ನೌಕಾದಳ ಸೇರ್ಪಡೆಗೆ ಯುವ ಸಮೂಹಕ್ಕೆ ಪ್ರೇರಣೆ

ನೌಕಾದಳ‌ ಐಎನ್‌ಎಸ್‌ ಶಿವಾಜಿ ತಂಡ ಮಡಿಕೇರಿಗೆ ಭೇಟಿ

Team Udayavani, May 4, 2019, 6:18 AM IST

Z-ARMY

ಮಡಿಕೇರಿ: ಭಾರತೀಯ ನೌಕಾದಳದ 75ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಆಯೋಜಿತ ಭಾರತ ದರ್ಶನ ಕಾರ್ಯಕ್ರಮದಡಿ ಐಎನ್‌ಎಸ್‌ ಶಿವಾಜಿ ನೌಕೆಯ 14 ಮಂದಿ ಅಧಿಕಾರಿಗಳ ತಂಡ ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ಭೇಟಿ ನೀಡಿತು.

ಐಎನ್‌ಎಸ್‌ ಶಿವಾಜಿ ತಂಡದ ನೇತೃತ್ವವನ್ನು ಕಮಾಂಡರ್‌ ವಿ.ಸೀತಾರಾಂ ವಹಿಸಿದ್ದು, ಕಮಾಂಡರ್‌ಗಳಾದ ಗೌರವ್‌ ಸೇಥ್‌, ಅಭಿಮನ್ಯು ದಲಾಲ್, ಶ್ಯಾಂ ಕುಮಾರ್‌ ಕೆ., ಲೆಫ್ಟಿನೆಂಟ್ ಕಮಾಂಡರ್‌ಗಳಾದ ಸತೀಶ್‌ ಕುಮಾರ್‌ ಮತ್ತು ಜಿ.ಜಗನ್ನಾಥ್‌, ಲೆಫ್ಟಿನೆಂಟ್‌ಗಳಾದ ಸುದೀಪ್‌ ಭಟ್ಟಾರಾಯಿ ಮತ್ತು ಎಂ.ಕೆ.ಗೌತಮ್‌, ಅಖೀಲ್, ಹೆಚ್.ದಹಿಯ, ಮಂದೀಪ್‌ ಸಿಂಗ್‌, ಆರ್‌. ಆರ್‌.ಚೌಹಾಣ್‌, ಇ.ಸಿ.ಪಾಲಾಸ್ಕರ್‌ ಮತ್ತು ಎಲ್ವಿಸ್‌ ಮ್ಯಾಥ್ಯೂ ತಂಡದ ಸದಸ್ಯರುಗಳಾಗಿ ಜಿಲ್ಲೆಗೆ ಭೇಟಿ ನೀಡಿದ್ದಾರೆ. ನಗರದ ಸನ್ನಿಸೈಡ್‌ನ‌ ಜನರಲ್ ಕೆ.ಎಸ್‌.ತಿಮ್ಮಯ್ಯ ಸ್ಮಾರಕ ಭವನಕ್ಕೆ ಶಿವಾಜಿ ತಂಡದ ಅಧಿಕಾರಿಗಳು ಭೇಟಿ ನೀಡಿದ್ದಲ್ಲದೆ, ಬಳಿಕ ಕೂಡಿಗೆಯ ಸೈನಿಕ ಶಾಲೆ, ಸೇರಿದಂತೆ ಜಿಲ್ಲೆಯ ವಿವಿಧ ಕಾಲೇಜುಗಳಿಗೂ ಭೇಟಿ ನೀಡಿತು. ಈ ಎಲ್ಲಾ ಭೇಟಿಯ ಪ್ರಮುಖ ಉದ್ದೇಶ, ಭಾರತೀಯ ನೌಕಾದಳಕ್ಕೆ ಸೇರ್ಪಡೆಗೊಳ್ಳಲು ಯುವ ಸಮೂಹಕ್ಕೆ ಪ್ರೇರಣೆ ನೀಡುವುದೇ ಆಗಿತ್ತು.

45 ದಿನಗಳ ಕಾರ್ಯಕ್ರಮ- ಐಎನ್‌ಎಸ್‌ ಶಿವಾಜಿ ನೌಕೆಯ ತಂಡ ಭಾರತ ದರ್ಶನ ಕಾರ್ಯಕ್ರಮದಡಿ ಒಟ್ಟು 45 ದಿನಗಳ ಕಾಲ ರಾಷ್ಟ್ರದ ವಿವಿಧ ಭಾಗಗಳಿಗೆ ತೆರಳಿ ಯುವ ಸಮೂಹದಲ್ಲಿ ನೌಕಾದಳ ಸೇರ್ಪಡೆಗೆ ಪ್ರೇರಣೆ ನೀಡಲಿದೆ ಎಂದು ತಂಡದ ನೇತೃತ್ವ ವಹಿಸಿರುವ ಕಮಾಂಡರ್‌ ವಿ. ಸೀತಾರಾಂ ಅವರು ತಿಳಿಸಿದರು.

ಭಾರತ ದರ್ಶನ ಕಾರ್ಯಕ್ರಮಕ್ಕೆ ಇದೇ ಫೆಬ್ರವರಿಯಲ್ಲಿ ಮುಂಬೈನಲ್ಲಿ ಮತ್ತು ಮಾರ್ಚ್‌ನಲ್ಲಿ ಲೋನಾವಾಲದಿಮದ ಚಾಲನೆ ನೀಡಲಾಗಿದೆ. ಕಾರ್ಯಕ್ರಮದಂತೆ ದೆಹಲಿ, ವಿಶಾಖಪಟ್ಟಣಂ, ಕೊಚ್ಚಿನ್‌ಗೆ ತೆರಳಿ ಅಲ್ಲಿಂದ ಮರಳಿ ಇದೇ ಮೇ 9ಕ್ಕೆ ಲೋನಾವಾಲಕ್ಕೆ ಹಿಂತಿರುಗುತ್ತಿದ್ದೇವೆ ಎಂದು ಮಾಹಿತಿ ನೀಡಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜನರಲ್ ತಿಮ್ಮಯ್ಯ ಫೋರಂನ ಅಧ್ಯಕ್ಷರಾದ ಕರ್ನಲ್ ಕಂಡ್ರತಂಡ ಸುಬ್ಬಯ್ಯ ಅವರು ಐಎನ್‌ಎಸ್‌ ಶಿವಾಜಿ ತಂಡದೊಂದಿಗೆ ಇದ್ದು ಅವರಿಗೆ ಅಗತ್ಯ ಮಾಹಿತಿಗಳನ್ನು ನೀಡಿದರು. ಈ ಸಂದರ್ಭ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ತಂಡ ಭೇಟಿ ನೀಡಲಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರನ್ನು ತರಬೇತಿಗೊಳಿಸಿ ನೌಕಾದಳಕ್ಕೆ ಸೇರ್ಪಡೆ ಮಾಡಿಕೊಳ್ಳುವುದು ತಂಡದ ಉದ್ದೇಶವಾಗಿದೆಯೆಂದು ತಿಳಿಸಿದರು.

ಟಾಪ್ ನ್ಯೂಸ್

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21-

Crime News: ಕಾಸರಗೋಡು ವಿಭಾಗದ ಅಪರಾಧ ಸುದ್ದಿಗಳು

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

9-kodachadri

Kodachadri: ಮಳೆಯಲಿ ಕೊಡಚಾದ್ರಿ ಮಡಿಲಲಿ

Desi Swara: ವಾಸವಿ ಕ್ಲಬ್‌ ಮೆರ್ಲಿಯನ್‌ ಸಿಂಗಾಪುರ- ವಾಸವಿ ಜಯಂತಿ ಪೂಜೆ ಸಂಪನ್ನ

Desi Swara: ವಾಸವಿ ಕ್ಲಬ್‌ ಮೆರ್ಲಿಯನ್‌ ಸಿಂಗಾಪುರ- ವಾಸವಿ ಜಯಂತಿ ಪೂಜೆ ಸಂಪನ್ನ

8-ipl

IPL: ಸನ್‌ ರೈಸರ್ಸ್‌ ಆದ ಡೆಕ್ಕನ್‌ ಚಾರ್ಜಸ್‌

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.