ರಸ್ತೆ ನಿರ್ಮಾಣ ತಡೆದು ಸ್ಥಳದಲ್ಲೇ ರೈತರ ಠಿಕಾಣಿ

•ಹಲಗಾ-ಮಚ್ಛೆ ರಸ್ತೆಗೆ ಭೂಮಿ ಕೊಡಲ್ಲ ಎಂದ ರೈತರು•ಫಲವತ್ತಾದ ಭೂಮಿಗೆ ಕನ್ನ ಹಾಕಿದ ಪ್ರಾಧಿಕಾರ: ಆಕ್ರೋಶ

Team Udayavani, May 3, 2019, 2:10 PM IST

belegavi-3-..

ಬೆಳಗಾವಿ: ಹಲಗಾ-ಮಚ್ಛೆ ರಸ್ತೆ ನಿರ್ಮಾಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಜಮೀನು ಸ್ವಾಧೀನ ಪಡಿಸಿಕೊಳ್ಳಲು ಮುಂದಾದಾಗ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ: ತಾಲೂಕಿನ ಹಲಗಾದಿಂದ ಮಚ್ಛೆವರೆಗೆ ರಸ್ತೆ ನಿರ್ಮಾಣಕ್ಕಾಗಿ ಫಲವತ್ತಾದ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಗುರುವಾರ ಕಾಮಗಾರಿ ತಡೆದು ಪ್ರತಿಭಟನೆ ನಡೆಸಿ ಸ್ಥಳದಲ್ಲಿಯೇ ಠಿಕಾಣಿ ಹೂಡಿದ್ದಾರೆ.

ಬುಧವಾರದಿಂದಲೇ ಜಮೀನು ಸಮತಟ್ಟು ಮಾಡಲು ಪ್ರಾಧಿಕಾರ ಸಿಬ್ಬಂದಿ ಆಗಮಿಸಿದ್ದರು. ಬುಧವಾರ ರೈತರು ಜಮಾಯಿಸಿ ಎಲ್ಲರನ್ನೂ ವಾಪಸು ಕಳುಹಿಸಿದ್ದರು. ಮತ್ತೆ ಗುರುವಾರ ಬೆಳಗ್ಗೆ ಬಂದು ಕಾಮಗಾರಿ ಆರಂಭಿಸುತ್ತಿದ್ದಾಗ ರೈತರು ಬಂದು ಪ್ರಾಧಿಕಾರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬೆಳಗಾವಿಯಿಂದ ಗೋವಾ ಗಡಿವರೆಗೆ ಒಟ್ಟು 84 ಕಿ.ಮೀ. ರಸ್ತೆ ನಿರ್ಮಾಣಕ್ಕೆ 2011ರಲ್ಲಿ ಪ್ರಾಧಿಕಾರ ನಿರ್ಣಯ ತೆಗೆದುಕೊಂಡಿದೆ. ಅದರಲ್ಲಿ ಒಟ್ಟು ಹಲಗಾ, ಬೆಳಗಾವಿ, ಹಳೇ ಬೆಳಗಾವಿ, ವಡಗಾಂವ, ಶಹಾಪುರ, ಅನಗೋಳ, ಮಜಗಾಂವ, ಮಚ್ಛೆ ಗ್ರಾಮಗಳ ಫಲವತ್ತಾದ ಭೂಮಿ ಬರುತ್ತವೆ. ಈ ಹಿಂದೆ 135 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳುವುದಾಗಿ ಪ್ರಾಧಿಕಾರ ಸುತ್ತೋಲೆ ಹೊರಡಿಸಿತ್ತು. ಈಗ ಮತ್ತೆ 25 ಎಕರೆ ಜಮೀನು ಹೆಚ್ಚುವರಿ ಮಾಡಿ 160 ಎಕರೆ ಜಮೀನನ್ನು ರಸ್ತೆಗೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಪ್ರಾಧಿಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಾಧಿಕಾರದ ನೀಲ ನಕ್ಷೆಯಲ್ಲಿ ಗುರುತಿಸಿದ ಈ ಎಲ್ಲ ಹಳ್ಳಿಗಳ ವ್ಯಾಪ್ತಿಯ ಒಟ್ಟು 12.5 ಕಿ.ಮೀ. ರಸ್ತೆ ಮಾರ್ಗ ಗುರುತಿಸಲಾಗಿದೆ. 8ಕ್ಕೂ ಹೆಚ್ಚು ಜೆಸಿಬಿ ಮೂಲಕ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಹಲಗಾದಿಂದ ಈವರೆಗೆ 3.5 ಕಿ.ಮೀ. ಜಾಗವನ್ನು ತೆರವು ಮಾಡಿ ಸಮತಟ್ಟು ಮಾಡಿಕೊಂಡಿದ್ದಾರೆ. ಅಷ್ಟರೊಳಗೆ ಸ್ಥಳಕ್ಕೆ ಧಾವಿಸಿದ ರೈತರು ಅಧಿಕಾರಿಗಳ ವಿರುದ್ಧ ಹರಿಹಾಯ್ದು, ಕಾಮಗಾರಿ ಆದೇಶ ಪ್ರತಿ ತೋರಿಸಿ ಕೆಲಸ ಆರಂಭಿಸಬೇಕು ಎಂದು ಪಟ್ಟು ಹಿಡಿದರು. ಆದರೆ ಪ್ರಾಧಿಕಾರ ಅಧಿಕಾರಿಗಳು ಪ್ರತಿ ತೋರಿಸದೇ ಕಾಮಗಾರಿ ಆರಂಭಿಸಲು ಮುಂದಾದರು. ಅಧಿಕಾರಿಗಳ ಬಳಿ ಕೆಲಸದ ಆದೇಶ ಪ್ರತಿ ಇಲ್ಲದ್ದನ್ನು ಮನಗಂಡ ರೈತರು ಕೆಲಸ ತಡೆ ಹಿಡಿದರು.

ಇಲ್ಲಿಯ ರೈತರು ಅತೀ ಬಡವರಾಗಿದ್ದು, ಒಂದು ಎಕರೆಕ್ಕಿಂತಲೂ ಕಡಿಮೆ ಜಮೀನು ಹೊಂದಿದ್ದಾರೆ. ಇದನ್ನೇ ನಂಬಿ ಬದುಕು ಸಾಗಿಸುತ್ತಿದ್ದಾರೆ. ಈಗ ಇದ್ದ 20-25 ಗುಂಟೆ ಜಮೀನು ಕಸಿದುಕೊಳ್ಳಲು ಮುಂದಾಗಿರುವುದರಿಂದ ಮುಂದಿನ ದಿನಗಳಲ್ಲಿ ರೈತರು ಬೀದಿಗೆ ಬರುವುದು ಖಚಿತ. ಹೀಗಾಗಿ ನಮ್ಮ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡಬಾರದು. ಫಲವತ್ತಾದ ಭೂಮಿಯನ್ನು ನಾವು ಕೊಡುವುದಿಲ್ಲ ಎಂದು ರೈತರ ಸುಭಾಷ ಚೌಗುಲೆ, ಮಹಾವೀರ ಹಣಮನ್ನವರ, ಕೃಷ್ಣಾ ಕಂಗ್ರಾಳಕರ, ಅಜಿತ ಕರಾಡ ಪಟ್ಟು ಹಿಡಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.