ಈ ವರ್ಷವಾದರೂ ಆರಂಭಗೊಳ್ಳುವುದೇ ಡಿಗ್ರಿ ಕಾಲೇಜು?


Team Udayavani, May 3, 2019, 1:04 PM IST

bagalkote-2-tdy..

ಗುಳೇದಗುಡ್ಡ: ಪಟ್ಟಣದಲ್ಲಿರುವ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜು.

ಗುಳೇದಗುಡ್ಡ: ಖಣಗಳಿಗೆ ಹೆಸರುವಾಸಿಯಾದ ಗುಳೇದಗುಡ್ಡ ತಾಲೂಕು ಕೇಂದ್ರವಾಗಿ ವರ್ಷ ಕಳೆದಿದೆ. ಪ್ರಥಮ ದರ್ಜೆ ಕಾಲೇಜು ಆರಂಭವಾಗಲು ಹಣಕಾಸು ಇಲಾಖೆ ಒಪ್ಪಿಗೆಯೊಂದೆ ಬಾಕಿ ಎಂದು ಶಾಸಕ ಸಿದ್ದರಾಮಯ್ಯ ಹೇಳಿದ್ದರೂ ಇದುವರೆಗೂ ಕಾಲೇಜು ಆರಂಭದ ಬಗ್ಗೆ ಮಾಹಿತಿಯಿಲ್ಲ.

ರಾಜ್ಯ ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ಧರಾಮಯ್ಯ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ವರ್ಷ ಕಳೆಯುತ್ತ ಬಂದರೂ ಪ್ರಥಮ ದರ್ಜೆ ಕಾಲೇಜು ಆರಂಭವಾಗುತ್ತಿಲ್ಲ. ಮೂಲಗಳ ಪ್ರಕಾರ ಇದುವರೆಗೂ ಹಣಕಾಸು ಇಲಾಖೆಯ ಒಪ್ಪಿಗೆ ಸಿಕ್ಕಿಲ್ಲ ಎನ್ನಲಾಗುತ್ತಿದೆ. ಪ್ರಸಕ್ತ ವರ್ಷವು ಡಿಗ್ರಿ ಕಾಲೇಜು ಆರಂಭಗೊಳ್ಳುವುದು ಅನುಮಾನ.

2018ರ ಶೈಕ್ಷಣಿಕ ವರ್ಷದಲ್ಲಿ ಬಾದಾಮಿ ಶಾಸಕ ಸಿದ್ದರಾಮಯ್ಯನವರು ಶಿಕ್ಷಣ ಇಲಾಖೆ ಉನ್ನತಾಧಿಕಾರಿಗಳಿಗೆ ಗುಳೇದಗುಡ್ಡ ಪಟ್ಟಣಕ್ಕೆ ಕೂಡಲೇ ಪದವಿ ಕಾಲೇಜು ಮಂಜೂರಿ ಮಾಡಲು ತಿಳಿಸಿದ್ದರು. ಇದಕ್ಕೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಒಪ್ಪಿಗೆ ಸೂಚಿಸಿದ್ದರು. ಕರಡು ಪ್ರತಿಗೆ ಅಧೀನ ಕಾರ್ಯದರ್ಶಿ ಒಪ್ಪಿಗೆ ಸಿಕ್ಕಿತ್ತು. ಹಣಕಾಸು ಇಲಾಖೆ ಒಪ್ಪಿಗೆ ಬಾಕಿಯಿದ್ದು, ಶೀಘ್ರ ಆರಂಭಗೊಳ್ಳಲಿದೆ ಎಂದು ಕಳೆದ ವರ್ಷ ಸಿದ್ಧರಾಮಯ್ಯ ಹೇಳಿದ್ದರು. ಮತ್ತೆ ಒಂದು ತಿಂಗಳಲ್ಲಿ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಆದರೂ ಇದುವರೆಗೂ ಕಾಲೇಜು ಆರಂಭದ ಬಗ್ಗೆ ಮಾಹಿತಿ ಇಲ್ಲ.

ವರ್ಷಕ್ಕೆ 500 ವಿದ್ಯಾರ್ಥಿಗಳು: ಸದ್ಯ ಪಟ್ಟಣದಲ್ಲಿ ಒಂದೇ ಖಾಸಗಿ ಪದವಿ ಕಾಲೇಜಿದ್ದು, ಅಲ್ಲಿ ಬಿ.ಎ, ಬಿಕಾಂ, ಬಿಎಸ್ಸಿ, ಬಿಸಿಎ ಪದವಿಗಳಿವೆ. ಪಟ್ಟಣದಲ್ಲಿಯೇ ಸುಮಾರು ಐದು ಪಿಯು ಕಾಲೇಜುಗಳಿವೆ. ವರ್ಷಕ್ಕೆ ಸುಮಾರು 500 ವಿದ್ಯಾರ್ಥಿಗಳು ಪಿಯುಸಿ ತೇರ್ಗಡೆ ಹೊಂದಿ ಪದವಿ ಕಲಿಯಲು ಬರುತ್ತಾರೆ. ಎಲ್ಲರಿಗೂ ಒಂದೇ ಕಾಲೇಜಿನಲ್ಲಿ ಪ್ರವೇಶ ದೊರೆಯುವುದು ಕಷ್ಟ.

ಪದವಿ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಅವರಿಗೆ ಬೇಕಾಗುವ ಐಚ್ಚಿಕ ವಿಷಯಗಳು ಸಿಗುವುದಿಲ್ಲ. ಹೆಚ್ಚಿನ ಡೊನೇಶನ್‌ ಕೊಟ್ಟು ಶಿಕ್ಷಣ ಪಡೆಯುವುದು ಬಡ ನೇಕಾರರಿಗೆ ಕಷ್ಟವಾಗಿದೆ. ಅಲ್ಲದೇ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೂ ಸಹ ತೊಂದರೆಯಾಗುತ್ತದೆ.

ನೇಕಾರರ ಪಟ್ಟಣವಾದ ಗುಳೇದಗುಡ್ಡ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಬಡ ವಿದ್ಯಾರ್ಥಿಗಳು 22ಕಿಮೀ. ಬಾದಾಮಿಯ ಸರಕಾರಿ ಪದವಿ ಕಾಲೇಜಿನತ್ತ ಹಾಗೂ 25 ಕಿಮೀ ದೂರದ ಬಾಗಲಕೋಟೆ ನಗರ ಕಡೆಗೆ ಮುಖ ಮಾಡುವಂತಾಗಿದೆ. ಕಾಲೇಜು ಆರಂಭವಾದರೇ ಬಡ ಕುಟುಂಬದ ಮಕ್ಕಳು ಬೇರೆ ಪಟ್ಟಣಕ್ಕೆ ತೆರಳುವುದು ತಪ್ಪ್ಪುತ್ತದೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.