ಚಾರ: ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ
Team Udayavani, May 2, 2019, 6:01 AM IST
ಹೆಬ್ರಿ:ಚಾರ ಗಾಂಧಿನಗರ ಸಪರಿವಾರ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಎ. 30ರಂದು 28ನೇ ವರ್ಷದ ಪ್ರತಿಷ್ಠಾಪನ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಸಾಧಕ ವಿದ್ಯಾರ್ಥಿಗಳು, ಹೆತ್ತವರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸಮ್ಮಾನಿಸಲಾಯಿತು.
ಉದ್ಯಮಿ ಎಚ್. ಸುಧೀರ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಡ್ಯ ನಿತ್ಯಾನಂದ ವಿವೇಕವಂಶಿ, ಹೆಬ್ರಿ ಚಾರ ನವಜೀವನ ಅಭಿವೃದ್ಧಿ ಸಂಸ್ಥೆಯ ಚನ್ನಪ್ಪ ಎಚ್., ಉದ್ಯಮಿ ಕೃಷ್ಣ ನಾಯ್ಕ, ವಿಜಯ್ ಉಪಸ್ಥಿತರಿದ್ದರು. ಗಾಂಧಿನಗರ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಕಾರ್ಯದರ್ಶಿ ರಾಘವೇಂದ್ರ ಡಿ.ಜಿ. ಸ್ವಾಗತಿಸಿ, ಕಾರ್ಯಕಾರಿ ಸಮಿತಿಯ ಜತೆ ಕಾರ್ಯದರ್ಶಿ ಪುಷ್ಪರಾಜ್ ಕಾರ್ಯಕ್ರಮ ನಿರೂಪಿಸಿದರು. ರೋಹಿತ್ ಕುಮಾರ್ ಶೆಟ್ಟಿ ವಂದಿಸಿದರು. ಚಂಡಿಕಾ ಯಾಗ, ಪಂಚವಿಂಶತಿ ಕಲಶಾಭಿಷೇಕ, ಆಶ್ಲೇಷಾ ಬಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನರಸಿಂಹ ಹೇರಳೆ ಅವರ ಧಾರ್ಮಿಕ ನೇತೃತ್ವದಲ್ಲಿ ನಡೆಯಿತು. ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುಂದಾಪುರ ಮನು ಹಂದಾಡಿ ಅವರಿಂದ ನಗೆಹಬ್ಬ, ಹೆಬ್ರಿ ಚಾಣಕ್ಯ ಮೆಲೋಡಿಸ್ ತಂಡದಿಂದ ನೃತ್ಯ ವೈವಿಧ್ಯ, ಸಂಗೀತ ರಸಮಂಜರಿ ಕಾರ್ಯಕ್ರಮ, ಸ್ಥಳೀಯರಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ