ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿಲ್ಲ: ಸಚಿವ ಜಮೀರ್
Team Udayavani, May 2, 2019, 3:00 AM IST
ಹುಬ್ಬಳ್ಳಿ: ಮಂಡ್ಯ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೇಸರಗೊಂಡು ಮನೆಯಲ್ಲಿ ಕುಳಿತಿದ್ದರೆ ವಿನಃ ಪಕ್ಷ ವಿರೋಧಿ ಕಾರ್ಯ ಮಾಡಿಲ್ಲ. ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಮತ ಹಾಕಿಲ್ಲ. ಸಚಿವ ಜಿ.ಟಿ.ದೇವೇಗೌಡ ಹಾಗೇಕೆ ಹೇಳಿದ್ದಾರೋ ಗೊತ್ತಿಲ್ಲ ಎಂದು ಸಚಿವ ಜಮೀರ್ ಅಹ್ಮದ ಖಾನ್ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಕ್ಷೇತ್ರ ಬಿಟ್ಟರೆ ಇನ್ನುಳಿದ ಯಾವ ಜಿಲ್ಲೆಗಳಲ್ಲೂ ಸಮಸ್ಯೆ ಇರಲಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೇಸರಗೊಂಡು ಮನೆಯಲ್ಲಿ ಇದ್ದರೆ ಹೊರತು ಸುಮಲತಾ ಪರವಾಗಿ ಕೆಲಸ ಮಾಡಿಲ್ಲ. ಕಾಂಗ್ರೆಸ್ನವರು ಜೆಡಿಎಸ್ಗೆ ಮತ ಹಾಕಿಸಿದ್ದಾರೆಯೇ ಹೊರತು ಬಿಜೆಪಿಗೆ ಮತ ಹಾಕಿಲ್ಲ.
ಮಂಡ್ಯದಲ್ಲಿ ಸಿಎಂ ಕುಮಾರಸ್ವಾಮಿಯವರು ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರ ವಿಶ್ವಾಸ ತೆಗೆದುಕೊಳ್ಳಬೇಕಿತ್ತು. ಆದರೆ, ಅವರು ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ನಿಖಿಲ್ ಕುಮಾರಸ್ವಾಮಿ 3 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಿದ್ದರು. ಈಗಲೂ ನಿಖಿಲ್ 1.5 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್