶಬ್ದದಿಂದ ಮಕ್ಕಳು ಹೆಚ್ಚು ಹೆದರಿದ್ದಾರೆ. ಅಲ್ಲದೇ, ನಿವಾಸಿಗಳು ಭಯಭೀತರಾಗಿದ್ದೆವು. ಆ ಸಮಯದಲ್ಲಿ ಆಕಾಶವೇ ಕೆಳಗೆ ಬಿತ್ತು ಎಂಬ ಆತಂಕ ಎಲ್ಲರಲ್ಲೂ ಮನೆ ಮಾಡಿತ್ತು ಎಂದು ಸ್ಥಳೀಯ ಬೈರೇಗೌಡ ತಿಳಿಸಿದರು.

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.