ಸಮುದ್ರ ತೀರದಲ್ಲಿ ತೈಲ ಮಿಶ್ರಿತ ಡಾಂಬರು


Team Udayavani, May 5, 2019, 4:44 PM IST

nc-3

ಅಂಕೋಲಾ: ತಾಲೂಕಿನ ಸಮುದ್ರ ತೀರದಲ್ಲಿ ವಿಷಕಾರಿ ತೈಲ ಮಿಶ್ರಿತ ಡಾಂಬರು ಕಡಲ ದಂಡೆಯುದ್ದಕ್ಕೂ ಶೇಖರಣೆ ಆಗುತ್ತಿದ್ದು, ಇದು ಮೀನುಗಾರರ ನಿದ್ದೆಗೆಡಿಸಿದೆ.

ಬೆಳಂಬಾರ, ನದಿಬಾಗ, ಹೊನ್ನೆಗುಡಿ, ಶೇಡಿಕುಳಿ, ಕೇಣಿ, ಹನಿಬೀಚ್, ಬೇಲೆಕೇರಿ, ಹಾರವಾಡಾ ಭಾಗದ ಸಮುದ್ರ ತೀರಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸಮುದ್ರ ನೀರಿನಲ್ಲಿ ತೇಲಿ ಬರುವ ಈ ವಿಷಕಾರಿ ಡಾಂಬರು ಶೇಖರಣೆ ಆಗುತ್ತಿರುವುದು ಕಂಡುಬಂದಿದೆ. ಕಳೆದೆರಡು ದಿನಗಳಂದಂತೂ ಈ ಪ್ರಮಾಣ ಏರುಗತಿಯಲ್ಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಹಡಗುಗಳಿಂದ ವಿಸರ್ಜಿಸಲಾಗುತ್ತಿರುವ ಎಂಜಿನ್‌ ಆಯಿಲ್ ಕಾರಣವಾಗಿರುವ ಸಾಧ್ಯತೆ ದಟ್ಟವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ನೂರಾರು ದೊಡ್ಡ ಹಡಗುಗಳು ಸಮುದ್ರದಲ್ಲಿ ಸಂಚರಿಸುತ್ತವೆ. ಇತರ ವಾಹನಗಳಂತೆ ಇಂತಿಷ್ಟು ಕಿ.ಮೀ ಓಡಿದ ಮೇಲೆ ಹಡಗುಗಳ ಎಂಜಿನ್‌ ಆಯಿಲ್ಬ ದಲಾಯಿಸಬೇಕಾಗುತ್ತದೆ. ಎಂಜಿನ್‌ ಆಯಿಲ್ ಬದಲಿಸಲು ಬಂದರಿನಲ್ಲಿ ನಿಲ್ಲಿಸಿದರೆ ಶುಲ್ಕ ಕಟ್ಟಬೇಕು. ಹಾಗಾಗಿ ಅವರು ಸಮುದ್ರಕ್ಕೆ ಬಿಡುತ್ತಾರೆ ಎನ್ನುತ್ತಾರೆ.

ಕರಾವಳಿ ತೀರದ ಕೆಲವು ಸಮುದ್ರ ತೀರಗಳಲ್ಲಿಯು ಇಂಥ ಡಾಂಬರು ಉಂಡೆಗಳನ್ನು ಸಮುದ್ರ ಹೊರಹಾಕುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ. ಸಮುದ್ರ ತೀರಗಳಲ್ಲಿ ಕಂಡುಬರುತ್ತಿರುವ ಡಾಂಬರ್‌ಗಳು ಜಲಚರಗಳಿಗೆ ಮಾರಕವಾಗಿದ್ದು ಈ ಬಗ್ಗೆ ಪರಿಸರ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ ಎಂದು ಮೀನುಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಡಲ ತೀರದಲ್ಲೀಗ ಮೀನಿಗೆ ಬರ!
ಸಮುದ್ರ ಕಲುಷಿತಗೊಂಡಿರುವುದರಿಂದ ಈ ಬಾರಿ ಕಡಲ ತೀರದಲ್ಲಿ ಸಾಕಷ್ಟು ಮೀನು ಸಿಗದೆ ಮೀನುಗಾರ ಕುಟುಂಬಗಳು ಸಂಕಷ್ಟದಲ್ಲಿವೆ. ನಾಡದೋಣಿ, ಪರ್ಸೀನ್‌ ಬೋಟುಗಳಿಗೆ ಕಳೆದ 2-3 ತಿಂಗಳಿಂದ ಮೀನು ಸಿಗುತ್ತಿಲ್ಲ. ಪ್ರತಿ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಉತ್ತಮ ಮೀನು ಸಿಗುತ್ತಿತ್ತು. ಬಂಗುಡೆ, ತಾರ್ಲಿ ಸಿಗುತ್ತಿದ್ದವು. ಗುಂಪಾಗಿ ತೆಪ್ಪದಲ್ಲಿ ಬರುವ ಮೀನುಗಳು ಸಿಗುವುದರಿಂದ ಪರ್ಸಿನ್‌ ಬೋಟುಗಳ ಮಾಲೀಕರಿಗೆ ಸಾಕಷ್ಟು ಆದಾಯ ಸಿಗುತ್ತಿತ್ತು. ಆದರೆ ಈ ಬಾರಿ ಮೀನು ಸಿಗದೆ ತೀವ್ರ ಸಂಕಷ್ಟ ಅನುಭವಿಸಬೇಕಾಗಿದೆ.
•ಸುಧಾಕರ ಜಾಂಬಾವಾಳಿಕರ, ಮೀನುಗಾರ ಮುಖಂಡ ಬೇಲೇಕೇರಿ

ಟಾಪ್ ನ್ಯೂಸ್

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.