ಪರ್ಯಾಯ ಜಲಮೂಲ ಪತ್ತೆ ಮಾಡಿ

ನೀರಿನ ಯೋಜನೆ ಮಿಷನ್‌ ಮೋಡ್‌ನ‌ಲ್ಲಿ ಜಾರಿಗೆ ತನ್ನಿ•ಸಮೀಪದ ಕೆರೆ-ಬಾವಿಗಳಿಂದ ಪೈಪ್‌ಲೈನ್‌ ಒದಗಿಸಿ

Team Udayavani, May 5, 2019, 11:25 AM IST

5-MAY-11

ಕಲಬುರಗಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲನೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಲಬುರಗಿ: ಜಿಲ್ಲೆಯಲ್ಲಿ ನೀರಿನ ಸಮಸ್ಯೆಯಿರುವ 133 ಗ್ರಾಮಗಳಿಗೆ 140 ಟ್ಯಾಂಕರ್‌ ಮೂಲಕ ಪ್ರತಿನಿತ್ಯ ಸುಮಾರು 435 ಟ್ರಿಪ್‌ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಇದು ತಾತ್ಕಾಲಿಕ ವ್ಯವಸ್ಥೆ ಮಾತ್ರವಾಗಿದೆ. ಇಂತಹ ಕ್ಲಿಷ್ಟಕರ ಗ್ರಾಮಗಳಲ್ಲಿ ಜನರಿಗೆ ಕುಡಿಯುವ ನೀರು ಒದಗಿಸಲು ಟ್ಯಾಂಕರ್‌ ಬದಲಾಗಿ ಪರ್ಯಾಯವಾಗಿ ಜಲಮೂಲ ಪತ್ತೆ ಹಚ್ಚಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶ ಕುಮಾರ ಸೂಚನೆ ನೀಡಿದರು.

ಶನಿವಾರ ರಾತ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕಳೆದ ಎರಡ್ಮೂರು ತಿಂಗಳಿಂದ ಜಿಲ್ಲೆಯ ಹಲವು ಸಮಸ್ಯಾತ್ಮಕ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಟ್ಯಾಂಕರ್‌ ನೀರು ಪೂರೈಸುವ ಗ್ರಾಮದಲ್ಲಿ ಜಲಮೂಲ ಪತ್ತೆ ಹಚ್ಚಿ ಹೊಸದಾಗಿ ಕೊಳವೆ ಬಾವಿ, ಬೋರವೆಲ್ ಕೊರೆಯಿರಿ. ರಾಷ್ಟ್ರೀಯ ವಿಪತ್ತು ಕಾಯ್ದೆಯಡಿ ಗ್ರಾಮದ ಅಕ್ಕಪಕ್ಕದ ಖಾಸಗಿ ಜಮೀನಿನಲ್ಲಿರುವ ತೆರೆದ ಬಾವಿ, ಬೋರವೆಲ್ ಜಲಮೂಲಗಳಿದ್ದಲ್ಲಿ ಅದನ್ನು ಸರ್ಕಾರಕ್ಕೆ ವಶಕ್ಕೆ ಪಡೆದು ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಸಬೇಕು ಎಂದರು.

ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುತ್ತಿರುವ ಬಗ್ಗೆ ತಾಪಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಗ್ರಾಪಂ ಪಿ.ಡಿ.ಒ.ಗಳು ನಿಗಾ ವಹಿಸಬೇಕು. ಜಿ.ಪಿ.ಎಸ್‌. ತಂತ್ರಾಂಶ ಪರಿಶೀಲಿಸಿಯೆ ಹಣ ಪಾವತಿಸಬೇಕು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ತಾಲೂಕುಗಳು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ತುರ್ತಾಗಿ ಕಾಮಗಾರಿ ಕೈಗೊಳ್ಳಲು ಟಾಸ್ಕ್ ಫೋರ್ಸ್‌ ಸಮಿತಿ ಅನುಮೋದನೆ ನೀಡಿದೆ. ಕುಡಿಯುವ ನೀರಿನ ಯೋಜನೆಗಳನ್ನು ಮಿಷನ್‌ ಮೋಡ್‌ನ‌ಲ್ಲಿ ತ್ವರಿತವಾಗಿ ಅನುಷ್ಠಾನಕ್ಕೆ ತರಬೇಕು ಎಂದು ಸೂಚಿಸಿದರು.

ಜಿಲ್ಲೆಯ ಆಳಂದ, ಅಫಜಲಪುರ ಮತ್ತು ಜೇವರ್ಗಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿದ್ದು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರು ಖುದ್ದಾಗಿ ನೀರಿನ ಅಭಾವವಿರುವ ಗ್ರಾಮಗಳಿಗೆ ತೆರಳಿ ವಾಸ್ಥವ ಸ್ಥಿತಿ ಅರಿತು ಪರಿಹಾರ ಕಾರ್ಯಕ್ಕೆ ಚರುಕು ಮೂಡಿಸಬೇಕು. ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮಕ್ಕೆ ಕಳೆದೆರಡು ತಿಂಗಳಿನಿಂದ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, ಗ್ರಾಮದ ಆಸುಪಾಸು ತೆರೆದ ಬಾವಿಗಳಲ್ಲಿ ನೀರು ಲಭ್ಯವಿದ್ದಲ್ಲಿ ಪೈಪ್‌ಲೈನ್‌ ಅಳವಡಿಸಿ ಗ್ರಾಮಕ್ಕೆ ನೀರು ಸರಬರಾಜು ಮಾಡುವತ್ತ ಅಧಿಕಾರಿಗಳು ಯೋಚಿಸಬೇಕು ಎಂದರು.

ನೀರಿನ ಸಮಸ್ಯೆಯಿರುವ ಅಫಜಲಪುರ ತಾಲೂಕಿನ ಅತನೂರ, ಮಾಶಾಳ ಸೇರಿದಂತೆ ಇನ್ನೀತರ ಗ್ರಾಮಗಳಲ್ಲಿ ಭೂವಿಜ್ಞಾನಿಯ ಸಲಹೆ ಪಡೆದು ಕೂಡಲೆ ಕೊಳವೆ ಬೋರವೆಲ್ ಕೊರೆಯಬೇಕು. ಚಿತ್ತಾಪುರ ತಾಲೂಕಿನ ದಿಗ್ಗಾಂವ ಗ್ರಾಮಕ್ಕೆ ಓರಿಯೆಂಟ್ ಸಿಮೆಂಟ್ ಕಂಪನಿಯಿಂದಲೆ ನೀರು ಸರಬರಾಜು ಮಾಡುವಂತೆ ನಿರ್ದೇಶನ ನೀಡಬೇಕು. ಬೆಣ್ಣೂರ, ಪೇಠಶಿರೂರನಲ್ಲಿಯೂ ಕೊಳವೆ ಬೋರವೆಲ್ ಕೊರೆಯಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಹಶೀಲ್ದಾರರಿಗೆ ಸೂಚನೆ ನೀಡಿದರು.

ಸ್ವಚ್ಛತೆ ಕಾಪಾಡಿ: ನಗರ-ಪಟ್ಟಣ ವಾಸಿಗಳಿಗೆ ನೀರು ಸರಬರಾಜು ಮಾಡಲು ಯಾವುದೇ ತೊಂದರೆಯಿಲ್ಲ, ಆದರೆ ಜಲಮಂಡಳಿಯವರು ಸ್ವಚ್ಛ ಕುಡಿಯುವ ನೀರು ಸರಬರಾಜಿಗೆ ಗಮನಹರಿಸಬೇಕು ಎಂದರು.

ಜಿಪಂ ಸಿಇಒ ಡಾ| ರಾಜಾ ಪಿ. ಮಾತನಾಡಿ, ಬರ ಪರಿಹಾರ ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಪಿ.ಡಿ.ಒ., ತಾಪಂ, ತಹಶೀಲ್ದಾರರು, ಜಲ ಮಂಡಳಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಆಳಂದ ತಾಲೂಕಿನ ರುದ್ರವಾಡಿ ಗ್ರಾಮದಲ್ಲಿ ಖಾಸಗಿ ಬೋರವೆಲ್ ಮೂಲಕ ನೀರು ಪಡೆಯಲು ಒಪ್ಪಂದ ಮಾಡಿಕೊಂಡರೂ ನೀರು ಸರಬರಾಜಿಗೆ ಕ್ರಮ ವಹಿಸದ ಅಲ್ಲಿನ ಪಿ.ಡಿ.ಒ ಹಾಗೂ ನೀರು ಸರಬರಾಜು ಕಿರಿಯ ಅಭಿಯಂತರರಿಗೆ ನೋಟಿಸ್‌ ಜಾರಿ ಮಾಡಬೇಕು ಎಂದು ಹೇಳಿದರು.

ವಿ.ಕೆ. ಸಲಗರ್‌ ಗ್ರಾಮದಲ್ಲಿ ಈಗಾಗಲೆ ಖಾಸಗಿ ಜಮೀನಿನಲ್ಲಿ ಬಾವಿ ಕೊರೆದಿದ್ದು, ಕೊರೆದ ಬಾವಿಯ ಮಣ್ಣು ನೀರಿನಲ್ಲಿ ಬೀಳುತ್ತಿದೆ. ಇದನ್ನು ತಪ್ಪಿಸಲು ತಡೆಗೋಡೆ ನಿರ್ಮಿಸಿ ಅಲ್ಲಿಂದ ನೀರು ಪಡೆಯಲು ಜಮೀನು ಮಾಲೀಕರೊಂದಿಗೆ ಗ್ರಾಮ ಪಂಚಾಯತಿಯೂ ಒಪ್ಪಂದ ಮಾಡಿಕೊಳ್ಳಬೇಕು ಎಂದರು.

ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕರು ಮಾತನಾಡಿ, ಜಿಲ್ಲೆಯಲ್ಲಿ 14 ಮೇವು ಬ್ಯಾಂಕ್‌ ಸ್ಥಾಪಿಸಲಾಗಿದ್ದು, ರೈತರು ಇಲ್ಲಿಂದ ಹಸುಗಳಿಗೆ ಮೇವು ಪಡೆಯುತ್ತಿದ್ದಾರೆ. 10 ವಾರಗಳಿಗೆ ಬೇಕಾಗುವಷ್ಟು 44 ಮೆಟ್ರಿಕ್‌ ಟನ್‌ ಮೇವು ಲಭ್ಯವಿದೆ ಎಂದರು. ಪಾಲಿಕೆ ಆಯುಕ್ತೆ ಬಿ.ಫೌಜಿಯ ತರನ್ನುಮ, ರಾಹುಲ್ ಪಾಂಡ್ವೆ, ಜಿಲ್ಲೆಯ ತಹಶೀಲ್ದಾರರು, ಇದ್ದರು.

ಗ್ರಾಮಕ್ಕೆ ಸಮರ್ಪಕವಾಗಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುತ್ತಿದ್ದರೂ ತಪ್ಪು ಮಾಹಿತಿ ನೀಡಿ ಅನಾವಶ್ಯಕವಾಗಿ ಗೊಂದಲ ಸೃಷ್ಟಿಸುತ್ತಿರುವ ಆಳಂದ ತಾಲೂಕಿನ ಬೋಳನಿ ಪಿ.ಡಿ.ಒ.ಗೆ ಶೋಕಾಸ ನೋಟಿಸ್‌ ಜಾರಿ ಮಾಡುವಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಬರ ಪರಿಹಾರ ಕಾಮಗಾರಿಗಳಲ್ಲಿ ಯಾವುದೇ ಅಧಿಕಾರಿ-ಸಿಬ್ಬಂದಿ ರಾಜಕೀಯ ಮಾಡುತ್ತಿರುವವರ ಮಾಹಿತಿ ನೀಡಿದಲ್ಲಿ, ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
ಆರ್‌. ವೆಂಕಟೇಶಕುಮಾರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

47 Lakhs collected for Kanhaiya Campaign!

Kanhaiya Kumar ಕ್ಯಾಂಪೇನ್‌ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.