ವಿಕಲಚೇತನರಿಗೆ ಅನುಕಂಪ ಬೇಡ; ಅವಕಾಶ ನೀಡಿ


Team Udayavani, May 5, 2019, 3:24 PM IST

hav-3

ಹಾನಗಲ್ಲ: ವಿಕಲಚೇತನ ಮಕ್ಕಳಿಗೆ ಅನುಕಂಪ ತೋರಿಸುವುದು ಬೇಡ ಬದಲಾಗಿ ಅವರಿಗೆ ಸಮಾಜದಲ್ಲಿ ಇರುವ ವಿವಿಧ ಕೌಶಲಗಳಲ್ಲಿ ಅವಕಾಶಗಳನ್ನು ನೀಡಬೇಕು. ಅಂದಾಗ ಮಾತ್ರ ಅವರು ತಮ್ಮಲ್ಲಿನ ಕೀಳರಿಮೆಯಿಂದ ಹೊರಬಂದು ಮುಖ್ಯವಾಹಿನಿಗೆ ಬರಲು ಸಾಧ್ಯವಾಗುವುದು ಎಂದು ಎಪಿಡಿ ಸಂಸ್ಥೆಯ ಎಂ.ಬಸವರಾಜು ಕರೆ ನೀಡಿದರು.

ತಾಲೂಕಿನ ಹೇರೂರು ಬಿಸಿಎಂ ವಸತಿ ನಿಲಯ, ರೋಶನಿ ಸಮಾಜ ಸೇವಾ ಸಂಸ್ಥೆ, ಹೇರೂರ ಗ್ರಾಪಂ, ಬೆಂಗಳೂರಿನ ಎಪಿಡಿ ಸಂಸ್ಥೆ ಆಶ್ರಯದಲ್ಲಿ ವಿಕಲಚೇತನ ಮಕ್ಕಳಿಗಾಗಿ ಆಯೋಜಿಸಿದ್ದ ಹತ್ತು ದಿನಗಳ ಉಚಿತ ವಸತಿಯುತ ಶೈಕ್ಷಣಿಕ ರಜಾ ಶಿಬಿರದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ವಿಕಚೇತನ ಮಕ್ಕಳಿಗೆ ಇಂತಹ ವಸತಿಯುತ ಶೈಕ್ಷಣಿಕ ರಜಾ ಶಿಬಿರ ಆಯೋಜಿಸುವುದರಿಂದ ಮಕ್ಕಳು ತಮ್ಮ ದೈನಂದಿನ ಕೆಲಸಗಳನ್ನು ಮಾಡಲು ಕಲಿತುಕೊಳ್ಳುವುದರ ಜೊತೆಗೆ ಇತರೆ ಮಕ್ಕಳೊಂದಿಗೆ ಬೆರೆಯತ್ತಾರೆ. ಇದರೊಂದಿಗೆ ತಮ್ಮ ಕೌಶಲ ಹೆಚ್ಚಿಸಿಕೊಳ್ಳುತ್ತಾರೆ ಎಂದರು.

ತಾಲೂಕು ಬಿಸಿಎಂ ವಿಸ್ತರಣಾ ಅಧಿಕಾರಿ ಎಸ್‌. ಆನಂದ ಮಾತನಾಡಿ, ವಿಕಲಾಂಗಚೇತನ ಮಕ್ಕಳನ್ನು ಪಾಲಕರು ಮನೆಯಲ್ಲಿ ಇಟ್ಟು ಅವರ ಯೋಗಕ್ಷೇಮ ನೋಡಿಕೊಳ್ಳಲು ಕಷ್ಟಪಡುತ್ತಿರುತ್ತಾರೆ. ಆದರೆ, ರೋಶನಿ ಸಮಾಜ ಸೇವಾ ಸಂಸ್ಥೆ ಅಂತಹ ಮಕ್ಕಳನ್ನು ಹೇಗೆ ನೋಡಿಕೊಳ್ಳಬೇಕು ಎಂಬುದನ್ನು ಮಕ್ಕಳ ಪಾಲಕರಿಗೆ ತರಬೇತಿ ನೀಡುವ ಜತೆಗೆ, ಮಕ್ಕಳನ್ನು ತಮ್ಮೊಂದಿಗೆ 10 ದಿನಗಳವರೆಗೆ ಇಟ್ಟುಕೊಂಡು ಸರಳವಾಗಿ ಸುವ್ಯವಸ್ಥಿತ ರೀತಿಯಿಂದ ನೋಡಿಕೊಂಡು ರಜಾ ಶಿಬಿರದಲ್ಲಿ ಮಕ್ಕಳನ್ನು ಸಮಾಜಮುಖೀಯನ್ನಾಗಿಸುವಲ್ಲಿ ಶ್ರಮಿಸುತ್ತಿರುವುದು ಉತ್ತಮ ಕಾರ್ಯಕ್ರಮವಾಗಿದೆ ಎಂದರು.

ಸಂಸ್ಥೆಯ ಸಹ ನಿರ್ದೇಶಕಿ ಸಿಸ್ಟರ ಸಿಂತಿಯಾ ಮಾತನಾಡಿ, ವಿಕಲಚೇತನ ಮಕ್ಕಳ ಸರ್ವತೋಮುಖ ಬೆಳವಣಿಗೆ ನಿಟ್ಟಿನಲ್ಲಿ ಸುಮಾರು 5 ವರ್ಷಗಳಿಂದ ವಿಕಲಚೇತನ ಮಕ್ಕಳಿಗೆ ಶಿಕ್ಷಣ ಜತೆಗೆ ರಜಾ ಶಿಬಿರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸಮನ್ವಯ ಶಿಕ್ಷಣದ ಸಂಯೋಜಕ ಡಿಗ್ಗಪ್ಪ ಲಮಾಣಿ, ಗ್ರಾಪಂ ಅಧ್ಯಕ್ಷೆ ಸುಲೋಚನಾ ದೇವಗಿರಿ, ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ನಾಗರಾಜ ಜೊಗಣ್ಣನವರ, ಸಹದೇವಪ್ಪ ಕಲಾದಗಿ ಮೊದಲಾದವರು ಇದ್ದರು.

ಟಾಪ್ ನ್ಯೂಸ್

1-rrewrwer

DD Kisan ವಾಹಿನಿಯಲ್ಲಿ ಇಂದಿನಿಂದ ಎಐ ನಿರೂಪಕರಿಂದ ಸುದ್ದಿ ವಾಚನ!

1-sadsdsad

Deepika Padukone; ಗರ್ಭಿಣಿಯೆಂದು ಸುದ್ದಿ ನೀಡಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡರು

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಿರುಪತಿಗೆಂದು ಹೋಗುತ್ತಿದ್ದವರ ಕಾರು ಪಲ್ಟಿ; ನಾಲ್ವರು ಸಾವು, ಆರು ಮಂದಿಗೆ ಗಾಯ

Ranebennur; ತಿರುಪತಿಗೆಂದು ಹೋಗುತ್ತಿದ್ದವರ ಕಾರು ಪಲ್ಟಿ; ನಾಲ್ವರು ಸಾವು, ಆರು ಮಂದಿಗೆ ಗಾಯ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

COMEDK: ಬೆಂಗಳೂರಿನ ಬಾಲಸತ್ಯ ಸರವಣನ್‌ಗೆ ಫ‌ಸ್ಟ್‌ ರ್‍ಯಾಂಕ್‌

COMEDK UGET Result: ಬೆಂಗಳೂರಿನ ಬಾಲಸತ್ಯ ಸರವಣನ್‌ಗೆ ಫ‌ಸ್ಟ್‌ ರ್‍ಯಾಂಕ್‌

1-rrewrwer

DD Kisan ವಾಹಿನಿಯಲ್ಲಿ ಇಂದಿನಿಂದ ಎಐ ನಿರೂಪಕರಿಂದ ಸುದ್ದಿ ವಾಚನ!

1-sadsdsad

Deepika Padukone; ಗರ್ಭಿಣಿಯೆಂದು ಸುದ್ದಿ ನೀಡಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡರು

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.