ತೇಜ್ ಬಹದ್ದೂರ್ ನಾಮಪತ್ರ ತಿರಸ್ಕೃತ
Team Udayavani, May 2, 2019, 6:10 AM IST
ಹೊಸದಿಲ್ಲಿ: ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಿಎಸ್ಎಫ್ನಿಂದ ವಜಾಗೊಂಡ ಯೋಧ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಎ. 29ರಂದು ಎಸ್ಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಯಾದವ್, ತಾವು ವಜಾಗೊಂಡ ಮಾಹಿತಿ ನಮೂದಿಸಿರಲಿಲ್ಲ. ಹೀಗಾಗಿ ಮಂಗಳವಾರ ಯಾದವ್ಗೆ ನೋಟಿಸ್ ನೀಡಲಾಗಿದ್ದು, ಸೂಕ್ತ ದಾಖಲೆಗಳನ್ನು ಬುಧವಾರ ಬೆಳಗ್ಗೆ 11 ಗಂಟೆಯೊಳಗೆ ಸಲ್ಲಿಸಬೇಕು ಎಂದು ಸೂಚಿಸಿದ್ದರು. ಆದರೆ ಸಲ್ಲಿಸದೇ ಇದ್ದ ಹಿನ್ನೆಲೆಯಲ್ಲಿ ನಾಮಪತ್ರ ತಿರಸ್ಕರಿಸಿದ್ದಾಗಿ ಆಯೋಗ ಹೇಳಿದೆ. ಆದರೆ ಇದರ ವಿರುದ್ಧ ಸುಪ್ರೀಂ ಕೋರ್ಟ್ಗೆ ಹೋಗುವುದಾಗಿ ಅವರು ಹೇಳಿದ್ದಾರೆ.