ಬತ್ತುತ್ತಿದೆ ಜೀವಜಲ; ಜನ ಪ್ರತಿನಿಧಿಗಳಿಲ್ಲ ಕಾಳಜಿ


Team Udayavani, May 2, 2019, 2:25 PM IST

bag-2

ಕಂದಗಲ್ಲ: ದಿನೇ ದಿನೇ ಬೇಸಿಗೆಯ ಬಿಸಿಲಿನ ಪ್ರಕರತೆ ಹೆಚ್ಚುತ್ತಿದೆ. ಸಕಾಲದಲ್ಲಿ ಮಳೆಯಿಲ್ಲದೆ ಕೆರೆ ಹಳ್ಳಗಳೆಲ್ಲ ಬತ್ತಿವೆ. ಇಳಕಲ್ಲ ತಾಲೂಕಿನ ಕಂದಗಲ್ಲ ಗ್ರಾಮ ಸೇರಿದಂತೆ ಹಲವು ಗ್ರಾಮಗಳ ಜನ ಜಾನುವಾರುಗಳು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿಯುಂಟಾಗಿದೆ.

ಈ ಭಾಗದ ಕಂದಗಲ್ಲ, ಗೋನಾಳ ಎಸ್‌ ಕೆ, ಓತಗೇರಿ, ಗೋನಾಳ ಎಸ್‌ಟಿ, ನಂದವಾಡಗಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಟ್ಯಾಂಕರ್‌ ನೀರೇ ಗತಿಯಾಗಿದೆ. ಹೊಳೆ ಮೂಲಕ ನೀರು ಕೊಡುತ್ತಿದ್ದರೂ ಸಾಕಾಗುತ್ತಿಲ್ಲ. ನಂದವಾಡಗಿ ಜನರಿಗೆ ಕೆರೆಯ ನೀರು ಆಧಾರವಾಗಿದ್ದು, ಈಗ ಕೆರೆಯಲ್ಲಿ ಅಲ್ಪ ಪ್ರಮಾಣದ ನೀರು ಮಾತ್ರ ಉಳಿದಿದೆ. ಕೆರೆ ನೀರು ಖಾಲಿಯಾದರೆ ನಂದವಾಡಗಿ ಜನರಿಗೆ ನೀರಿನ ದೊಡ್ಡ ಪ್ರಮಾಣದಲ್ಲಿ ಉಂಟಾಗುತ್ತದೆ. ಗ್ರಾಮಗಳಲ್ಲಿ ಹಾಕಿರುವ ಬೋರವೆಲ್ಗಳಲ್ಲಿ ಸವಳು ನೀರು ಬರುತ್ತಿದ್ದು, ಕುಡಿಯಲು ಯೋಗ್ಯವಾಗಿಲ್ಲ. ಕುಡಿಯುವ ನೀರು ಎಲ್ಲಿಂದ ತರಬೇಕು ಎಂಬುದು ಗ್ರಾಮಸ್ಥರ ಚಿಂತೆಯಾಗಿದೆ.

ಕಳೆದ ನಾಲ್ಕು ವರ್ಷಗಳಿಂದ ಸಮರ್ಪಕ ಮಳೆಯಿಲ್ಲದ್ದರಿಂದ ಹಳ್ಳ ಕೊಳ್ಳ ಕೆರೆಗಳಲ್ಲಿ ಅಂತರಜಲ ಮಟ್ಟ ಕುಸಿದಿದೆ. ಪ್ರಾಣಿ ಪಕ್ಷಿಗಳು ನೀರಿಗಾಗಿ ಪರದಾಡುತ್ತಿವೆ. ನೂರಾರು ವರ್ಷಗಳ ಹಿಂದಿನ ಕೆರೆಗಳು ಇದ್ದರೂ ನೀರಿಲ್ಲದೇ ಒಣಗಿವೆ. ಸರ್ಕಾರ ಕೆರೆಗಳಿಗೆ ನೀರು ತುಂಬಿಸಿ ರೈತರಿಗೆ ಅನುಕೂಲ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂಬುದು ಗ್ರಾಮಸ್ಥರ ಆಕ್ರೋಶವಾಗಿದೆ.

ಇಳಕಲ್ಲ ತಾಲೂಕಿನಲ್ಲಿ ಯಾವ ನದಿಗಳು ಹರಿದಿಲ್ಲ. ನದಿ ಪಾತ್ರದ ಹಳ್ಳಗಳೂ ಇಲ್ಲ. ನೀರಾವರಿ ಸೌಲಭ್ಯವಂತೂ ಇಲ್ಲವೇ ಇಲ್ಲ, ಸಂಪೂರ್ಣ ಬರ ಪ್ರದೇಶವಾಗಿದೆ. 800-1000 ಅಡಿ ಕೊಳವೆ ಬಾವಿ ಕೊರೆದರೂ ಒಂದು ಹನಿ ನೀರು ಬರುತ್ತಿಲ್ಲ. ಈ ತಾಲೂಕಿಗೆ ರಾಮತಾಳ ಕೊಪ್ಪಳ ಹಾಗೂ ನಂದವಾಡಗಿ, ಏತ ನೀರಾವರಿ ಮೂಲಕ ನೀರು ಒದಗಿಸಿದರೆ ಬರ ಪ್ರದೇಶವನ್ನು ಸದಾ ಹಚ್ಚು ಹಸಿರಾಗಿಸುವುದಾಗಿ ಕಳೆದ 15 ವರ್ಷಗಳಿಂದ ಜನಪ್ರತಿನಿಧಿಗಳು ಹೇಳುತ್ತಾ ಬಂದಿದ್ದಾರೆ. ಇಚ್ಚಾಶಕ್ತಿ ಕೊರತೆಯಿಂದ ನೀರಾವರಿ ಸೌಲಭ್ಯ ದೊರೆತಿಲ್ಲ.

ತಾಲೂಕಿನ ಬರ ಪರಿಹಾರವಾಗಬೇಕಾದರೆ ನೀರಿನ ಭವಣೆ ತಪ್ಪಿಸಲು ತಾಲೂಕಿನಲ್ಲಿರುವ ಬಲಕುಂದಿ, ಚಿಕ್ಕಕೊಡಗಲಿ ಹಿರೇಶಿಂಗನಗುತ್ತಿ ಕಂದಗಲ್ಲಿ ನಂದವಾಡಗಿ ಮರಟಗೇರಿ ಕೆರೆಗೆ ನೀರು ತುಂಬಿಸಿದರೆ ನೀರಿನ ಬರದ ಜೊತೆಗೆ ನೀರಾವರಿ ಸೌಲಭ್ಯ ದೊರೆಯುತ್ತದೆ. ಕೃಷಿಕರು ಬದುಕಲು ದಾರಿಯಾಗುತ್ತದೆ ಎಂಬುದು ಜನರ ಅಭಿಪ್ರಾಯವಾಗಿದೆ.

ಕೆರೆಗೆ ನೀರು ತುಂಬಿಸಿ: ಕೃಷ್ಣಾ ನದಿಯಿಂದ ಕೆರೆಗಳಿಗೆ ನೀರು ತುಂಬಿಸುವ ಉದ್ದೇಶಿತ ಯೋಜನೆಯಿಡಿ ಕೆರೆಗಳಿಗೆ ನೀರು ತುಂಬಿಸುವದರಿಂದ ಅಂತ‌ರ್ಜಲ ಮಟ್ಟ ಹೆಚ್ಚುತ್ತದೆ. ಜನ ಜಾನುವಾರುಗಳಿಗೆ ಅನುಕೂಲವಾಗಲಿದೆ. ಬರಿದಾದ ಕೊಳವೆ ಬಾವಿಗಳಿಗೆ ನೀರು ಬಂದು ಕೃಷಿ ಚಟುವಟಿಕೆಗೆ ಜೀವ ಬಂದಗಾಗುತ್ತದೆ. ಬಡ ರೈತರ ಬದುಕಿಗೆ ಆಸರೆಯಾಗುವುದು. ಕೃಷಿ ಕಾರ್ಮಿಕರಿಗೆ ಕೂಲಿ ಕೆಲಸ ಸಿಕ್ಕು ಗೂಳೆ ಹೋಗುವುದು ತಪ್ಪುವುದು. ಸರಕಾರ ಈ ಭಾಗದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೆ ತರುತ್ತಿಲ್ಲ. ಬರಪೀಡಿತ ತಾಲೂಕಿನ ಜನರಿಗೆ ನೀರಿನ ಭವಣೆಗೆ ಕಂಗಾಲಾಗಿದ್ದಾರೆ.

ಪ್ರತಿಸಲ ಚುನಾವಣೆ ಬಂದಾಗ ಒಮ್ಮೆ ರಾಜಕೀಯ ಪಕ್ಷಗಳು ಭರವಸೆ ನೀಡುತ್ತಲೇ ಬರುತ್ತೇವೆ. ಆ ಭರವಸೆಗಳು ಈಡೇರಿಸಲ್ಲ. ರೈತರ ಜನಸಾಮಾನ್ಯರ ಪರವಾಗಿ ಜನಪ್ರತಿನಿಧಿಗಳು ಕೆಲಸ ಮಾಡುತ್ತಿಲ್ಲ. ಕೆರೆ ತುಂಬಿಸುವ ಮಹತ್ವದ ಯೋಜನೆ ಆದಷ್ಟು ಬೇಗ ಅನುಷ್ಠಾನ ವಾಗಬೇಕು ಎಂಬುದು ಈ ಭಾಗದ ರೈತರ ಒತ್ತಾಯವಾಗಿದೆ.

ಕಂದಗಲ್ಲ ಭಾಗದಲ್ಲಿ ನೀರಿನ ಸಮಸ್ಯೆ ಬೆಟ್ಟದಷ್ಟಿದೆ. ಊರಿನಲ್ಲಿ ಕೊಳವೆ ಭಾವಿಗಳಲ್ಲಿ ನೀರಿಲ್ಲ, ಟ್ಯಾಂಕರ ಮೂಲಕ ನೀರು ಕೊಡುತ್ತಾರೆ. ಅವು ಸಾಕಾಗುತ್ತಿಲ್ಲ. ಹೊಳೆ ನೀರು ಬೀಡುತ್ತಾರೆ ಒಬ್ಬರಿಗೆ ಸಿಕ್ಕರೆ ಮತ್ತೂಬ್ಬರಿಗೆ ಸಿಗುತ್ತಿಲ್ಲ. ಲಭ್ಯವಾದ ನೀರಿನಲ್ಲಿಯೇ ದನಕರುಗಳಿಗೆ ಕುಡಿಸಬೇಕು. ಕಳೆದ ಹಲವಾರ ದಿನಗಳಿಂದ ನೀರಿನ ತೀವ್ರ ಸಮಸ್ಯೆಯಾಗಿದೆ. ನೀರಿನ ಸಮಸ್ಯೆ ನಿವಾರಣೆಗೆ ಕೆರೆಗೆ ನೀರು ತುಂಬಿಸಿದರೆ ಶಾಶ್ವತ ನೀರಿನ ಭವಣೆ ತಪ್ಪುತ್ತದೆ ಎಂದು ಕಂದಗಲ್ಲ ಗ್ರಾಮಸ್ಥರ ಬಯಕೆಯಾಗಿದೆ.

ನಾಗಭೂಷಣ ಶಿಂಪಿ

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.