ಕಣದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ


Team Udayavani, May 4, 2019, 11:45 AM IST

hub-7

ಅಳ್ನಾವರ: ಕಳೆದ ಮಾರ್ಚ್‌ ತಿಂಗಳಲ್ಲಿ ಅವಧಿ ಮುಗಿದಿರುವ ಸ್ಥಳೀಯ ಪಟ್ಟಣ ಪಂಚಾಯತಿಗೆ ಇದೀಗ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಒಂದು ವರ್ಷದ ಹಿಂದೆ ನೂತನ ತಾಲೂಕು ಕೇಂದ್ರವಾಗಿ ಕಾರ್ಯರೂಪಕ್ಕೆ ಬಂದ ನಂತರ ಪಪಂಗೆ ನಡೆಯುತ್ತಿರುವ ಪ್ರಥಮ ಚುನಾವಣೆ ಇದಾಗಿರುವುದರಿಂದ ಸಹಜವಾಗಿಯೇ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಲೋಕಸಭೆ ಚುನಾವಣೆಯ ಗುಂಗು ಜನರ ಮನಸ್ಸಿನಲ್ಲಿ ಇನ್ನೂ ಇರುವಾಗಲೇ ಮತ್ತೂಂದು ಚುನಾವಣೆಗೆ ಪಟ್ಟಣದ ಜನ ತಯಾರಾಗುತ್ತಿದ್ದಾರೆ.

ನತದೃಷ್ಟ ಕೈ: ಸ್ಥಳೀಯ ಪಪಂ ಹಿಂದಿನ ಅವಧಿಯಲ್ಲಿ ಒಟ್ಟು 15 ಸದಸ್ಯ ಬಲದಲ್ಲಿ 9 ಕಾಂಗ್ರೆಸ್‌, 3 ಜೆಡಿಎಸ್‌, 2 ಬಿಜೆಪಿ ಹಾಗೂ 1 ಪಕ್ಷೇತರ ಸದಸ್ಯರಿದ್ದರು. 9 ಸದಸ್ಯ ಬಲದೊಂದಿಗೆ ಕಾಂಗ್ರೆಸ್‌ ಬಹುಮತ ಹೊಂದಿದ್ದರೂ ಮೊದಲ ಎರಡೂವರೆ ವರ್ಷದ ಅವಧಿಯಲ್ಲಿ ಮೀಸಲಾತಿ ಕಾರಣ ಅಧಿಕಾರದಿಂದ ದೂರ ಉಳಿಯುವಂತಾಗಿತ್ತು. ಕೇವಲ ಮೂರು ಸದಸ್ಯರನ್ನು ಒಳಗೊಂಡಿದ್ದ ಜೆಡಿಎಸ್‌ ಪಕ್ಷವು ಅಧ್ಯಕ್ಷ ಸ್ಥಾನದ ಅಧಿಕಾರ ಅನುಭವಿಸುವಂತಾಗಿತ್ತು. ಬಹುಮತ ಹೊಂದಿದ್ದ ಕಾಂಗ್ರೆಸ್‌ ಸದಸ್ಯರು ಕೈ ಕೈ ಹಿಸುಕಿಕೊಂಡಿದ್ದರು.

ನಂತರದ ಎರಡುವರೆ ವರ್ಷದ ಅವಧಿಯಲ್ಲಿಯೂ ಸಹ ಒಳ ತಿಕ್ಕಾಟದಿಂದ ಸುಮಾರು ಒಂದುವರೆ ವರ್ಷ ಉಪಾಧ್ಯಕ್ಷರ ಮೇಲೆಯೇ ಕಾಲ ನೂಕಿ ಕೊನೆಗೆ ಬಿಜೆಪಿ ಸದಸ್ಯರೊಬ್ಬರನ್ನು ಕಾಂಗ್ರೆಸ್‌ಗೆ ಕರೆ ತಂದು ಅಧ್ಯಕ್ಷ ಗಾದಿಯನ್ನು ಅವರಿಗೊಪ್ಪಿಸಿದ ಕೀರ್ತಿ ಕಾಂಗ್ರೆಸ್‌ ಸದಸ್ಯರಿಗೆ ಸಲ್ಲುತ್ತದೆ.

ಚಟುವಟಿಕೆ ಚುರುಕು: ಮಾರ್ಚ್‌ ತಿಂಗಳಲ್ಲಿ ಹಿಂದಿನ ಆಡಳಿತ ಮಂಡಳಿಯ ಅಧಿಕಾರ ಮುಗಿದು ಇನ್ನೂ ಮುರ್‍ನಾಲ್ಕು ತಿಂಗಳು ಗತಿಸಿದ ನಂತರ ಚುನಾವಣೆ ಘೋಷಣೆಯಾಗಬಹುದೆಂದು ಬಹುತೇಕ ಆಕಾಂಕ್ಷಿಗಳ ಅನಿಸಿಕೆಯಾಗಿತ್ತು. ಆದರೆ ಏಕಾಏಕಿ ಚುನಾವಣೆ ಅಧಿಸೂಚನೆ ಹೊರಬೀಳುತ್ತಿದ್ದಂತೆ ಕಾರ್ಯ ಪ್ರವೃತ್ತರಾಗಿರುವ ವಿವಿಧ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳು ಮುಖಂಡರನ್ನು ಭೇಟಿಯಾಗುತ್ತಿದ್ದಾರೆ.

ಕೆಲ ದಿನಗಳ ಹಿಂದೆ ನಡೆದಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮುಖಂಡರು ಜಂಟಿಯಾಗಿ ಚುನವಣೆ ಪ್ರಚಾರ ಕೈಗೊಂಡಿದ್ದರು. ಆದರೆ ಈಗ ಪ್ರತ್ಯೇಕವಾಗಿ ಚುನಾವಣೆ ಎದುರಿಸುವ ಅನಿವಾರ್ಯತೆ ಒದಗಿ ಬಂದಿದ್ದು, ಕಾರ್ಯಕರ್ತರು ಗೊಂದಲದಲ್ಲಿದ್ದಾರೆ. ಒಂದು ವೇಳೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡರು ಸಹ ಸ್ಥಳೀಯವಾಗಿ ಮೈತ್ರಿ ಅಸಾಧ್ಯ ಎನ್ನಲಾಗುತ್ತಿದೆ. ಆಕಾಂಕ್ಷಿಗಳು ಅಧಿಕವಾಗಿದ್ದು ಮೈತ್ರಿ ಏರ್ಪಟ್ಟರೆ ಬಹುತೇಕರು ಸ್ವತಂತ್ರ ಅಭ್ಯರ್ಥಿಗಳಾಗಿ ಕಣದಲ್ಲಿರಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

15ರಿಂದ 18ಕ್ಕೆ ಏರಿಕೆ: ಪಟ್ಟಣದಲ್ಲಿನ ವಾರ್ಡ್‌ಗಳ ಪುನರ್‌ ವಿಂಗಡಣೆಯಾಗಿದ್ದು, ಸದಸ್ಯರ ಸಂಖ್ಯೆ 15ರಿಂದ 18ಕ್ಕೆ ಏರಿದೆ. ಬಹುತೇಕ ವಾರ್ಡ್‌ಗಳು ಬದಲಾವಣೆಯಾಗಿದ್ದು ಮೊದಲಿನ ಮೀಸಲಾತಿ ಅದಲು ಬದಲಾಗಿದೆ. ಹಾಗಾಗಿ ಕಳೆದ ಅವಧಿಯಲ್ಲಿ ಸದಸ್ಯರಾಗಿದ್ದವರು ಪುನರಾಯ್ಕೆ ಬಯಸುತ್ತಿರುವ ಬಹುತೇಕರು ಹೊಸ ಕ್ಷೇತ್ರವನ್ನು ಹುಡುಕುತ್ತಿದ್ದಾರೆ. ಚುನಾವಣೆ ಇನ್ನೂ ಕೆಲವು ತಿಂಗಳು ಮುಂದೆ ಹೋಗಬಹುದು, ಅಲ್ಲಿವರೆಗೆ ಮೀಸಲಾತಿ ಬದಲಾವಣೆ ಮಾಡಿಕೊಂಡು ಬರಬಹುದೆಂದು ನಿರೀಕ್ಷೆಯಲ್ಲಿದ್ದವರಿಗೆ ನಿರಾಶೆ ಮೂಡಿದೆ.

ಹಿಂದಿನ ಚುನಾವಣೆಯಲ್ಲಿ ಈ ಭಾಗವನ್ನು ಕಾಂಗ್ರೆಸ್‌ನ ಸಂತೊಷ ಲಾಡ್‌ ಪ್ರತಿನಿಧಿಸುತ್ತಿದ್ದರು. ಆದರೆ ಈ ಸಲ ಬಿಜೆಪಿಯ ಸಿ.ಎಂ. ನಿಂಬಣ್ಣವರ ಈ ಭಾಗದ ಶಾಸಕರಾಗಿರುವುದರಿಂದ ಅವರ ಪ್ರಭಾವ ಚುನಾವಣೆ ಮೇಲೆ ಬೀಳುವುದು ಸಹಜವೆನ್ನಬಹುದು. ಹೇಗಾದರೂ ಮಾಡಿ ಪಪಂ ಆಡಳಿತವನ್ನು ವಶಕ್ಕೆ ಪಡೆಯಬೇಕೆನ್ನುವುದು ಬಿಜೆಪಿ ಮುಖಂಡರಿಂದ ಮಾತುಗಳು ಕೇಳಿಬರುತ್ತಿವೆ. ಮತ್ತೂಂದೆಡೆ ಪಪಂ ಆಡಳಿತ ತಮ್ಮ ಕೈ ಬಿಡಬಾರದೆಂದು ಕಾಂಗ್ರೆಸ್‌ ಮುಖಂಡರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.