ನಾಯಕಿ, ಗಾಯಕಿ ಮೇಘನಾ ಈಗ ನಿರ್ಮಾಪಕಿ


Team Udayavani, May 5, 2019, 6:00 AM IST

1

ಸಾಮಾನ್ಯವಾಗಿ ಚಿತ್ರರಂಗದಲ್ಲಿ ವಿವಾಹದ ಬಳಿಕ ನಾಯಕ ನಟಿಯರು ತೆರೆಮರೆಗೆ ಸರಿಯುತ್ತಾರೆ, ಚಿತ್ರರಂಗಕ್ಕೆ ಬಹುತೇಕರು ಗುಡ್‌ ಬೈ ಹೇಳುತ್ತಾರೆ ಅನ್ನೋದು ಚಾಲ್ತಿಯಲ್ಲಿರುವ ಮಾತು. ಆದರೆ ಇದಕ್ಕೆ ಅಪವಾದ ಎಂಬಂತೆ ಕೆಲವು ನಟಿಯರು ವಿವಾಹದ ಬಳಿಕವೂ ಚಿತ್ರರಂಗದ ಬೇರೆ ಬೇರೆ ವಿಭಾಗಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಕ್ರಿಯರಾಗುತ್ತಾರೆ. ಅಂತಹ ನಟಿಯರ ಸಾಲಿಗೆ ಈಗ ಮೇಘನಾ ರಾಜ್‌ ಹೆಸರು ಸೇರ್ಪಡೆಯಾಗುತ್ತಿದೆ.

ಹೌದು, ಚಿತ್ರರಂಗದಲ್ಲಿ ಬಾಲನಟಿಯಾಗಿ ಪ್ರವೇಶ ಪಡೆದು ಬಳಿಕ ನಾಯಕ ನಟಿಯಾಗಿ ಬಡ್ತಿ ಪಡೆದು ಕನ್ನಡ, ತಮಿಳು ಚಿತ್ರರಂಗ ಎರಡರಲ್ಲೂ ಗುರುತಿಸಿಕೊಂಡಿದ್ದ ಮೇಘನಾ ರಾಜ್‌, ಮದುವೆಯ ಬಳಿಕ ಯಾವ ಚಿತ್ರಗಳಿಗೂ ಬಣ್ಣ ಹಚ್ಚಿರಲಿಲ್ಲ. ಅದಾದ ಬಳಿಕ ಎಂಎಂಸಿಹೆಚ್‌, ಸಿಂಗ ಸೇರಿದಂತೆ ಕೆಲವು ಚಿತ್ರದ ಗೀತೆಗಳಿಗೆ ಧ್ವನಿಯಾಗುವ ಮೂಲಕ ಗಾಯಕಿಯಾಗಿಯೂ ಮೇಘನಾ ಸೈ ಎನಿಸಿಕೊಂಡಿದ್ದರು . ಇದೀಗ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿರುವ ಮೇಘನಾ ಸಿನಿಮಾ ನಿರ್ಮಾಣದತ್ತ ಮುಖ ಮಾಡಿದ್ದಾರೆ. ಮೇಘನಾ ಪುಟಾಣಿ ಪಂಟರ್ ಎಂಬ ಹೆಸರಿನ ಮಕ್ಕಳ ಚಿತ್ರವನ್ನು “ಮೇಘನಾ ಕ್ರಿಯೇಷನ್ಸ್‌’ ಬ್ಯಾನರ್‌ ಮೂಲಕ ನಿರ್ಮಿಸುತ್ತಿದ್ದು, ಇಲ್ಲಿಯವರೆಗೆ ನಾಯಕಿಯಾಗಿ, ಗಾಯಕಿಯಾಗಿ ಪರಿಚಿತರಾಗಿದ್ದ ಮೇಘನಾ ಈಗ ನಿರ್ಮಾಪಕಿಯಾಗುತ್ತಿದ್ದಾರೆ.

ತಮ್ಮ ಚೊಚ್ಚಲ ನಿರ್ಮಾಣದ ಚಿತ್ರದ ಬಗ್ಗೆ ಮತ್ತು ನಿರ್ಮಾಪಕಿ ಆಗುತ್ತಿರುವುದರ ಬಗ್ಗೆ ಮಾತನಾಡುವ ಮೇಘನಾ ರಾಜ್‌, “”ಪುಟಾಣಿ ಪಂಟರ್ ಚಿತ್ರದ ಹೆಸರೇ ಹೇಳುವಂತೆ ಇದೊಂದು ಮಕ್ಕಳ ಚಿತ್ರ. ಮೊದಲಿನಿಂದಲೂ ಚಿತ್ರ ನಿರ್ಮಾಣದ ಬಗ್ಗೆ ಆಸಕ್ತಿಯಿತ್ತು. ಈಗ ಆ ಕನಸು ನನಸಾಗುತ್ತಿದೆ. ನಾನು ಮಾಡುವ ಚಿತ್ರ ಮೊದಲು ನನಗೆ ಇಷ್ಟವಾಗಬೇಕು ನಂತರ ಅದು ಪ್ರೇಕ್ಷಕರಿಗೆ ಇಷ್ಟವಾಗುತ್ತದೆ. ಹಾಗಾಗಿ ನನಗೆ ಇಷ್ಟವಾಗುವ ಒಂದೊಳ್ಳೆ ಕಥೆಯನ್ನು ಆಯ್ಕೆ ಮಾಡಿಕೊಂಡು ಈ ಚಿತ್ರವನ್ನು ನಿರ್ಮಿಸಲು ಮುಂದಾದೆ’ ಎನ್ನುತ್ತಾರೆ.

ಇನ್ನು ಮೇಘನಾ ನಿರ್ಮಾಣದ ಈ ಚಿತ್ರವನ್ನು ಬೆನಕ ಪವನ್‌ ನಿರ್ದೇಶಿಸುತ್ತಿದ್ದು, “ಕನ್ನಡದ ಪ್ರೇಕ್ಷಕರ ಮುಂದೆ ಇಡೀ ಫ್ಯಾಮಿಲಿ ಕುಳಿತು ನೋಡುವಂಥ ಸದಭಿರುಚಿಯ ಚಿತ್ರವನ್ನು ಕೊಡಲು ನಮ್ಮ ತಂಡ ತಯಾರಿ ಮಾಡಿಕೊಂಡಿದೆ’ ಎಂಬ ಭರವಸೆಯನ್ನು ವ್ಯಕ್ತಪಡಿಸುತ್ತಾರೆ.

ಸದ್ಯ ಮೇಘನಾ ರಾಜ್‌ ನಿರ್ಮಾಣದ ಚೊಚ್ಚಲ ಚಿತ್ರದ ಚಿತ್ರೀಕರಣ ಆರಂಭ ವಾಗಿದ್ದು, ಎಲ್ಲಾ ಅಂದುಕೊಂಡಂತೆ ನಡೆದರೆ, ಈ ವರ್ಷ ಅಂತ್ಯದೊಳಗೆ ಮೇಘನಾ ಪ್ರೊಡಕ್ಷನ್‌ನ ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ. ನಾಯಕಿಯಾಗಿ, ಗಾಯಕಿಯಾಗಿ ಸೈ ಎನಿಸಿಕೊಂಡಿರುವ ಮೇಘನಾ ರಾಜ್‌ ನಿರ್ಮಾಪಕಿಯಾಗಿಯೂ ಸೈ ಎನಿಸಿಕೊಳ್ಳುತ್ತಾರಾ ಅನ್ನೋದು ಪುಟಾಣಿ ಪಂಟರ್ ಬಿಡುಗಡೆಯಾದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.