ಫೈರಿಂಗ್ನಲ್ಲಿ ಎಎಸ್ಐ ಸಾವು
Team Udayavani, May 3, 2019, 6:23 AM IST
ಪಶ್ಚಿಮ ಬಂಗಾಲದ ಹೌರಾ ಜಿಲ್ಲೆಯಲ್ಲಿ ಚುನಾವಣೆ ಕರ್ತವ್ಯದಲ್ಲಿ ನಿರತರಾಗಿದ್ದ ಅಸ್ಸಾಂ ರೈಫಲ್ಸ್ನ ಯೋಧ ಗುಂಡು ಹಾರಿಸಿದ ಪರಿಣಾಮ ಒಬ್ಬ ಸಹಾಯಕ ಸಬ್ ಇನ್ಸ್ಪೆಕ್ಟರ್ ಅಸುನೀಗಿ, ಇಬ್ಬರು ಗಾಯಗೊಂಡಿದ್ದಾರೆ.
ಬಗ್ನಾನ್ ಎಂಬಲ್ಲಿ ಲಕ್ಷ್ಮೀಕಾಂತ್ ಬರ್ಮನ್ ಎಂಬಾತ 13 ಸುತ್ತು ಗುಂಡು ಹಾರಿಸಿದ್ದಾನೆ. ಅಸುನೀಗಿದ ಅಧಿಕಾರಿಯನ್ನು ಭೋಲಾನಾಥ್ ದಾಸ್ ಮತ್ತು ಗಾಯಗೊಂಡವರನ್ನು ಅನಿಲ್ ರಾಜ್ಬಾನ್ ಶಾಹಿ, ರಂತು ಮನಿ ಎಂಬವರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡು ಹಾರಿಸಿದಾತನನ್ನು ವಶಕ್ಕೆ ಪಡೆಯಲಾಗಿದೆ. ಆತ ಮಾನಸಿಕವಾಗಿ ಅಸ್ವಸ್ಥನಾಗಿದ್ದ. ಹೀಗಾಗಿ ಆತನನ್ನು ಚುನಾವಣೆ ಕರ್ತವ್ಯದಿಂದ ಹೊರಗಿಡಲಾಗಿತ್ತು. ಇದರ ಹೊರತಾಗಿಯೂ ಲಕ್ಷ್ಮೀಕಾಂತ್ ಬರ್ಮನ್ ಎಂಬಾತ ಗನ್ ಸೆಳೆದು ಗುಂಡು ಹಾರಿಸಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಿದ್ಧಿನಾಥ್ ಗುಪ್ತಾ ಹೇಳಿದ್ದಾರೆ. ಮೊದಲ ಹಂತದ ಮತದಾನದ ದಿನದಿಂದಲೂ ಪಶ್ಚಿಮ ಬಂಗಾಲದಲ್ಲಿ ಹಿಂಸಾಚಾರ ಸಂಭವಿಸುತ್ತಿದೆ. ಅದಕ್ಕೆ ಪೂರಕವಾಗಿ ಗುರುವಾರ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು