ಕೈ ಸರ್ಜಿಕಲ್ ದಾಳಿ ಕಾಗದದ ಮೇಲೆ


Team Udayavani, May 4, 2019, 6:00 AM IST

22

ರಾಜಸ್ಥಾನದ ಬಿಕಾನೇರ್‌ ರ್ಯಾಲಿಗೆ ಮೋದಿ ಸ್ವಾಗತಿಸಿದ ಪಕ್ಷದ ಮುಖಂಡರು.

ಜೈಪುರ: ತಾವು ಅಧಿಕಾರದಲ್ಲಿದ್ದಾಗ ಆರು ಬಾರಿ ಸರ್ಜಿಕಲ್ ದಾಳಿ ನಡೆಸಲಾಗಿದೆ ಎಂದು ಕಾಂಗ್ರೆಸ್‌ ಹೇಳಿಕೊಂಡಿದ್ದಕ್ಕೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಹೇಳಿಕೊಳ್ಳುವ ಸರ್ಜಿಕಲ್ ದಾಳಿಗೆ ಸಾಕ್ಷಿ ಇಲ್ಲ. ಅವರು ಮಾಡಿದ ದಾಳಿ ಕಾಗದದ ಮೇಲಷ್ಟೇ ಇದೆ ಎಂದಿದ್ದಾರೆ. ರಾಜಸ್ಥಾನದ ಸಿಕಾರ್‌ನಲ್ಲಿ ಚುನಾವಣಾ ರ್ಯಾಲಿ ನಡೆಸಿದ ಅವರು ನಮ್ಮ ಸೇನೆಯ ಯೋಧರ ಸಾಮರ್ಥ್ಯ ಕಾಂಗ್ರೆಸ್‌ಗೆ ತಿಳಿದಿಲ್ಲ. ಈಗ ಕಾಂಗ್ರೆಸ್‌ ಮೀಟೂ ಎನ್ನುತ್ತಿದೆ. ಆರಂಭದಲ್ಲಿ ಅವರು ಅಣಕವಾಡಿದ್ದರು. ಅಷ್ಟೇ ಅಲ್ಲ, ಸರ್ಜಿಕಲ್ ದಾಳಿ ನಡೆದೇ ಇಲ್ಲ ಎಂದಿತ್ತು. ಆದರೆ ಈಗ ನಾವೂ ಮಾಡಿದ್ದೇವೆ ಎನ್ನುತ್ತಿದೆ. ಆದರೆ ಜನರಿಗೆ ನನ್ನ ಮೇಲೆ ವಿಶ್ವಾಸವಿತ್ತು. ನನ್ನನ್ನು ಜನರು ಬೆಂಬಲಿಸಿದರು ಎಂದು ಮೋದಿ ಹೇಳಿದ್ದಾರೆ.

ಇದೇ ಕಾಂಗ್ರೆಸ್‌ ನಾಯಕರು ಹಿಂದೆ ಸೇನೆ ಮುಖ್ಯಸ್ಥರನ್ನು ಬೀದಿ ಬದಿಯ ಗೂಂಡಾ ಎಂದಿದ್ದರು. ವಾಯುಪಡೆ ಮುಖ್ಯಸ್ಥರನ್ನು ಸುಳ್ಳುಗಾರ ಎಂದಿದ್ದರು. ನಮ್ಮ ಯೋಧರು ನೆರೆ ದೇಶಕ್ಕೆ ಹೋಗಿ ಉಗ್ರರನ್ನು ಸದೆಬಡಿದು ಬಂದಿದ್ದರೆ, ಅದಕ್ಕೆ ಸಾಕ್ಷ್ಯ ಕೊಡಿ ಎಂದು ಕೇಳುತ್ತಿದೆ ಎಂದು ಟೀಕಿಸಿದ್ದಾರೆ.

ರಾಜಸ್ಥಾನ ಬಿಜೆಪಿಯನ್ನು ಬಯಸುತ್ತಿದೆ: ಶುಕ್ರವಾರ ರಾಜಸ್ಥಾನಕ್ಕೆ ತೆರಳುವ ಮುನ್ನ ವೀಡಿಯೋವೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಪ್ರಧಾನಿ ಮೋದಿ, ರಾಜ್ಯಕ್ಕೆ ಬಿಜೆಪಿ ಅಗತ್ಯವಿದೆ ಎಂದಿದ್ದಾರೆ. ಜನರು ತಮ್ಮ ಮೊಬೈಲ್ನ ಫ್ಲಾಶ್‌ಲೈಟ್ ತೋರಿಸುತ್ತಿರುವ ವೀಡಿಯೋವನ್ನು ಅವರು ಹಂಚಿಕೊಂಡಿದ್ದಾರೆ.

ಹಾವಿನ ಪ್ರಸ್ತಾಪ: ಪ್ರಿಯಾಂಕಾ ರಾಯ್‌ ಬರೇಲಿಯಲ್ಲಿ ಹಾವಾಡಿಗರ ಜೊತೆ ಮಾತನಾಡುತ್ತಾ ಹಾವನ್ನು ಕೈಯಲ್ಲಿ ಹಿಡಿದ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದು, ನೆಹರು ಕೂಡ ಹಾವಿನ ನೃತ್ಯ ಆನಂದಿಸುತ್ತಿದ್ದರು. ಮೂರು ತಲೆಮಾರು ಕಳೆದರೂ ಆ ಕುಟುಂಬ ಅಲ್ಲೇ ಇದೆ. ಆದರೆ ದೇಶ ಸಾಕಷ್ಟು ಮುಂದುವರಿದಿದೆ ಎಂದು ಟೀಕಿಸಿದ್ದಾರೆ.

ಮೋದಿಗೆ ಕಾಂಗ್ರೆಸ್‌ ತಿರುಗೇಟು
ಯುಪಿಎ ಅವಧಿಯಲ್ಲಿ ನಡೆದ ಸರ್ಜಿಕಲ್ ದಾಳಿಯ ಬಗ್ಗೆ ಅನುಮಾನ ವ್ಯಕ್ತಪಡಿಸುವ ಮೂಲಕ ಪ್ರಧಾನಿ ಮೋದಿ ನಮ್ಮ ಸೇನೆಯ ಸಾಮರ್ಥ್ಯವನ್ನು ಅನುಮಾನಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಅಹಮದ್‌ ಪಟೇಲ್ ಹೇಳಿದ್ದಾರೆ. ನಮ್ಮದು ರಕ್ತ. ನಿಮ್ಮದು ನೀರು ಎಂದು ಮೋದಿ ಹೇಳುತ್ತಿದ್ದಾರೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಮೋದಿ ಸಿನೆಮಾ 24ಕ್ಕೆ

ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಸಿನೆಮಾ ಮೇ 24 ರಂದು ಬಿಡುಗಡೆಯಾಗಲಿದೆ. ಎಪ್ರಿಲ್ 11 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತಾದರೂ, ನೀತಿ ಸಂಹಿತೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದಿಂದ ನಿಷೇಧಿಸಲಾಗಿತ್ತು. ಫ‌ಲಿತಾಂಶ ಪ್ರಕಟವಾದ ಮರುದಿನ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಉಮಂಗ್‌ ಕುಮಾರ್‌ ನಿರ್ದೇಶನದ ಈ ಈ ಸಿನಿಮಾದಲ್ಲಿ ಮೋದಿ ಪಾತ್ರದಲ್ಲಿ ಬಾಲಿವುಡ್‌ ನಟ ವಿವೇಕ್‌ ಓಬೆರಾಯ್‌ ನಟಿಸಿದ್ದಾರೆ. ಚುನಾವಣೆ ಮುಗಿದಿರುವುದರಿಂದ ಬಿಡುಗಡೆಗೆ ಯಾವುದೇ ಅಡ್ಡಿ ಇರುವುದಿಲ್ಲ ಎಂದು ನಿರ್ಮಾಪಕ ಸಂದೀಪ್‌ ಸಿಂಗ್‌ ಹೇಳಿದ್ದಾರೆ. ಇದೇ ಮೊದಲ ಬಾರಿಗೆ ಕೇವಲ ನಾಲ್ಕು ದಿನ ಪ್ರಚಾರ ನಡೆಸಿ ಸಿನಿಮಾ ಬಿಡುಗಡೆ ಮಾಡಲಾಗುತ್ತಿದೆ. ಕೊನೆಯ ಹಂತದ ಚುನಾವಣೆ ಮೇ 19 ರಂದು ನಡೆಯಲಿದ್ದು, ಅಂದಿನಿಂದ 23 ರವರೆಗೆ ಪ್ರಚಾರ ನಡೆಸಲಾಗುತ್ತದೆ.

ವಿಪಕ್ಷ ಅರ್ಜಿ ಮುಂದಿನ ವಾರ ವಿಚಾರಣೆ

ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿವಿಪ್ಯಾಟ್ ಸ್ಲಿಪ್‌ಗ್ಳನ್ನು ಹೋಲಿಕೆ ಮಾಡುವಂತೆ 21 ವಿಪಕ್ಷಗಳು ಸಲ್ಲಿಸಿದ ಅರ್ಜಿಯ ಮರುಪರಿಶೀಲನೆಯನ್ನು ಮುಂದಿನ ವಾರ ನಡೆಸಲು ಸುಪ್ರೀಂಕೋರ್ಟ್‌ ಸಮ್ಮತಿಸಿದೆ. ಏಪ್ರಿಲ್ 8 ರಂದು ಈ ಸಂಬಂಧ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದ್ದ ಸುಪ್ರೀಂಕೋರ್ಟ್‌, ಪ್ರತಿ ಐದು ವಿಧಾನಸಭೆ ಕ್ಷೇತ್ರಗಳ ತಲಾ ಒಂದು ವಿವಿಪ್ಯಾಟ್ ರಸೀದಿಗಳನ್ನು ಹೋಲಿಕೆ ಮಾಡುವಂತೆ ಸೂಚಿಸಿತ್ತು. ಇದಕ್ಕೆ ವಿಪಕ್ಷ ನಾಯಕರು ಅಸಮಾಧಾನ ಹೊಂದಿದ್ದು, ಒಟ್ಟು ಚಲಾವಣೆಯಾದ ಮತಗಳ ಪೈಕಿ ಶೇ. 50ರಷ್ಟನ್ನು ಹೋಲಿಕೆ ಮಾಡುವಂತೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ರಾಹುಲ್ ವಿರುದ್ಧ ಜೇಟ್ಲಿ ವಾಗ್ಧಾಳಿ

ಸಾಮಾನ್ಯ ಮನುಷ್ಯ ಪ್ರಧಾನಿಯಾಗಿದ್ದನ್ನು ರಾಹುಲ್ ವಿರೋಧಿಸಿದರೆ, ಅದು ಅವರಿಗೆ ತಿರುಗುಬಾಣವಾಗಲಿದೆ ಎಂದು ವಿತ್ತ ಸಚಿವ ಅರುಣ್‌ ಜೇಟ್ಲಿ ಟೀಕಿಸಿದ್ದಾರೆ. ಕಾಂಗ್ರೆಸ್‌ನ ಈ ಕುಟುಂಬಕ್ಕೆ ಆಳಲೇ ಹುಟ್ಟಿರುವುದು ಎಂಬ ಭಾವವಿದೆ. 2014ರಲ್ಲಿ ಮೋದಿ ಪ್ರಧಾನಿಯಾಗಿದ್ದನ್ನು ಸಹಿಸಿ ಕೊಳ್ಳಲು ಸಾಧ್ಯವಾಗಿಲ್ಲ ಎಂದು ಜೇಟ್ಲಿ ಹೇಳಿದ್ದಾರೆ.

ದೇಶಕ್ಕೆ ಎರಡು ಬಜೆಟ್
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಎರಡು ಬಾರಿ ಬಜೆಟ್ ಮಂಡಿಸಲಾಗುತ್ತದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಒಂದು ರಾಷ್ಟ್ರೀಯ ಬಜೆಟ್ ಆಗಿದ್ದರೆ ಇನ್ನೊಂದು ಬಜೆಟ್ ಅನ್ನು ರೈತರಿಗಾಗಿ ಮಂಡಿಸ ಲಾಗುತ್ತದೆ ಎಂದು ರಾಜಸ್ಥಾನದ ಭಾರತ್‌ಪುರದಲ್ಲಿ ರ್ಯಾಲಿಯಲ್ಲಿ ಮಾತನಾಡುತ್ತಾ ಹೇಳಿದ್ದಾರೆ. ರೈತರ ಬಜೆಟ್‌ನಲ್ಲಿ ಕನಿಷ್ಠ ಬೆಂಬಲ ಬೆಲೆ ಯನ್ನು ನಿಗದಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ ರೈತರು ಕೃಷಿ ಸಾಲ ಮರುಪಾವತಿ ಮಾಡದೇ ಜೈಲಿಗೆ ಹೋಗುವುದನ್ನು ತಪ್ಪಿಸುವ ಭರವಸೆಯನ್ನೂ ಅವರು ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರಕಾರವು ಉದ್ಯಮಿಗಳ ಭಾರಿ ಮೊತ್ತದ ಸಾಲ ಮನ್ನಾ ಮಾಡುತ್ತದೆ. ಆದರೆ ರೈತರಿಗೆ ಶಿಕ್ಷೆ ವಿಧಿಸುತ್ತದೆ ಎಂದಿದ್ದಾರೆ. ಇದನ್ನು ತಡೆಯಲು ಹೊಸ ಕಾನೂನು ಜಾರಿಗೆ ತರಲಾಗುತ್ತದೆ. ಯಾವ ರೈತನನ್ನೂ ಜೈಲಿಗೆ ಹಾಕದಂತೆ ತಡೆಯುತ್ತೇವೆ ಎಂದಿದ್ದಾರೆ.

ರೈತರ ಬಜೆಟ್‌ನಲ್ಲಿ ಆಹಾರ ಧಾನ್ಯಗಳ ಬೆಲೆ ನಿಗದಿ, ಶೀತಲೀಕರಣ ಘಟಕ ಸ್ಥಾಪನೆ ಹಾಗೂ ಆಹಾರ ಸಂಸ್ಕರಣೆ ಘಟಕಗಳ ಸ್ಥಾಪನೆಯ ಬಗ್ಗೆ ಪ್ರಸ್ತಾಪಿಸಲಾಗುತ್ತದೆ. ಇದನ್ನು ಸಾಮಾನ್ಯ ಬಜೆಟ್‌ಗೂ ಮೊದಲೇ ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.