ಮನೆಯೇ ಮಾದಕ ವಸ್ತು ಕಾರ್ಖಾನೆ!


Team Udayavani, May 3, 2019, 11:15 AM IST

blore6

ಬೆಂಗಳೂರು: ಮನೆಯಲ್ಲೇ ಮಾದಕ ವಸ್ತು  ಕೆಟಾಮಿನ್‌ ತಯಾರು ಮಾಡಿ ಅಂತಾರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರಾಟ ಜಾಲ ಹೊಂದಿದ್ದ ಮೈಸೂರು ಮೂಲದ ಆರೋಪಿ ಸೇರಿದಂತೆ ಇಬ್ಬರು ಮಾದಕ ವಸ್ತು ನಿಯಂತ್ರಣ ಘಟಕದ (ಎನ್‌ಸಿಬಿ) ಅಧಿಕಾರಿಗಳ ಬಲೆಗೆ ಬಿದ್ದಿದ್ದು, ಸುಮಾರು ಮೂರು ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ.

ಮೈಸೂರು ಮೂಲದ, ಕೆಂಗೇರಿ ನಿವಾಸಿ ಶಿವರಾಜ್‌ ಅರಸ್‌ (36) ಮತ್ತು ಚೆನ್ನೈ ಮೂಲದ ಜೆ.ಕಣ್ಣನ್‌ (33) ಬಂಧಿತರು. ಆರೋಪಿಗಳಿಂದ 52 ಕೆ.ಜಿ.200 ಗ್ರಾಂ ತೂಕದ ಮಾದಕ ವಸ್ತು ಕೆಟಾಮಿನ್‌ ವಶಕ್ಕೆ ಪಡೆದುಕೊಳ್ಳಲಾಗಿದೆ. ಇದರ ಮೌಲ್ಯ ಭಾರತದಲ್ಲಿ ಮೂರುವರೆ ಕೋಟಿ ರೂ.ಗೂ ಅಧಿಕ, ಅಂತಾರಾಷ್ಟ್ರೀಯ ಮಟ್ಟದಲ್ಲಿ 30-50 ಕೋಟಿ ರೂ. ಇದೆ ಎಂದು ಎಸಿಬಿ ಅಧಿಕಾರಿಗಳು ಅಂದಾಜಿಸಿದ್ದಾರೆ.

ಏ.30 ಮೆಜೆಸ್ಟಿಕ್‌ನ ಮೂವಿ ಲ್ಯಾಂಡ್‌ ಟಾಕೀಸ್‌ ಸಮೀಪದಲ್ಲಿ ಆರೋಪಿ ಶಿವರಾಜ್‌ ಅರಸ್‌ ಗೋಣಿಚೀಲವೊಂದರಲ್ಲಿ ಅಕ್ಕಿ ಚೀಲ ಇಟ್ಟು ಅದರೊಳಗಿನ ಪ್ಲಾಸ್ಟಿಕ್‌ ಕವರ್‌ನಲ್ಲಿ ಮಾದಕ ವಸ್ತು ಕೆಟಾಮಿನ್‌ ಇಟ್ಟು ಕಣ್ಣನ್‌ಗೆ ಮಾರಾಟ ಮಾಡಲು ಸಿದ್ಧತೆ ನಡೆಸಿದ್ದ. ಈ ಖಚಿತ ಮಾಹಿತಿ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ ಎನ್‌ಸಿಬಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಲು ಮುಂದಾಗಿದ್ದು, ಆರೋಪಿ ಕಣ್ಣನ್‌ನನ್ನು ಸ್ಥಳದಲ್ಲೇ ಬಂಧಿಸಿದ್ದು, ಮತ್ತೂಬ್ಬ ಆರೋಪಿ ಶಿವರಾಜ್‌ ಅರಸ್‌ ತಪ್ಪಿಸಿಕೊಂಡಿದ್ದ. ಬಂಧಿತ ನಿಂದ 26 ಕೆ.ಜಿ. 750 ಗ್ರಾಂ ಕೆಟಾಮಿನ್‌ ವಶಪಡಿಸಿಕೊಳ್ಳಲಾಗಿತ್ತು.

ಅಧಿಕಾರಿಗಳ ಹತ್ಯೆಗೆ ಯತ್ನ: ಮತ್ತೂಬ್ಬ ಆರೋಪಿ ಶಿವರಾಜ್‌ ಅರಸ್‌ ಕಾರಿನಲ್ಲಿ ತಪ್ಪಿಸಿಕೊಳ್ಳಲು ಮುಂದಾಗಿದ್ದು, ಅದನ್ನು ತಡೆಯಲು ಮುಂದಾದ ಅಧಿಕಾರಿಗಳ ಮೇಲೆಯೇ ಕಾರನ್ನು ಹತ್ತಿಸಿ ಕೊಲೆಗೈಯಲು ಯತ್ನಿಸಿದ್ದಾನೆ. ಕೊನೆಗೆ ಆರೋಪಿಯ ಹಿನ್ನೆಲೆ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು ಏ.1ರಂದು ಯಲಹಂಕದಲ್ಲಿ ಬಂಧಿಸಿದ್ದರು. ಈ ವೇಳೆ ತಾನು ಕೆಂಗೇರಿ ಹಾಗೂ ವಿದ್ಯಾನಗರದಲ್ಲಿ ಮನೆಗಳನ್ನು ಹೊಂದಿದ್ದು, ಕೆಂಗೇರಿ ಮನೆಯಲ್ಲೇ ಮಾದಕ ವಸ್ತು ಉತ್ಪಾದನೆ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದ.

ಮನೆಯಲ್ಲೇ ಕೆಟಾಮಿನ್‌ ತಯಾರಿ: ಶಿವರಾಜ್‌ ಅರಸ್‌ನ ಹೇಳಿಕೆಯಿಂದ ಅಚ್ಚರಿಗೊಂಡ ಎನ್‌ಸಿಬಿ ಅಧಿಕಾರಿಗಳು ಮೇ 2ರಂದು ಕೂಡಲೇ ಸ್ಥಳೀಯ ಪೊಲೀಸರು ಹಾಗೂ ಸಿಐಎಸ್‌ಎಫ್ ಸಮ್ಮುಖದಲ್ಲಿ ಆತನ ಮನೆಗೆ ಕರೆದೊಯ್ದಿದ್ದಾರೆ. ನಂತರ ನೆಲಮಳಿಗೆಯಲ್ಲಿ ತೆರೆದಿದ್ದ ರಹಸ್ಯ ಲ್ಯಾಬ್‌ ಮೇಲೆ ದಾಳಿ ನಡೆಸಿ, ಅಕ್ರಮವಾಗಿ ತಾಯಾರು ಮಾಡಿದ್ದ 24 ಕೆ.ಜಿ. 450 ಗ್ರಾಂ ಕೆಟಾಮಿನ್‌ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಆರೋಪಿ ಕೆಟಾಮಿನ್‌ ಹಾಗೂ ಇತರೆ ಮಾದಕ ವಸ್ತುಗಳನ್ನು ತಯಾರು ಮಾಡುತ್ತಿರುವುದು ಕಂಡು ಬಂದಿದ್ದು, ಅವುಗಳನ್ನು ನೆರೆ ರಾಜ್ಯಗಳು ಹಾಗೂ ಅಂತಾರಾಷ್ಟ್ರೀಯ ಮಾದಕವಸ್ತು ಮಾರುಕಟ್ಟೆಗೆ ಸಾಗಾಟ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಆರೋಪಿಯ ಲ್ಯಾಬ್‌ನಲ್ಲಿ ಮಾದಕ ವಸ್ತು ತಯಾರು ಮಾಡಲು ಅಗತ್ಯವಿರುವ ರಾಸಾಯನಿಕ ವಸ್ತುಗಳು, ಬಾಯ್ಲರ್‌ಗಳು ಹಾಗೂ ಹಣ ಎಣಿಸುವ ಯಂತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಹೇಳಿದರು.

ಪ್ರಾಥಮಿಕ ಮಾಹಿತಿ ಪ್ರಕಾರ ಶಿವರಾಜ್‌ ಅರಸ್‌, ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಕೇರಳ, ಮುಂಬೈ ಹಾಗೂ ಇತರೆ ರಾಜ್ಯಗಳಿಗೆ ಕೆಟಾಮಿನ್‌ ಸರಬರಾಜು ಮಾಡುತ್ತಿದ್ದು, ಕೆಲ ಅಂತಾರಾಷ್ಟ್ರೀಯ ಮಧ್ಯವರ್ತಿಗಳ ಜತೆ ನಿಕಟ ಸಂಪರ್ಕದಲ್ಲಿರುವುದು ಕಂಡು ಬಂದಿದ್ದು, ಹೆಚ್ಚಿನ ತನಿಖೆಗಾಗಿ ಎನ್‌ಡಿಪಿಎಸ್‌ ಕಾಯ್ದೆ ಅಡಿಯಲ್ಲಿ ವಶಕ್ಕೆ ಪಡೆಯಲಾಗಿದೆ.

ಹೈದ್ರಾಬಾದ್‌ನಲ್ಲಿ ಕಾರ್ಖಾನೆ: ಶಿವರಾಜ್‌ ಮತ್ತೂಂದು ಸ್ಫೋಟಕ ಮಾಹಿತಿ ನೀಡಿದ್ದು, ತನ್ನೊಡನೆ ಸಂಪರ್ಕದಲ್ಲಿರುವ ಕೆಲ ವ್ಯಕ್ತಿಗಳು ಹೈದ್ರಾಬಾದ್‌ನಲ್ಲಿ ಮಾದಕ ವಸ್ತು ತಯಾರು ಮಾಡುವ ಸಣ್ಣ ಪ್ರಮಾಣದ ಕಾರ್ಖಾನೆಗಳನ್ನು ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾನೆ. ಈ ಸಂಬಂಧ ಹೈದ್ರಾಬಾದ್‌ ವಿಭಾಗದ ಎನ್‌ಸಿಬಿ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

ದಕ್ಷಿಣ ಏಷ್ಯಾ ರಾಷ್ಟ್ರಗಳ ಜತೆ ಸಂಪರ್ಕ

ಶಿವರಾಜ್‌ ಅರಸ್‌ನ ಮಾದಕ ವಸ್ತು ಮಾರಾಟ ಜಾಲವನ್ನು ಭಾರತ ಮಾತ್ರ ವಲ್ಲದೆ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲೂ ವಿಸ್ತರಿಸಿಕೊಂಡಿದ್ದಾನೆ. ಪ್ರಮುಖವಾಗಿ ಆಸ್ಟ್ರೇಲಿಯಾದ ಮಾದಕ ವಸ್ತು ಮಧ್ಯವರ್ತಿಗಳ ಜತೆ ನಿಕಟ ಸಂಪರ್ಕ ಹೊಂದಿದ್ದಾನೆ. ಅಲ್ಲದೆ, ಹೆಮ್ಮಿಗೆಪುರದಲ್ಲಿ ಬೃಹತ್‌ ಮನೆಯೊಂದನ್ನು ಹೊಂದಿದ್ದಾನೆ ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.