ಪ್ರಧಾನಿಯಿಂದ ಕೀಳುಮಟ್ಟದ ರಾಜಕೀಯ: ದಿನೇಶ ಆರೋಪ
Team Udayavani, May 5, 2019, 11:05 AM IST
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನಮ್ಮೊಂದಿಗೆ ಟಿಎಂಸಿಯ 40 ಶಾಸಕರು ಸಂಪರ್ಕದಲ್ಲಿದ್ದಾರೆಂದು ಹೇಳುವ ಮೂಲಕ ಕೀಳುಮಟ್ಟದ ರಾಜಕಾರಣಕ್ಕಿಳಿದಿದ್ದಾರೆ. ಆಪರೇಷನ್ ಕಮಲಕ್ಕೆ ಅವರೇ ಸಹಾಯ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಗಂಭೀರ ಆರೋಪ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಲೋಕಸಭೆ ಹಾಗೂ ಚಿಂಚೋಳಿ ವಿಧಾನಸಭೆ ಉಪ ಚುನಾವಣೆಗೆ ಬಿಜೆಪಿಗೆ ಅಭ್ಯರ್ಥಿಗಳೇ ಸಿಗಲಿಲ್ಲ. ಹೀಗಾಗಿ ಅವರಿಗೆ ಅಪ್ಪ-ಮಕ್ಕಳೇ ಬೇಕಾಯಿತೆಂದು ಗೇಲಿ ಮಾಡಿದರು.
ಕುಂದಗೋಳ ಉಪ ಚುನಾವಣೆ ತಯಾರಿಗೆ ಯಾರು ಯಾವ ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ಚರ್ಚಿಸುತ್ತಿದ್ದೇವೆ. ಕುಂದಗೋಳದಲ್ಲಿ ಬಂಡಾಯವೆಂದಿದ್ದ ಶಿವಾನಂದ ಬೆಂತೂರ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಸತ್ಯಾಂಶ ಯಾವುದು, ಸುಳ್ಳು ಯಾವುದೆಂಬುದು ನನಗೆ ಗೊತ್ತಿದೆ. ಬೆಂತೂರ ಬಗ್ಗೆ ಈಗ ಮಾತನಾಡುವ ಅವಶ್ಯಕತೆ ಇಲ್ಲ ಎಂದರು.
ಈ ನಡುವೆ ನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಭೆ ನಂತರ ಮಾತನಾಡಿದ ಅವರು, ಪಕ್ಷದ ಶಾಸಕರು, ಸಚಿವರು, ಪದಾಧಿಕಾರಿಗಳಿಗೆ ಜವಾಬ್ದಾರಿ ನೀಡುವ ಬಗ್ಗೆ ಸಭೆ ಮಾಡಿದ್ದೇವೆ. ಉಪ ಮುಖ್ಯಮಂತ್ರಿ ಡಾ|ಜಿ. ಪರಮೇಶ್ವರ ಅವರು ಕೆಲವು ಸಲಹೆ ನೀಡಿದ್ದಾರೆ. ಕುಂದಗೋಳದಲ್ಲಿ ಗೆಲ್ಲೋದ್ರಲ್ಲಿ ನಮಗೆ ಅನುಮಾನವೇ ಇಲ್ಲ. ಚಿಂಚೋಳಿ ಕೂಡಾ ಗೆಲ್ಲುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ