ನಗುತ್ತಿರುವ ಶೀಲಾ ದೀಕ್ಷಿತ್‌, ತಿರುಗೇಟು ನೀಡುವ ಪ್ರಧಾನಿ…


Team Udayavani, May 5, 2019, 3:05 AM IST

nagutti

ಬೆಂಗಳೂರು: ಅಗೋ ಅಲ್ಲಿ… ದಿಲ್ಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌ ನಗುತ್ತ ನಿಂತಿದ್ದಾರೆ. ಈಗೋ ಇಲ್ಲಿ… ವಿರೋಧಿ ಮಿತ್ರರಿಗೆ ತಿರುಗೇಟು ನೀಡಲು ಮುಂದಾಗಿರುವ ಪ್ರಧಾನಿ ಮೋದಿ, ಇತ್ತ ಬನ್ನಿ ಅಟಲ್‌ ಜೀ ಏನೋ ಚಿಂತೆಯಲ್ಲಿ ಮುಳುಗಿದ್ದಾರೆ, ಅತ್ತ ನೋಡಿ ಅಡ್ವಾಣಿ ಗಂಭೀರ ವದನ.

ಇವೆರೆಲ್ಲಾ ಹೀಗೇಕೆ ಇದ್ದಾರೆ? ಎಲ್ಲಿದ್ದಾರೆ ಅವರೆಲ್ಲಾ ಎಂದು ಯೋಚಿಸುತ್ತಿದ್ದಿರಾ..?
ಅಂತಾರಾಷ್ಟ್ರೀಯ ವ್ಯಂಗ್ಯಚಿತ್ರಕಾರರ ದಿನದ ಅಂಗವಾಗಿ ಭಾರತೀಯ ವ್ಯಂಗ್ಯಚಿತ್ರಕಾರರ ಸಂಸ್ಥೆ ಟ್ರಿನಿಟಿ ವೃತ್ತದಲ್ಲಿನ ಸಂಶಯ ಗ್ಯಾಲರಿಯಲ್ಲಿ ಮೇ 18ರವರೆಗೂ ಹಮ್ಮಿಕೊಂಡಿರುವ ಪರೇಶ್‌ ನಾಥ್‌ ರಚನೆಯ ವ್ಯಂಗ್ಯಚಿತ್ರಗಳಲ್ಲಿ ಇವರನ್ನೆಲ್ಲಾ ಕಾಣಬಹುದು.

ಭಾರತದ ಮಾಜಿ ಉಪ ರಾಷ್ಟ್ರಪತಿ ಭೈರೋನ್‌ ಸಿಂಗ್‌ ಶೇಖಾವತ್‌, ನಗುತ್ತಾ ನಿಂತ ಕೆ.ಆರ್‌.ನಾರಾಯಣನ್‌, ಲೇಖನಿಯನ್ನೇ ರಾಕೆಟ್‌ ಮಾಡಿಕೊಂಡು ಹಾರುತ್ತಿರುವ ನೊಬೆಲ್‌ ಪ್ರಶಸ್ತಿ ಪುರಸ್ಕೃತ ವಿ.ಎಸ್‌.ನೈಪೌಲ್‌, ಇಸ್ರೇಲ್‌ನ ಮಾಜಿ ಪ್ರಧಾನಿ ಏರಿಯಲ್‌ ಶರೋನ್‌ರ ಹದ್ದಿನ ನೋಟ ನೋಡುಗರಲ್ಲಿ ನಗೆ ಉಕ್ಕಿಸುತ್ತವೆ.

ಅಮೆರಿಕ ಸೈನಿಕರು ಉಗ್ರರ ವಿರುದ್ಧ ಜಯ ಗಳಿಸಲು ಹುಡುಕುತ್ತಿರುವ ಮಾರ್ಗ, ಹವಾಮಾನ ಬದಲಾವಣೆ; ತಜ್ಞರ ಕೂಗು- ನೀತಿ ನಿರೂಪಕರು ಮಾಲಿನ್ಯಕ್ಕೆ ಮತ್ತಷ್ಟು ಕೊಡುಗೆ ನೀಡುತ್ತಿರುವ ಚಿತ್ರ, ಭೂಮಿ ಮೇಲೆ ಅಲ್ಲದೆ ಸಮುದ್ರದಲ್ಲೂ ಗಡಿ ರೇಖೆ ವಿಸ್ತರಿಸಲು ಮುಂದಾಗಿರುವ ಚೀನಾದ ಹುಚ್ಚಾಟ,

ಉದ್ಯೋಗ ಸೃಷ್ಟಿಯ ಭರವಸೆ ನೀಡುತ್ತ ನಿರುದ್ಯೋಗಿಗಳಿಗೆ ಮಣ್ಣು ಮುಚ್ಚುತ್ತಿರುವ ಚಿತ್ರಗಳು ವ್ಯವಸ್ಥೆಯನ್ನು ವಿಡಂಬಿಸುತ್ತವೆ. ಭ್ರಷ್ಟಚಾರ ನಿಗ್ರಹಕ್ಕೆ ಇಲಿ ಬೋನು ಹಿಡಿದು ನಿಂತ ಅಧಿಕಾರಿ, ಅವನ ಹಿಂಬದಿಯಲ್ಲಿ ರಾಕ್ಷಸ ಗಾತ್ರದಲ್ಲಿ ಬೆಳದು ನಿಂತ ಭ್ರಷ್ಟಚಾರ, ನೀರಿಲ್ಲದ ಈಜುಕೊಳದಲ್ಲಿ ಕ್ರೀಡಾಪಟು ತರಬೇತಿ ಪಡೆಯುತ್ತಿರುವುದು,

ಸೇರಿ ಹಲವು ಚಿತ್ರಗಳು ಸಮಾಜದ ಓರೆಕೋರೆಗಳನ್ನು ಬಿಂಬಿಸುತ್ತವೆ. ವಿಶ್ವಸಂಸ್ಥೆಯ ರಾನಸ್‌ ಲೂರೀ ವ್ಯಂಗ್ಯಚಿತ್ರ ಪ್ರಶಸ್ತಿಯನ್ನು ಎರಡು ಬಾರಿ ಪಡೆದ ಮೊದಲ ಭಾರತೀಯ ವ್ಯಂಗ್ಯಚಿತ್ರಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪರೇಶ್‌ ನಾಥ್‌ರ ರಾಜಕೀಯ, ರಾಜಕಾರನಿಗಳ ವಿಡಂಬನಾತ್ಮಕ ಕಾಟೂನ್‌ಗಳು ನೋಡುಗರನ್ನು ನಗೆಗಡಲಿನಲ್ಲಿ ತೇಲಿಸುತ್ತವೆ.

ವ್ಯಂಗ್ಯಚಿತ್ರಕಾರರು ಮತ್ತೂಬ್ಬರ ಮನಸ್ಸಿಗೆ ನೋವಾಗದಂತೆ ಸಮಾಜದ ಓರೆಕೋರೆಗಳನ್ನು ಚಿತ್ರದಲ್ಲಿ ಸೆರೆ ಹಿಡಿಯಬೇಕು. ತಮ್ಮ ಚಿತ್ರಗಳ ಮೂಲಕ ವ್ಯವಸ್ಥೆ ಮೇಲೆ ಪ್ರಭಾವ ಬೀರುವುದು ಸವಾಲಿನ ಕೆಲಸ.
-ಪರೇಶ್‌ ನಾಥ್‌, ವ್ಯಂಗ್ಯಚಿತ್ರಕಾರ

ಟಾಪ್ ನ್ಯೂಸ್

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.