ಆರ್‌ಪಿಎಫ್ ಸಿಬ್ಬಂದಿ ಕರ್ತವ್ಯ ನಿಯೋಜನೆಯಲ್ಲಿ ತಾರತಮ್ಯ?


Team Udayavani, May 5, 2019, 10:49 AM IST

hub-1

ಹುಬ್ಬಳ್ಳಿ: ರೈಲ್ವೆ ಸುರಕ್ಷತಾ ಬಲ (ಆರ್‌ಪಿಎಫ್‌)ಸಿಬ್ಬಂದಿ ಕರ್ತವ್ಯ ನಿಯೋಜನೆಯಲ್ಲಿ ಅಧಿಕಾರಿಗಳು ತಾರತಮ್ಯ ತೋರುತ್ತಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಕೆಲ ಸಿಬ್ಬಂದಿಗೆ 12 ತಾಸು, 24 ತಾಸು ಕೆಲಸ ನೀಡಲಾಗುತ್ತಿದೆ ಎಂಬ ಅಳಲು ಅನೇಕರದ್ದಾಗಿದೆ.

ರೈಲ್ವೆ ನಿಲ್ದಾಣ ಸೇರಿದಂತೆ ಇಲಾಖೆಯ ಪ್ರಮುಖ ಸ್ಥಳಗಳಲ್ಲಿ ಭದ್ರತೆ, ಸುರಕ್ಷತಾ ಕ್ರಮ ಕೈಗೊಳ್ಳುವ ನೆಪದಲ್ಲಿ ಅಧಿಕಾರಿಗಳು ಕಳೆದೊಂದು ವರ್ಷಗಳಿಂದ ತಮಗೆ ಬೇಕಾದವರನ್ನು ಹೊರತುಪಡಿಸಿ ಇನ್ನುಳಿದ ಸಿಬ್ಬಂದಿಗೆ ದಿನದ 12 ತಾಸು ಕೆಲಸಕ್ಕೆ ನಿಯೋಜಿಸುತ್ತಿದ್ದಾರೆ. ಕರ್ತವ್ಯದ ಮಧ್ಯೆ ಎರಡು ತಾಸು ಮಾತ್ರ ವಿಶ್ರಾಂತಿ ಬಿಟ್ಟು 24 ತಾಸು ಡ್ಯೂಟಿ ಮಾಡುವಂತೆ ಸೂಚಿಸುತ್ತಿದ್ದಾರೆಂದು ಹೇಳಲಾಗುತ್ತಿದೆ.

ಓರ್ವ ಸಿಬ್ಬಂದಿ 12 ತಾಸು ಕರ್ತವ್ಯದಲ್ಲಿದ್ದರೆ ಅವರಿಗೆ ಸ್ಥಳದಲ್ಲೇ ನೀರು, ಊಟ ಕೊಡಬೇಕೆಂಬ ನಿಯಮವಿದೆ. ಆದರೆ ಅಧಿಕಾರಿಗಳು ಆ ಯಾವ ವ್ಯವಸ್ಥೆಯನ್ನು ಸಿಬ್ಬಂದಿಗೆ ಒದಗಿಸುತ್ತಿಲ್ಲ. ತಮಗೆ ಬೇಕಾದವರಿಗೆ ದಿನಕ್ಕೆ 8 ತಾಸು ಮಾತ್ರ ಕರ್ತವ್ಯ ಮಾಡಲು ಹೇಳುತ್ತಾರೆ. ಅವರಿಗೆ ರಜೆ ಕೂಡ ಕೊಡುತ್ತಾರೆ. ಮುಖ ನೋಡಿ ಮಣೆ ಹಾಕುತ್ತಿದ್ದಾರೆ. ಆದರೆ ಇನ್ನುಳಿದವರಿಗೆ ರಜೆ ನೀಡಲು ಸತಾಯಿಸುತ್ತಿದ್ದು, ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾದರೂ ಹಕ್ಕಿನ ರಜೆ ನೀಡದೆ ಗೈರು ಹಾಜರಿ ಎಂದು ನಮೂದಿಸುತ್ತಿದ್ದಾರೆ. ಆರ್‌ಪಿಎಫ್ ಪ್ರಧಾನ ನಿರೀಕ್ಷಕರು/ಪ್ರಧಾನ ಮುಖ್ಯ ಭದ್ರತಾ ಆಯುಕ್ತರ (ಐಜಿ/ಪಿಸಿಎಸ್‌ಸಿ) ಆದೇಶವಿದೆ. ರಜೆ ಕೊಡಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ತಮಗೆ ಬೇಕಾದವರಿಗೆ ಒಂದು ರಾತ್ರಿ ಪಾಳಿ ಮಾತ್ರ ಡ್ಯೂಟಿ ಹಾಕುತ್ತಾರೆ. ಇನ್ನುಳಿದವರಿಗೆ ವಾರದಲ್ಲಿ ಮೂರು ದಿನ ರಾತ್ರಿ ಡ್ಯೂಟಿ ಕಡ್ಡಾಯ ಮಾಡಲಾಗಿದೆ. ಉತ್ತರ ಭಾರತೀಯರು ಹಾಗೂ ದಕ್ಷಿಣ ಭಾರತೀಯರು ಎಂಬ ಭೇದಭಾವ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ನಿಲ್ದಾಣದ ಐದು ಪ್ಲಾಟ್ಫಾರ್ಮ್ನ್ನು ಇಬ್ಬರೇ ಸಶಸ್ತ್ರ ಸಿಬ್ಬಂದಿ ಒಂದು ತುದಿಯಿಂದ ಇನ್ನೊಂದು ತುದಿವರೆಗೆ ನೋಡಿಕೊಳ್ಳಬೇಕು. ಅನುಮಾನ ಬಂದರೆ ಪ್ರಯಾಣಿಕರ ತಪಾಸಣೆ ಮಾಡಬೇಕು. ಕರ್ತವ್ಯದಲ್ಲಿ ಏನಾದರೂ ಲೋಪವಾದರೆ ಇಲ್ಲವೇ ನಿಲ್ದಾಣದಲ್ಲಿ ಅನಾಹುತ, ಅವಘಡಗಳು ಸಂಭವಿಸಿದರೆ ಅವರನ್ನೇ ಹೊಣೆಗಾರರನ್ನಾಗಿ ಮಾಡಿ, ಸಂಬಳ ಕಡಿತಗೊಳಿಸುತ್ತಾರೆ. ಕರ್ತವ್ಯದಲ್ಲಿದ್ದಾಗ ಟೋಪಿ ಹಾಕಿಲ್ಲ, ಪ್ರಯಾಣಿಕರ ಲಗೇಜ್‌, ಟಿಕೆಟ್ ತಪಾಸಣೆ ಮಾಡಿಲ್ಲ, ಮೊಬೈಲ್ನಲ್ಲಿ ಮಾತನಾಡುತ್ತಿದ್ದೀರಿ, ಶೌಚಾಲಯಕ್ಕೆ ಹೋಗಿದ್ದೀರಿ ಎಂದು ಕ್ಷುಲ್ಲಕ ಕಾರಣಕ್ಕೆ ಸಂಬಳ ಕಡಿತಗೊಳಿಸಲಾಗುತ್ತಿದೆ ಎಂದು ದೂರಲಾಗಿದೆ.

ಆರ್‌ಪಿಎಫ್‌ ಸಿಬ್ಬಂದಿಯನ್ನು ಹಗಲಿರುಳು ದುಡಿಸಿಕೊಳ್ಳುತ್ತಿರುವುದನ್ನು ಗಮನಿಸಿರುವ ನೈಋತ್ಯ ರೈಲ್ವೆ ಮಹಾ ಪ್ರಬಂಧಕರು ಪಿಸಿಎಸ್‌ಸಿ ಅವರಿಗೆ ಹಾಗೆ ನಡೆಸಿಕೊಳ್ಳದಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ ಅಧಿಕಾರಿಗಳು ಮಾತ್ರ ತಮ್ಮ ಚಾಳಿ ಬಿಟ್ಟಿಲ್ಲ. ದೇಶದ ಗಡಿ ನಿಯಂತ್ರಣ ರೇಖೆಯಲ್ಲಿ ಅರೆಸೇನಾ ಪಡೆಗೆ ಇಲ್ಲದಂತಹ ಹಾಗೂ ದೇಶದ ಯಾವ ರೈಲ್ವೆ ವಿಭಾಗಗಳಲ್ಲೂ ಇಲ್ಲದಂತಹ ಡ್ಯೂಟಿಯನ್ನು ನೈಋತ್ಯ ರೈಲ್ವೆ ವಲಯದ ಸಿಬ್ಬಂದಿಯಿಂದ ಮಾಡಿಸಲಾಗುತ್ತಿದೆ ಎಂಬ ಗೋಳು ಅನೇಕ ಸಿಬ್ಬಂದಿಯದ್ದಾಗಿದೆ.

ಶಿವಶಂಕರ ಕಂಠಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.