ಆರ್‌ಸಿಬಿ ಪಂದ್ಯ ಆಟಕ್ಕುಂಟು ಲೆಕ್ಕಕ್ಕಿಲ್ಲ

ಹೈದರಾಬಾದ್‌ಗೆ ಮಾಡು ಇಲ್ಲವೇ ಮಡಿ ಪಂದ್ಯ

Team Udayavani, May 4, 2019, 6:00 AM IST

RCN-IPL-2019

ಬೆಂಗಳೂರು: ರಾಯಲ್‌ ಚಾಲೆಂಜರ್ ಬೆಂಗಳೂರು ತಂಡಕ್ಕೆ ಕೂಟದ ಕೊನೆಯ ಲೀಗ್‌ ಪಂದ್ಯಕ್ಕೆ ತವರಿನಲ್ಲಿ ವೇದಿಕೆ ಸಜ್ಜಾಗಿದೆ. ಶನಿವಾರದ ದ್ವಿತೀಯ ಪಂದ್ಯದಲ್ಲಿ ಆರ್‌ಸಿಬಿ-ಸನ್‌ರೈಸರ್ ಹೈದರಾಬಾದ್‌ 2ನೇ ಬಾರಿಗೆ ಮುಖಾಮುಖೀಯಾಗಲಿವೆ.

ಈಗಾಗಲೇ ಪ್ಲೇ ಆಫ್ನಿಂದ ಹೊರಬಿದ್ದಿರುವ ಆರ್‌ಸಿಬಿಗೆ ಇದು ಆಟಕ್ಕುಂಟು ಲೆಕ್ಕಕ್ಕಿಲ್ಲ ಪಂದ್ಯ. ಹೈದರಾಬಾದ್‌ ವಿರುದ್ಧ ಮೊದಲ ಮುಖಾಮುಖೀಯಲ್ಲಿ 118 ರನ್‌ಗಳ ಹೀನಾಯ ಸೋಲನುಭವಿಸಿದ ಆರ್‌ಸಿಬಿಗೆ ಇದು ಸೇಡಿನ ಪಂದ್ಯವಾಗಿದೆ. ಆದರೆ ಅಂಕ ಪಟ್ಟಿಯಲ್ಲಿ 12 ಅಂಕದೊಂದಿಗೆ 4ನೇ ಸ್ಥಾನದಲ್ಲಿರುವ ಹೈದರಾಬಾದ್‌ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಗುರುವಾರದ ಮುಂಬೈ ವಿರುದ್ಧ ಸೂಪರ್‌ ಓವರ್‌ನಲ್ಲಿ ಸೋತ ಹೈದಾರಾಬಾದ್‌ಗೆ ಪ್ಲೇ ಆಫ್ಗೇರಲು ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ.

ಹೈದರಾಬಾದ್‌ಗೆ ಪಾಂಡೆ ಬಲ
ವಾರ್ನರ್‌ ನಿರ್ಗಮನದ ಬಳಿಕ ತಂಡಕ್ಕೆ ಆಸರೆಯಾಗಿರುವುದು ಕನ್ನಡಿಗ ಮನೀಷ್‌ ಪಾಂಡೆ. ಕಳೆದ 2 ಪಂದ್ಯದಲ್ಲಿಯೂ ಉತ್ತಮ ಪ್ರದರ್ಶನ ನೀಡುತ್ತ ಬಂದಿರುವುದರಿಂದ ತಂಡ ಇವರ ಬ್ಯಾಟಿಂಗ್‌ ಮೇಲೆ ಹೆಚ್ಚಿನ ನಂಬಿಕೆ ಇರಿಸಿದೆ. ನಾಯಕ ಕೇನ್‌ ವಿಲಿಯಮ್ಸನ್‌ ಪ್ರತೀ ಪಂದ್ಯದಲ್ಲಿಯೂ ವಿಫ‌ಲರಾಗುತ್ತಿರುವುದೂ ದೊಡ್ಡ ತಲೆನೋವಾಗಿದೆ. ಮಧ್ಯಮ ಕ್ರಮಾಂಕದಲ್ಲಿ ವಿಜಯ್‌ ಶಂಕರ್‌, ಅಭಿಷೇಕ್‌ ಶರ್ಮ ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ. ಆರಂಭಿಕ ಆಟಗಾರ ಮಾರ್ಟಿನ್‌ ಗಪ್ಟಿಲ್‌ ಸ್ಫೋಟಕ ಬ್ಯಾಟಿಂಗ್‌ ನೀಡಿದರೆ ತಂಡ ಬೃಹತ್‌ ಮೊತ್ತ ಪೇರಿಸುವಲ್ಲಿ ಯಾವುದೇ ಅನುಮಾನವಿಲ್ಲ.

ಬೌಲಿಂಗ್‌ ಬಲಿಷ್ಠ
ಹೈದರಾಬಾದ್‌ ಬೌಲಿಂಗ್‌ ಘಾತುಕವಾಗಿದೆ. ಮೊಹಮ್ಮದ್‌ ನಬಿ, ರಶೀದ್‌ ಖಾನ್‌, ಖಲೀಲ್‌ ಅಹ್ಮದ್‌, ಭುವನೇಶ್ವರ್‌ ಕುಮಾರ್‌, ಬಾಸಿಲ್‌ ಥಂಪಿ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಿದ್ದಾರೆ.

ಆರ್‌ಸಿಬಿಗೆ ಬೌಲಿಂಗ್‌ ಚಿಂತೆ
ಈ ಬಾರಿಯ ಐಪಿಎಲ್‌ನಲ್ಲಿ ತೀರಾ ಕಳಪೆ ಪ್ರದರ್ಶನದಿಂದ ಪ್ಲೇ ಆಫ್ನಿಂದ ಹೊರಬಿದ್ದಿರುವ ಆರ್‌ಸಿಬಿಗೆ ಬೌಲಿಂಗ್‌ನದ್ದೇ ಚಿಂತೆ. ಯಾವ ಬೌಲರ್‌ ಕೂಡ ಸ್ಥಿರ ಪ್ರದರ್ಶನ ನೀಡುತ್ತಿಲ್ಲ. ಉಮೇಶ್‌ ಯಾದವ್‌, ಚಾಹಲ್‌, ಸೈನಿ ಹೀಗೆ ಪ್ರತಿಯೊಬ್ಬರೂ ದುಬಾರಿಯಾಗುತ್ತಿದ್ದು ಯಾರ ಮೇಲೆಯೂ ತಂಡ ನಂಬಿಕೆ ಇಡುವ ಸ್ಥಿತಿಯಲ್ಲಿಲ್ಲ. ಬ್ಯಾಟಿಂಗ್‌ನಲ್ಲಿ ನಾಯಕ ವಿರಾಟ್‌ ಕೊಹ್ಲಿ, ಎಬಿ ಡಿ’ವಿಲಿಯರ್, ಪಾರ್ಥಿವ್‌ ಪಟೇಲ್‌ ಉತ್ತಮ ಫಾರ್ಮ್ನಲ್ಲಿದ್ದಾರೆ.

ಕೂಟದ ಕೊನೆಯ ಪಂದ್ಯವನ್ನು ಗೆದ್ದು ಅಭಿಮಾನಿಗಳಿಗೆ ಕೊಂಚ ಖುಷಿ ನೀಡುವುದು ಮತ್ತು ಕೂಟವನ್ನು ಗೆಲುವಿನೊಂದಿಗೆ ಮುಗಿಸುವ ಯೋಜನೆ ಕೊಹ್ಲಿ ಪಡೆಯದ್ದಾಗಿದೆ.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.