ಮನೆ ಮುಂದೆ ನದಿ ಹರಿಯುತ್ತಿದ್ದರೂ ಕುಡಿಯಲು ನೀರಿಲ್ಲ!

ಬಿಜೂರು ಗ್ರಾ.ಪಂ. ನೀರಿನ ಸಮಸ್ಯೆ

Team Udayavani, May 5, 2019, 6:15 AM IST

mane-munde

ಉಪ್ಪು³ಂದ: ಬಿಜೂರು ಗ್ರಾ.ಪಂ.ನ 1ನೇ ವಾರ್ಡ್‌ ನವಗ್ರಾಮ ಕಾಲನಿಯಲ್ಲಿನ ಮನೆಗಳಿಗೆ ಬವಳಾಡಿಯಲ್ಲಿರುವ ಟ್ಯಾಂಕ್‌ನಿಂದ 2 ದಿನಗಳಿಗೊಮ್ಮೆ ನಳ್ಳಿ ನೀರು ನೀಡಲಾಗುತ್ತಿದೆ. ಬಾವಿಯಲ್ಲಿ ನೀರು ಕಡಿಮೆಯಾದಲ್ಲಿ ಟ್ಯಾಂಕ್‌ ನೀರಿನ ದಾರಿಯನ್ನು ಕಾಯಬೇಕು. ಗರಡಿ, ಕಳಿಸಾಲು, ದೊಂಬ್ಲಿಕೇರಿ ಪ್ರದೇಶದಲ್ಲಿ, ನಿಸರ್ಗಕೇರಿ, ಕಳಿನಬಾಗಿಲು, ಸಾಲಿಮಕ್ಕಿ ಇಲ್ಲಿ ನದಿ ಮನೆಗಳ ಎದುರಿನಲ್ಲೇ ಹರಿಯುತ್ತಿದ್ದರೂ ಉಪ್ಪು ನೀರಾದ್ದರಿಂದ ಉಪಯೋಗಿಸಲು ಯೋಗ್ಯವಾಗಿಲ್ಲ. ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ನಳ್ಳಿಗಳ ಮೂಲಕ ನೀರು ಬರುವ ಸೂಚನೆಯಂತೂ ಇಲ್ಲ. ಇಲ್ಲಿನ ನಿವಾಸಿಗಳು ನಳ್ಳಿಗಳ ಮುಂದೆ ಕೊಡಪಾನ ಇಟ್ಟು ಯಾವ ಸಮಯದಲ್ಲಿ ನೀರು ಬಿಡಬಹುದೊ ಎಂದು ಕಾಯುತ್ತಾ ಕುಳಿತುಕೊಳ್ಳುವುದು ರೂಢಿಯಾಗಿದೆ. ಅರ್ಧ ಗಂಟೆ ನೀರು ಬಂದರೆ ಹೆಚ್ಚು.

ಬಾವಿ ಇದ್ದರೂ ನೀರಿಲ್ಲ
ಬೀಜೂರು ಗ್ರಾಮ ಪಂಚಾಯತ್‌ ವ್ಯಾಪ್ತಿ ಯಲ್ಲಿ ಅಂತರ್ಜಲ ತೀವ್ರ ಕುಸಿತಗೊಂಡಿ ರುವುದು ಕಂಡುಬರುತ್ತದೆ. ಕಂಚಿಕಾನ್‌, ಬಿಜೂರು ಶಾಲಾ ವಠಾರದ ನಿವಾಸಿಗಳು ಟ್ಯಾಂಕ್‌ ನೀರು ನೀಡುವಂತೆ ಗ್ರಾ.ಪಂ.ನ ಮೊರೆಹೋಗಿವೆ. ನಮ್ಮಲ್ಲಿ ಬಾವಿ ಇದೆ ಆದರೆ ಈಗ ಪೂರ್ಣ ಬತ್ತಿ ಹೋಗಿದ್ದು ನೀರು ನೀಡುವಂತೆ ಜನರು ಕೇಳುತ್ತಿದ್ದಾರೆ.

ದಾರಿ ಕಾಯಬೇಕು
3ನೇ ವಾರ್ಡ್‌ನ ನಿಸರ್ಗಕೇರಿ, ಕಳಿನ ಬಾಗಿಲು ಹಾಗೂ ಕಳಿಸಾಲು ಪ್ರದೇಶದಲ್ಲಿ ನೀರಿನ ಬರ ವ್ಯಾಪಿಸಿದೆ. ನಳ್ಳಿಯ ಮೂಲಕ ನೀರು ಬರುವ ಖಾತರಿ ಇಲ್ಲ. ಎರಡು ದಿನಕ್ಕೊಮ್ಮೆ ಟ್ಯಾಂಕರ್‌ ಮೂಲಕ ನೀರು ಬಿಡಲಾಗುತ್ತಿದೆ. ಇದಕ್ಕೆ ಸಮಯ ನಿಗದಿ ಇಲ್ಲ. 10 ಕೊಡಪಾನ ನೀರು ಕೊಟ್ಟರೆ ಹೆಚ್ಚು ಎನ್ನುತ್ತಾರೆ ಇಲ್ಲಿನ ನಿವಾಸಿ ಅಕ್ಕಮ್ಮ.

ನೀರು ಸಾಲುತ್ತಿಲ್ಲ
ಸ್ಥಳೀಯಾಡಳಿತ ಟ್ಯಾಂಕರ್‌ ಮೂಲಕ ಪ್ರತಿ ಮನೆಗೆ ಲೀ. 250ಕ್ಕೂ ಹೆಚ್ಚು ನೀರು ನೀಡುತ್ತಿದ್ದೇವೆ ಎನ್ನುತ್ತಿದೆ. ಪ್ರತಿದಿನ 4 ಸಾವಿರ ಲೀ. ನೀರು ಸರಬರಾಜು ಮಾಡುತ್ತಿದ್ದು, ಅಗತ್ಯ ಮನಗಂಡು ನೀರು ನೀಡಿ ಸಮಸ್ಯೆ ಪರಿಹಾರ ಮಾಡುವುದಾಗಿ ಹೇಳುತ್ತದೆ. ಆದರೆ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕು ಎನ್ನುವುದು ಜನರ ಬೇಡಿಕೆಯಾಗಿದೆ.

ನದಿ ನೀರನ್ನು ಉಪಯೋಗಿಸಲು ಯೋಜನೆ ರೂಪಿಸಿ
ಬಿಜೂರು ಗ್ರಾಮದ ಪೂರ್ವ ದಿಕ್ಕಿನಲ್ಲಿ ಸುಮನಾವತಿ ನದಿ ಹರಿಯುತ್ತದೆ. ನದಿಯ ನೀರು ಹರಿದು ಸಮುದ್ರ ಸೇರಿ ವ್ಯರ್ಥವಾಗುತ್ತದೆ. ಈಗ ಇಲ್ಲಿ ಕೃಷಿಗೆ ಸಹಾಯಕವಾಗಲೆಂದು ಸ್ವಯಂ ಚಾಲಿತ ಡ್ಯಾಂ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆ ವಿಸ್ತರಿತ ಯೋಜನೆ ರೂಪಿಸಿ ನೀರನ್ನು ಸಂಸ್ಕರಿಸಿ ಸಾರ್ವಜನಿಕರಿಗೆ ನೀಡುವ ಯೋಜನೆ ರೂಪಿಸಿದರೆ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ಪರಿಹರಿಸಲು ಸಾಧ್ಯವಿದೆ.

ಜನರ ಬೇಡಿಕೆಗಳು
– ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ
– ಸಮಯಕ್ಕೆ ಸರಿಯಾಗಿ ಟ್ಯಾಂಕರ್‌ ನೀರು ಬರಲಿ
– ಅಗತ್ಯ ಇರುವಷ್ಟು ನೀರು ನೀಡಬೇಕು
– ಅಂತರ್ಜಲ ಕುಸಿತ ತಡೆಗೆ ಕ್ರಮ ಅಗತ್ಯ

ಅವಶ್ಯ ಇರುವಷ್ಟು ಕೊಡಲಿ
ಎರಡು ದಿನಗಳಿಗೆ ಒಮ್ಮೆ ನೀರು ಕೊಡುತ್ತಾರೆ. ಅದು ಎಷ್ಟು ಹೊತ್ತಿಗೆ ಬರುತ್ತದೆ ಎನ್ನುವ ಗ್ಯಾರಂಟಿ ಇಲ್ಲ. ಸಿಕ್ಕಿದಷ್ಟು ನೀರಿನಲ್ಲೇ ಎರಡು ದಿನ ಕಳೆಯಬೇಕು. ಅವಶ ಇರುವಷ್ಟು ಆದರೂ ನೀರು ನೀಡಲು ಗ್ರಾಮ ಪಂಚಾಯತ್‌ ಮುಂದಾಗಬೇಕು.
– ಕೇಶವ ಬಿಜೂರು, ಸ್ಥಳೀಯರು

ಟ್ಯಾಂಕರ್‌ ಮೂಲಕ ನೀರು
ಬಿಜೂರು ಗ್ರಾಮ ಪಂಚಾಯತ್‌ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿತಗೊಂಡಿದೆ. ಬಾವಿಗಳಲ್ಲಿ ನೀರು ಬತ್ತಿ ಹೋಗಿದೆ. ನಮಗೂ ಟ್ಯಾಂಕರ್‌ ನೀರು ನೀಡಬೇಕು ಎನ್ನುವ ಮನವಿಗಳು ಬರುತ್ತಿವೆ. ಟ್ಯಾಂಕರ್‌ ಮೂಲಕ ನೀರು ನೀಡಲು ಕ್ರಮ ಕೈಗೊಂಡಿದ್ದೇವೆ.
-ಮಾಧವ ದೇವಾಡಿಗ, ಕಾರ್ಯದರ್ಶಿ ಪಂಚಾಯತ್‌

ನೀರಿನ ಉಪಯೋಗವಾಗಲಿ
ನೀರಿನ ಸಮಸ್ಯೆ ಪರಿಹರಿಸಲು ಜಿಲ್ಲಾ ಪಂಚಾಯತ್‌ ವತಿಯಿಂದ ಊರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಬಾವಿ ನಿರ್ಮಿಸಲಾಗಿದೆ. ಸುಮಾರು. 2.5 ಸಾವಿರ ಮೀಟರ್‌ ಪೈಪ್‌ಲೈನ್‌ ಕೂಡ ಮಾಡಲಾಗಿದ್ದರು ಸಹ ನೀರಿನ ಸಮಸ್ಯೆಗೆ ಮುಕ್ತಿ ದೊರಕಿಲ್ಲ. ಜಿಲ್ಲಾ ಪಂಚಾಯತ್‌ ಅನುದಾನದಲ್ಲಿ ನಿರ್ಮಿಸಿರುವ ಕಟ್ಟೆಮನೆ ದಾಸೋಡಿಮನೆ ಬಳಿಯ ಬಾವಿಯಲ್ಲಿ ನೀರಿದ್ದರೂ ಉಪಯೋಗಿಸಿಕೊಳ್ಳಲು ಯೋಜನೆ ರೂಪಿಸದಿರುವುದು ಸ್ಥಳೀಯಾಡಳಿತದ ನಿರ್ಲಕ್ಷ್ಯ ತೋರಿಸುತ್ತದೆ.

– ಕೃಷ್ಣ ಬಿಜೂರು

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.