ಮಾವು ಮಾರ್ಕೆಟ್‌ಗೆ ಸೌಲಭ್ಯ ಕಲ್ಪಿಸಿ


Team Udayavani, May 3, 2019, 2:47 PM IST

kol-2

ಶ್ರೀನಿವಾಸಪುರ: ಕೃಷಿ ಉತ್ಪನ್ನ ಮಾರುಕಟ್ಟೆಗೆ ಮೂಲ ಸೌಕರ್ಯ, ಅಕ್ರಮ ತಡೆ, ಖಾಲಿ ಇರುವ ಹುದ್ದೆಗಳ ಭರ್ತಿ, ಕಮಿಷನ್‌ ಹಾವಳಿಗೆ ಕಡಿವಾಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಆಗ್ರಹಿಸಿತು.

ಎಪಿಎಂಸಿ ಅಧ್ಯಕ್ಷ ರಾಜೇಂದ್ರ ಪ್ರಸಾದ್‌ಗೆ ಮನವಿ ನೀಡಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಶ್ರೀನಿವಾಸಪುರ ಕೃಷಿ ಉತ್ಪನ್ನ ಮಾರುಕಟ್ಟೆ ಮಾವಿನ ಸುಗ್ಗಿ ಸಮಯದಲ್ಲಿ ಅಧಿಕಾರಿಗಳಿಗೆ ಚಿನ್ನದ ಮೊಟ್ಟೆ ಇಡುವ ಮಾರುಕಟ್ಟೆಯಾಗಿದೆ. ರೈತರ ಹೆಸರಿನಲ್ಲಿ ಲಕ್ಷಾಂತರ ರೂ. ಲೂಟಿ ಮಾಡುವ ಕಾಯಕವೇ ಹೊರತು ಯಾವುದೇ ಮೂಲ ಸೌಕರ್ಯ, ರೈತರ ಸಂರಕ್ಷಣೆ ಮಾಡುವಂತ ಕಾರ್ಯವಾಗುತ್ತಿಲ್ಲ ಎಂದು ದೂರಿದರು.

ಕಳೆದ ವರ್ಷ ಕಾರ್ಯದರ್ಶಿಯಾಗಿದ್ದವರು 60 ಲಕ್ಷ ರೂ. ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಅಮಾನತು ಮಾಡಿರುವ ಉದಾಹರಣೆ ಇದೆ. ರೈತರ ಮಾರುಕಟ್ಟೆ ಇಂದು ದಲ್ಲಾಳಿಗಳದ್ದಾಗಿದೆ. ಕಷ್ಟಾಪಟ್ಟು ಮಳೆ, ಬಿಸಿಲು, ಹಗಲು ರಾತ್ರಿಯನ್ನದೇ ತೀವ್ರ ಬರಗಾಲ ಮತ್ತು ಸರ್ಕಾರಗಳ ನಿರ್ಲಕ್ಷ್ಯದ ಮಧ್ಯದಲ್ಲೂ ತನ್ನ ಸ್ವಾಭಿಮಾನ ಬದುಕಿಗಾಗಿ ಕೃಷಿಯನ್ನೇ ನಂಬಿ ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದರೆ ಅದನ್ನು ಕಾಲಕಸದಂತೆ ಕಾಣುವ ದಲ್ಲಾಳಿಗಳು ಅವರ ತಾಳಕ್ಕೆ ತಕ್ಕಂತೆ ಕುಣಿಯುವ ಅಧಿಕಾರಿ ವರ್ಗ ಇವರ ಮದ್ಯೆ ನಲಗಿರುವ ರೈತರ ರಕ್ಷಣೆಗಾಗಿ ಜಿಲ್ಲಾಡಳಿತ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಅದರಲ್ಲೂ ಪ್ರಮುಖವಾಗಿ ಮಾವಿನ ಮಡಿಲೆಂದೇ ವಿಶ್ವವಿಖ್ಯಾತಿ ಪಡೆದಿರುವ ಶ್ರೀನಿವಾಸಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮೂಲ ಸೌಕರ್ಯಗಳಿಲ್ಲ ಎಂದು ದೂರಿದರು.

ಪ್ರತಿವರ್ಷ ಮಾವಿನ ಆವಕ ಹೆಚ್ಚಾದಾಗ ಮಾರುಕಟ್ಟೆಗೆ ಬರುವ ರೈತರಿಗೆ ಸಮರ್ಪಕ ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಕೊಠಡಿ, ಗುಣಮಟ್ಟದ ಊಟದ ವ್ಯವಸ್ಥೆ ಇಲ್ಲ. ಬಯಲಲ್ಲೇ ಮಲಗುವಂತ ಪರಿಸ್ಥಿತಿ ಉಂಟಾಗಿದೆ ಎಂದು ಆಡಳಿತ ಮಂಡಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ನಿಯಮ ಪಾಲಿಸಲ್ಲ: ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಮಾತನಾಡಿ, ಪ್ರತಿವರ್ಷ ಮಾವಿನ ಸುಗ್ಗಿಯ ಕಾಲದಲ್ಲಿ ಮಾತ್ರ ಅಧಿಕಾರಿಗಳಿಗೆ ಮಾರುಕಟ್ಟೆ ಜ್ಞಾಪಕಕ್ಕೆ ಬರುತ್ತದೆ. ಮುಂಚಿತವಾಗಿ ಇರುವ ಸಮಸ್ಯೆ ಬಗೆಹರಿಸಲು ಇಚ್ಛಾಶಕ್ತಿ ಇಲ್ಲ. ವಿಶ್ರಾಂತಿ ಗೃಹ ಪ್ರಾರಂಭವಾಗದೆ ಹಾಳು ಬೀಳುತ್ತಿವೆ. ಮಾವು ಮಂಡಿ ಕೆಲಸಕ್ಕೆ ಹೊರ ರಾಜ್ಯಗಳಿಂದ ಸಾವಿರಾರು ಸಂಖ್ಯೆಯ ಕಾರ್ಮಿಕರು ಮಾರುಕಟ್ಟೆಗೆ ಬರುವುದರಿಂದ ಇಲ್ಲಿ ಯಾವುದೇ ಸೌಲಭ್ಯಗಳಿಲ್ಲದ ಕಾರಣ ರೋಗ ರುಜಿನಗಳಿಂದ ನರಳಬೇಕಾದ ಪರಿಸ್ಥಿತಿ ಇದೆ. ಜೊತೆಗೆ ಸಿಬ್ಬಂದಿ ನೆಪದಲ್ಲಿ ಸರ್ಕಾರಕ್ಕೆ ಬರುವ ಆದಾಯ ಲೂಟಿ ಮಾಡುವಲ್ಲಿ ಇಲ್ಲಿನ ಸಿಬ್ಬಂದಿ ನಿರತವಾಗಿರುತ್ತಾರೆಯೇ ಹೊರತು, ಸರ್ಕಾರದ ನಿಯಮ ಪಾಲನೆ ಮಾಡುವುದಿಲ್ಲ ಎಂದು ಹೇಳಿದರು.

ಮಾರುಕಟ್ಟೆ ಸಮರ್ಪಕ ನಿರ್ವಹಣೆ: ಮನವಿ ಸ್ವೀಕರಿಸಿ ಅಧ್ಯಕ್ಷ ರಾಜೇಂದ್ರ ಪ್ರಸಾದ್‌ ಮಾತನಾಡಿ, ಮಾವಿನ ಮಾರುಕಟ್ಟೆಗೆ ಜಾಗದ ಕೊರತೆ ಜೊತೆಗೆ ಕುಡಿಯುವ ನೀರು, ಶೌಚಾಲಯಗಳ ಅವ್ಯವಸ್ಥೆ ಇರುವುದು ನಿಜ. ಅದರ ಜೊತೆಗೆ ಹಿಂದೆ ಇದ್ದ, ಕಾರ್ಯದರ್ಶಿ ಹಣ ದುರುಪಯೋಗ ಪಡಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ. ಜೊತೆಗೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿಂದ ಮಾರುಕಟ್ಟೆ ಸಮರ್ಪಕ ನಿರ್ವಹಣೆ ಮಾಡಲು ಆಗುತ್ತಿಲ್ಲ. ಆದರೂ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿ ಸರಿಪಡಿಸುವ ಭರವಸೆ ನೀಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷೆ ಎ.ನಳಿನಿ, ಹಸಿರುಸೇನೆ ಅಧ್ಯಕ್ಷ ಆಚಂಪಲ್ಲಿ ಗಂಗಾಧರ, ಹೊಸಹಳ್ಳಿ ಚಂದ್ರಪ್ಪ, ಬಂಗವಾದಿ ಮುನಿಯಪ್ಪ, ತೆರ್ನಹಳ್ಳಿ ರಮೇಶ್‌, ನಾಗರಾಜ, ವೆಂಕಿ, ರಾಯಲ್ಪಾಡು ಹರೀಶ್‌, ಕೆಂಬೋಡಿ ಕೃಷ್ಣೇಗೌಡ, ಪುತ್ತೇರಿ ರಾಜು ಮುಂತಾದವರಿದ್ದರು.

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.