ಕನಿಷ್ಠ ಎರಡು ಟಿಎಂಸಿ ನೀರು ಬಿಡಲು ಶಾಸಕ ಆನಂದ ಮನವಿ
Team Udayavani, May 4, 2019, 12:20 PM IST
ಜಮಖಂಡಿ: ಕೃಷ್ಣಾ ನದಿ ಸಂಪೂರ್ಣ ಬತ್ತಿ ಹೋಗಿದ್ದರಿಂದ ಬಾಗಲಕೋಟೆ-ಅಥಣಿ ತಾಲೂಕಿನ ಕೆಲ ಪ್ರದೇಶದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಹಾಹಾಕಾರವಾಗಿದೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕನಿಷ್ಠ ಎರಡು ಟಿಎಂಸಿ ಅಡಿ ನೀರನ್ನು ರಾಜ್ಯಕ್ಕೆ ಬಿಡಬೇಕೆಂದು ಶಾಸಕ ಆನಂದ ನ್ಯಾಮಗೌಡ ಶುಕ್ರವಾರ ಮುಂಬೈನಲ್ಲಿ ಮಹಾರಾಷ್ಟ್ರದ ನೀರಾವರಿ ಸಚಿವ ಗಿರೀಶ ಮಹಾಜನ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಈ ಕುರಿತು ಶಾಸಕ ಆನಂದ ಸಿದ್ದು ನ್ಯಾಮಗೌಡ ಉದಯವಾಣಿಗೆ ಮಾಹಿತಿ ನೀಡಿದರು. ಎರಡು ತಾಲೂಕಿನಲ್ಲಿ ರೈತರು, ಜನ-ಜಾನುವಾರುಗಳು ನೀರಿಲ್ಲದೇ ಪರದಾಡುತ್ತಿದ್ದು, ಉರಿ ಬಿಸಿಲಲ್ಲಿ ಜಾನುವಾರುಗಳು ನೀರಿಲ್ಲದೆ ಮೃತಪಟ್ಟಿವೆ. ಈ ಕುರಿತು ಮತ್ತು ಎರಡು ಕ್ಷೇತ್ರಗಳಲ್ಲಿ ನೀರಿನ ಅಭಾವದ ಬಗ್ಗೆ ಸಚಿವರಿಗೆ ಮನವರಿಕೆ ಮಾಡಲಾಗಿದೆ. ಅವರು ಕೂಡಾ ಸ್ಪಂದಿಸಿದ್ದಾರೆ. ಶೀಘ್ರದಲ್ಲಿ ಕೊಯ್ನಾ ಜಲಾಶಯದಿಂದ ನೀರು ಬಿಡಲು ಮಹಾರಾಷ್ಟ್ರದ ಸಚಿವರು ಸಮ್ಮತಿಸಿದ್ದು, ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚಿಸಿ ಕೂಡಲೇ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಂಸದ ಪ್ರಕಾಶ ಹುಕ್ಕೇರಿ ಕೂಡಾ ಮಹಾರಾಷ್ಟ್ರ ನೀರಾವರಿ ಸಚಿವರಿಗೆ ದೂರವಾಣಿಯಲ್ಲಿ ನೀರಿನ ಸಮಸ್ಯೆ ಬಗ್ಗೆ ಮನವರಿಕೆ ಮಾಡಿದ್ದಾರೆ. ನನ್ನ ಜೊತೆಗೆ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಆಗಮಿಸಿದ್ದರು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?