ನೈಸರ್ಗಿಕ ವಿಕೋಪ ತಡೆಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ

ಮುಂಗಾರು ಪೂರ್ವ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚನೆ

Team Udayavani, May 4, 2019, 5:08 PM IST

4-MAY-32

ಶಿವಮೊಗ್ಗ: ನೈಸರ್ಗಿಕ ವಿಕೋಪ ಕುರಿತಂತೆ ಸಿದ್ಧತೆ ಪರಿಶೀಲನಾ ಸಭೆ ನಡೆಯಿತು.

ಶಿವಮೊಗ್ಗ: ಸಂಭಾವ್ಯ ನೈಸರ್ಗಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಪ್ರತಿ ಇಲಾಖೆಗಳು ತಮ್ಮ ಹಂತದಲ್ಲಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನೈಸರ್ಗಿಕ ವಿಕೋಪ ಎದುರಿಸಲು ಜಿಲ್ಲಾಡಳಿತದ ಸನ್ನದ್ಧತೆ ಕುರಿತು ಜಿಲ್ಲಾ ನೈಸರ್ಗಿಕ ವಿಕೋಪ ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಅವರು ಮಾತನಾಡಿದರು.

ಕಳೆದ ಮಾನ್ಸೂನ್‌ ಅವಧಿಯಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿದ್ದರೂ, ಅದೃಷ್ಟವಶಾತ್‌ ಹೆಚ್ಚಿನ ನಷ್ಟ ಸಂಭವಿಸಿಲ್ಲ. ಕೊಡಗಿನಲ್ಲಿ ಸಂಭವಿಸಿದ ವ್ಯಾಪಕ ಹಾನಿ ಹಿನ್ನೆಲೆಯಲ್ಲಿ ಅಂತಹ ಸಂಭಾವ್ಯ ಅನಾಹುತಗಳು ಸಂಭವಿಸಿದರೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರತಿ ಇಲಾಖೆಗಳು ಸ್ಪಷ್ಟ ಮಾರ್ಗಸೂಚಿ ಹೊಂದಿರಬೇಕು. ಈ ಹಿನ್ನೆಲೆಯಲ್ಲಿ ಪ್ರತಿ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದರು.

ಮುಂಗಾರು ಪೂರ್ವದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಚೆಕ್‌ಲೀಸ್ಟ್‌ ಪ್ರಕಾರ ಪ್ರತಿ ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ಇಂಜಿನಿಯರ್‌ಗಳು ಮಳೆಗಾಲ ಪೂರ್ವದಲ್ಲಿ ಹಾಗೂ ಆರಂಭದಲ್ಲಿ ಅನಾಹುತಗಳು ಸಂಭವಿಸಬಹುದಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ನೀರಿನಲ್ಲಿ ಮುಳುಗಿ ಮಕ್ಕಳು ಸಾವಿಗೀಡಾಗುವ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೇಸಿಗೆ ರಜೆ ಪೂರ್ವದಲ್ಲಿ ಶಾಲೆಗಳಲ್ಲಿ ಈ ಕುರಿತು ಮಕ್ಕಳಲ್ಲಿ ಸೂಕ್ತ ಜಾಗೃತಿ ಮೂಡಿಸಬೇಕು. ಕಳೆದ ಮೂರು ವರ್ಷಗಳಲ್ಲಿ ಮಕ್ಕಳು ಸಾವಿಗೀಡಾಗಿರುವ ಪ್ರಕರಣ ಪರಿಶೀಲನೆ ನಡೆಸಿ ಇದನ್ನು ತಪ್ಪಿಸಲು ಕೈಗೊಳ್ಳಬಹುದಾಗಿದ್ದ ಕ್ರಮಗಳ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.

ಮಾಣಿ ಜಲಾಶಯ ತುಂಬಿದ ಸಂದರ್ಭಗಳಲ್ಲಿ ಹಿನ್ನೀರಿನಲ್ಲಿರುವ ಬಿಚ್ಚೋಡಿ ಗ್ರಾಮ ಸಂಪರ್ಕ ಕಡಿದುಕೊಳ್ಳುತ್ತಿದೆ. ಇದಕ್ಕಾಗಿ ಸ್ಥಳ ಪರಿಶೀಲನೆ ನಡೆಸಿ ಸಂಪರ್ಕ ಕಲ್ಪಿಸಲು ಮಾಡಬಹುದಾದ ಕ್ರಮಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಿ. ಅಣೆಕಟ್ಟು ವ್ಯಾಪ್ತಿಯಲ್ಲಿ ಭೂಕಂಪನ ಮಾಪಕ ಕೇಂದ್ರ ಆರಂಭಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಬೇಕು. ಹುಲಿಕಲ್ ಘಾಟಿ ಪ್ರದೇಶದಲ್ಲಿ ಮಳೆಗಾಲದಲ್ಲಿ ಕುಸಿತ ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಿ ತುರ್ತು ಕ್ರಮ ಕೈಗೊಳ್ಳುವಂತೆ ಅವರು ಹೇಳಿದರು.

ಕ್ರಿಮಿನಲ್ ಮೊಕದ್ದಮೆ: ಯಾವುದೇ ಇಲಾಖೆ ವತಿಯಿಂದ ರಸ್ತೆ ಬದಿ ಅಗೆದು ಕಾಮಗಾರಿ ನಿರ್ವಹಿಸಿ. ಸರಿಯಾಗಿ ಅದನ್ನು ಮುಚ್ಚದೇ ಅನಾಹುತ ಸಂಭವಿಸಿದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವರಾಮೇ ಗೌಡ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶೇಖರ್‌, ರೆಡ್‌ಕ್ರಾಸ್‌ ಸಂಸ್ಥೆಯ ಡಾ| ಕುಮಾರ್‌, ಆಡಳಿತ ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಅಲೆಕ್ಸ್‌ ಲೋಬೊ, ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್‌ ಖಾನ್‌, ಇಲಾಖಾ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.