ನಾಗರಿಕರ ಬಳಕೆಗೆ ಸಿಗದ ಇ-ಶೌಚಾಲಯ


Team Udayavani, May 3, 2019, 3:53 PM IST

ram-2

ರಾಮನಗರ: ನಗರದಲ್ಲಿ ಸುಮಾರು 8 ಲಕ್ಷ ರೂ. ವೆಚ್ಚದಲ್ಲಿ ನಗರಸಭೆಯ ಮೂಲಕ ಸ್ಥಾಪಿಸಿರುವ ಇ-ಶೌಚಾಲಯಗಳು ಸಾರ್ವಜನಿಕ ಬಳಕೆಗೆ ಅವಕಾಶವಿಲ್ಲದಂತಾಗಿದೆ. ಇದಕ್ಕೆ ಇ-ಶೌಚಾಲಯ ನಿರ್ವಹಣೆ ಹೊತ್ತ ಗುತ್ತಿಗೆದಾರನ ನಿರ್ಲಕ್ಷ್ಯವೇ ಕಾರಣ ಎಂದು ತಿಳಿದು ಬಂದಿದೆ.

ನಗರದ ನ್ಯಾಯಾಲಯ ರಸ್ತೆಯಲ್ಲಿ, ಛತ್ರದ ಬೀದಿಯಲ್ಲಿ (ಮೇಯಿನ್‌ ಶಾಲೆ ಬಳಿ), ಜಿಲ್ಲಾ ಕ್ರೀಡಾಂಗಣ ಮತ್ತು ರಾಯರ ದೊಡ್ಡಿ ವೃತ್ತದಲ್ಲಿ ತಲಾ ಒಂದು ಇ-ಟಾಯ್ಲೆಟ್ ಸ್ಪಾಪನೆಯಾಗಿದೆ. ರಾಯರದೊಡ್ಡಿ ಬಳಿಯ ಟಾಯ್ಲೆಟ್ ಹೊರತುಪಡಿಸಿ ಉಳಿದ ಮೂರು ಟಾಯ್ಲೆಟ್‌ಗಳು ಬಳಕೆಯಾಗುತ್ತಿಲ್ಲ. ಕಾರಣ, ಅವು ಕಾರ್ಯನಿರ್ವಹಿಸುತ್ತಿಲ್ಲ. ಗುರುತಿಸಿಕೊಳ್ಳಲು ಇಚ್ಚಿಸದ ನಗರಸಭೆಯ ಅಧಿಕಾರಿಗಳ ಪ್ರಕಾರ ಮೂರು ಇ- ಟಾಯ್ಲೆಟ್‌ಗಳಲ್ಲಿ ವಿದ್ಯುತ್‌ಗೆ ಸಂಬಂಧಿಸಿದಂತೆ ಕೆಲವು ಲೋಪಗಳಿದ್ದು ಘಟಕಗಳು ಕಾರ್ಯ ನಿರ್ವಹಿಸುತ್ತಿಲ್ಲ. ಆದರೆ ಮೈಸೂರು ಮೂಲದ ಗುತ್ತಿಗೆದಾರ ನಾಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳೇ ದೂರಿದ್ದಾರೆ.

ನಗರಸಭೆಯಿಂದ 8 ಲಕ್ಷ ಮೊತ್ತ ವ್ಯಯ: ಜಿಲ್ಲಾ ಕೇಂದ್ರ ರಾಮನಗರಕ್ಕೆ ದಿನನಿತ್ಯ ಹೊರಗಡೆಯಿಂದ ಬಂದು ಹೋಗುವ ಜನಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಆಯಾ ಕಟ್ಟಿನಲ್ಲಿ ನಗರಸಭೆ ಇ-ಶೌಚಾಲಯಗಳನ್ನು ಸ್ಥಾಪಿಸಿದೆ. 8 ಲಕ್ಷಕ್ಕೂ ಅಧಿಕ ಮೊತ್ತವನ್ನು ನಗರಸಭೆ ವ್ಯಯಿಸಿದೆ. ಲೋಕಸಭಾ ಚುನಾವಣೆಗೆ ಕೆಲ ದಿನಗಳ ಮುನ್ನ ಇ- ಶೌಚಾಲಯಗಳನ್ನು ಅಧಿಕಾರಿ ವೃಂದವೇ ಉದ್ಘಾಟನೆ ನೆರವೇರಿಸಿದ್ದರು.

ಗುತ್ತಿಗೆದಾರನ ಮೊಬೈಲ್ ಸಂಖ್ಯೆ ನಿರಂತರ ಸ್ವಿಚ್ ಆಫ್: ನ್ಯಾಯಾಲಯ ರಸ್ತೆ, ಛತ್ರದ ಬೀದಿ ಮತ್ತು ಜಿಲ್ಲಾ ಕ್ರೀಡಾಂಗಣದ ಶೌಚಾಲಯ ಘಟಕಗಳು ಆರಂಭದಿಂದಲೂ ಕಾರ್ಯ ನಿರ್ವಹಿಸಲಿಲ್ಲ ಎಂದು ನಾಗರಿಕರು ದೂರಿದ್ದಾರೆ. ಮೈಸೂರು ಮೂಲದ ಗುತ್ತಿಗೆದಾರ ಇ- ಶೌಚಾಲಯಗಳನ್ನು ಸ್ಥಾಪಿಸಿದ್ದು, ಇನ್ನು ಒಂದು ವರ್ಷದ ಕಾಲ ಈ ಘಟಕಗಳನ್ನು ನಿರ್ವಹಿಸಬೇಕಾಗಿದೆ. ಆದರೆ, ಆತ ಕೈಗೆ ಸಿಗುತ್ತಿಲ್ಲ ಎಂಬ ಆರೋಪಗಳಿವೆ.

ಸಮಸ್ಯೆ ಇದ್ದರೆ ನಾಗರಿಕರೇ ನೇರವಾಗಿ ಗುತ್ತಿಗೆದಾರನನ್ನು ಸಂಪರ್ಕಿಸಲು ಮೊಬೈಲ್ ಸಂಖ್ಯೆಯನ್ನು (7624960165) ಘಟಕಗಳ ಮೇಲೆ ನಮೂದಿಸಲಾಗಿದೆ. ಸಂಪರ್ಕಿಸಬೇಕಾದ ಗುತ್ತಿಗೆದಾರನ ಮೊಬೈಲ್ ನಿರಂತರ ಸ್ವಿಚ್ ಆಫ್ ಸಂದೇಶ ಬರುತ್ತಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.

ವಿಕಲಚೇತನರ ಶೌಚಾಲಯವೂ ಬಂದ್‌!: ನಗರದ ನ್ಯಾಯಾಲಯ ಸಂಕೀರ್ಣದ ಬಳಿ ಇರುವ ಮಹಾತ್ಮ ಗಾಂಧಿ ಉದ್ಯಾನವನದ ಮುಂಭಾಗ ನಗರ ಸಭೆ ವತಿಯಿಂದ ವಿಕಲ ಚೇತನರ ಶೌಚಾಲಯ ಕಟ್ಟಡವನ್ನು ನಿರ್ಮಿಸಿ ವರ್ಷ ಕಳೆದಿದೆ. ಆದರೆ, ಈ ಶೌಚಾಲಯವೂ ಬಳಕೆಯಾಗುತ್ತಿಲ್ಲ. ಯಾವುದೇ ಸಂದರ್ಭದಲ್ಲಿ ಬೀಗ ಜಡಿದು ಕೊಂಡಿರುವ ಶೌಚಾಲಯದ ಬಗ್ಗೆ ನಗರಸಭೆಯ ಅಧಿಕಾರಿಗಳ ಗಮನ ಸೆಳೆದರು ಉಪಯೋಗವಾಗಿಲ್ಲ ಎಂದು ನಾಗರಿಕರು ಹರಿಹಾಯ್ದಿದ್ದಾರೆ.

ಜಿಲ್ಲಾಧಿಕಾರಿಗಳೇ ಇತ್ತ ಗಮನಿಸಿ!

ನಗರ ಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳ ಆಡಳಿತಾವಧಿ ಕಳೆದ ಮಾರ್ಚ್‌ ತಿಂಗಳಲ್ಲೇ ಮುಗಿದಿದೆ. ನಗರ ಸಭೆಯ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿಗಳು ಅಧಿಕಾರವಹಿಸಿಕೊಂಡಿದ್ದಾರೆ. ನಾಗರಿಕರ ತೆರಿಗೆ ಹಣ ಹೀಗೆ ನೆನೆಗುದಿಗೆ ಬಿದ್ದಿದ್ದು, ಜಿಲ್ಲಾಧಿಕಾರಿಗಳು ತಕ್ಷಣ ಗಮನಹರಿಸಿ ಇ-ಶೌಚಾಲಯಗಳು ಹಾಗೂ ವಿಕಲಚೇತನರ ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಅವಕಾಶಮಾಡಿಕೊಡಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.