ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್‌ನಿಂದ ಸಂಚಾರಕ್ಕೆ ತೊಂದರೆ


Team Udayavani, May 4, 2019, 2:54 PM IST

ramanagar-tdy-5…

ಮಾಗಡಿಯ ಕಲ್ಯಾಗೇಟ್‌ನಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸಿರುವುದು.

ಮಾಗಡಿ: ಪಟ್ಟಣದಲ್ಲಿ ಅಡ್ಡಾದಿಡ್ಡಿ ವಾಹನಗಳ ಪಾರ್ಕಿಂಗ್‌ನಿಂದ ವಾಹನಗಳ ಸಂಚಾರ ಮತ್ತು ಪಾದಚಾರಿಗಳಿಗೆ ಪ್ರಾಣ ಸಂಕಟವಾಗಿದೆ.

ಪಟ್ಟಣದ ಕಲ್ಯಾಗೇಟ್, ರಾಜಕುಮಾರ್‌ ರಸ್ತೆ, ಕೆಂಪೇಗೌಡ ವೃತ್ತ ಇತರೆಡೆ ದ್ವಿಚಕ್ರ ವಾಹನಗಳನ್ನು ರಸ್ತೆ ಬದಿ ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದರಿಂದ ಇತರೆ ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ತುಂಬ ತೊಂದರೆಯಾಗುತ್ತಿದೆ. ಪಟ್ಟಣದಲ್ಲಿ ಜನ ಸಂಖ್ಯೆ ಜಾಸ್ತಿಯಾದಂತೆ ದಿನೇ ದಿನೇ ವಾಹನ ಸಂಚಾರದ ದಟ್ಟಣೆ ಹೆಚ್ಚಾಗುತ್ತಿದೆ. ಪಟ್ಟಣದ ಬಸ್‌ ನಿಲ್ದಾಣ, ಅರಳೇಪೇಟೆ, ರಾಜಕುಮಾರ್‌ ರಸ್ತೆ, ಕೆಂಪೇಗೌಡ ವೃತ್ತ, ಗೌರಮ್ಮನಕೆರೆ, ತಿರುಮಲೆ, ಹೊಸಪೇಟೆ, ಹೊಂಬಾಳಮ್ಮನಪೇಟೆ ಸೇರಿದಂತೆ ಇತರೆ ಭಾಗಗಳ ರಸ್ತೆಗಳ ವಾಹನ ಸಂಚಾರಕ್ಕೆ ಸವಾರರು ಹರಸಾಹಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಾಹನ ಸವಾರರು ನಿಯಮ ಪಾಲಿಸುತ್ತಿಲ್ಲ: ಪಟ್ಟಣದಲ್ಲಿ ವಾಹನ ಸವಾರರು ನಿಯಮ ಪಾಲನೆ ಮಾಡುತ್ತಿಲ್ಲ. ಬಹುತೇಕ ವಾಹನ ಸವಾರರಲ್ಲಿ ಪರವಾನಗಿಯೇ ಇಲ್ಲ. ಅದರಲ್ಲೂ ಚಿಕ್ಕ ಮಕ್ಕಳು ಸಹ ವಾಹನ ಚಾಲನೆ ಮಾಡುತ್ತಿದ್ದಾರೆ. ಇದರಿಂದಾಗಿ ವಾಹನವನ್ನು ಸರಿಯಾಗಿ ಓಡಿಸಲಾಗದೆ ರಸ್ತೆ ಮಧ್ಯೆಯೇ ಬಿದ್ದು, ಎದ್ದು ಕೈಕಾಲು ಮುರಿದುಕೊಂಡ ಪ್ರಸಂಗಗಳು ಆಗಾಗ್ಗೆ ನಡೆಯುತ್ತಿದೆ.

ಕೇಳುವವರೂ ಇಲ್ಲ : ಪಟ್ಟಣದಲ್ಲೊಂದು ಆರ್‌ಟಿಒ ಕಚೇರಿಯಿಲ್ಲ, ಕನಿಷ್ಠ ಪಕ್ಷ ಪೊಲೀಸರು ಸಹ ವಾಹನ ಸವಾರರಿಗೆ ನಿಯಮ ಪಾಲನೆ ಕುರಿತು ಯಾವುದೇ ಜಾಗೃತಿ ಫ‌ಲಕವನ್ನು ಸಹ ಹಾಕಿಲ್ಲ. ದ್ವಿಚಕ್ರ ವಾಹನದಲ್ಲಿ ಮೂರು ಮಂದಿ ಕುಳಿತುಕೊಂಡು ಸಂಚಾರ ಮಾಡುತ್ತಿದ್ದರೂ ಕೇಳುವವರೂ ಇಲ್ಲ ಎಂಬಂತಾಗಿದೆ. ರಸ್ತೆ ಮಧ್ಯೆಯೇ ಆಟೋ, ಕಾರುಗಳು, ಲಾರಿಗಳು ನಿಲ್ಲುತ್ತವೆ. ಕನಿಷ್ಠ ಪಕ್ಷ ರಸ್ತೆ ಬದಿಯಲ್ಲಿ ಪಾರ್ಕಿಂಗ್‌ ಮಾಡುವಂತೆ ತಿಳಿ ಹೇಳುವವರೇ ಇಲ್ಲ.

ಹೊರ ಠಾಣಿ ಸ್ಥಾಪನೆ ಅಗತ್ಯ: ಅಪಘಾತ ನಡೆದಾಗ ಒಂದೆರಡು ದಿನ ಪೊಲೀಸರನ್ನು ರಸ್ತೆಗಳಿಗೆ ಬಿಟ್ಟು ವಾಹನಗಳ ಗಾಜು ಪುಡಿ ಮಾಡುವುದು, ಅಮಾಯಕರಿಗೆ ಲಾಠಿ ರುಚಿ ತೋರಿಸಿ ಸುಮ್ಮನಾಗುತ್ತಾರೆ. ಇಷ್ಟೊಂದು ವಾಹನಗಳು ಪಟ್ಟಣದಲ್ಲಿ ಅಡ್ಡಾದಿಡ್ಡಿಯಾಗಿ ಸಂಚರಿಸುತ್ತಿದ್ದರೂ ಇಲ್ಲಿಯವರೆಗೂ ಕನಿಷ್ಠ ದೂರು ದಾಖಲಿಸಿಲ್ಲ, ನೋಟಿಸ್‌ ನೀಡಿಲ್ಲ. ಹೀಗಾದರೆ ಪಟ್ಟಣದಲ್ಲಿ ರಸ್ತೆಯಲ್ಲಿ ಸುಗಮ ಸಂಚಾರ ಕಾಣಲು ಅಸಾಧ್ಯ ಎಂಬ ಆರೋಪಗಳು ನಾಗರಿಕ ವಲಯದಲ್ಲಿ ಕೇಳಿ ಬರುತ್ತಿದೆ. ಸಂಬಂಧಪಟ್ಟ ಆರ್‌ಟಿಒ ಇಲಾಖೆ ಇಲ್ಲೊಂದು ಹೊರ ಠಾಣೆ ಸ್ಥಾಪನೆ ಮಾಡಿ ವಾಹನ ಸಂಚಾರದ ನಿಯಮ ಪಾಲನೆ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಿದೆ ಎಂಬ ಆಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಪಟ್ಟಣದ ಯಾವುದೇ ರಸ್ತೆಯಲ್ಲಿಯಾದರೂ ನೋಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಂತೆ ವಾಹನಗಳು ನಿಲ್ಲುತ್ತವೆ. ಅದರಲ್ಲೂ ಬಹುತೇಕ ಅಂಗಡಿ ಮಾಲೀಕರಿರಬಹುದು, ಇತರರು ಸಹ ತಮ್ಮ ವಾಹನಗಳನ್ನು ಅಂಗಡಿಯ ಬದಿಯ ಕಿರಿದಾದ ರಸ್ತೆಯಲ್ಲಿಯೇ ನಿಲ್ಲಿಸಿರುತ್ತಾರೆ. ಮತ್ತೂಂದು ವಾಹನ ಸಾಗಬೇಕಾದರೆ ನಿಜಕ್ಕೂ ಚಾಲಕ ಹರಸಾಹಸ ಪಡಬೇಕಾಗಿದೆ.

ಟಾಪ್ ನ್ಯೂಸ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Choosing the Best Gambling Enterprise Online Payment Method

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.