ಬಿಜೆಪಿಗೆ ಕಾಡುತ್ತಿದೆ ಬೇರು ಮಟ್ಟದ ತಿಕ್ಕಾಟ


Team Udayavani, May 6, 2019, 3:09 AM IST

bjp-logo

ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಉಪ ಸಮರದಲ್ಲಿ ಗೆಲುವು ನಮ್ಮದೇ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರಾದರೂ ಪಕ್ಷದೊಳಗಿನ ಆಂತರಿಕ ತಿಕ್ಕಾಟ ಬೇರು ಮಟ್ಟಕ್ಕಿಳಿದಿದ್ದು, ಇದು ಪರಿಣಾಮ ಬೀರುವ ಆತಂಕ ಪಕ್ಷದ ನಾಯಕರನ್ನು ಕಾಡುತ್ತಿದೆ.

ಕುಂದಗೋಳ ಕ್ಷೇತ್ರವನ್ನು ಕಾಂಗ್ರೆಸ್‌ ಹಾಗೂ ಬಿಜೆಪಿಗಳೆರಡೂ ಅತ್ಯಂತ ಪ್ರತಿಷ್ಠೆಯಾಗಿ ಪರಿಗಣಿಸಿವೆ. ಗೆಲುವನ್ನು ತಮ್ಮದಾಗಿಸಿಕೊಳ್ಳಲು ಸಣ್ಣ, ಸಣ್ಣ ಯತ್ನವನ್ನೂ ಕೈ ಚೆಲ್ಲದೆ, ಎದುರಾಳಿಗೆ ಅವಕಾಶ ನೀಡದಂತೆ ಎಚ್ಚರಿಕೆಯ ಹೆಜ್ಜೆಗಳನ್ನಿಡುತ್ತಿದ್ದಾರೆ. ಎರಡೂ ಕಡೆಯವರು ಅನುಕಂಪದ ದಾಳ ಉರುಳಿಸುತ್ತಿದ್ದಾರೆ. ಬಿಜೆಪಿಯವರು ಕಾಂಗ್ರೆಸ್‌ ಹಾಗೂ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸುತ್ತಿದ್ದಾರೆ. ಇಷ್ಟೆಲ್ಲದರ ನಡುವೆಯೂ ಬಿಜೆಪಿಗೆ ಎಲ್ಲೋ ಒಂದು ಸಣ್ಣ ಆತಂಕ ಕಾಡತೊಡಗಿದೆ.

ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಳೆದ ಎರಡು ಚುನಾವಣೆಗಳಲ್ಲಿ ಬಿಜೆಪಿಗೆ ಕಹಿ ಅನುಭವವಾಗಿದ್ದು, ಅಂತಹುದೇ ಮತ್ತೂಂದು ಕಹಿ ಅನುಭವ ಮರುಕಳಿಸದಿರಲಿ ಎಂಬುದು ಅನೇಕ ಮುಖಂಡರ ಅನಿಸಿಕೆ. ಮೇಲ್ನೋಟಕ್ಕೆ ಎಲ್ಲವೂ ಸರಿಯಾಗಿದೆ ಎಂದು ಕಂಡು ಬಂದರೂ ಆಂತರಿಕವಾಗಿ ಅಂದುಕೊಂಡ ರೀತಿಯಲ್ಲಿಲ್ಲ ಎಂಬ ಅನುಮಾನ, ಆತಂಕ ಒಂದಿಷ್ಟು ಮುಖಂಡರು ಹಾಗೂ ಕಾರ್ಯಕರ್ತರನ್ನು ಕಾಡತೊಡಗಿದೆ.

ಕ್ಷೇತ್ರದಲ್ಲಿ ಟಿಕೆಟ್‌ ವಿಚಾರವಾಗಿ ಇಬ್ಬರು ಮುಖಂಡರ ನಡುವಿನ ತಿಕ್ಕಾಟ ಹಿಂದಿನಿಂದ ನಡೆದುಕೊಂಡು ಬಂದಿದೆ. ಉಪ ಚುನಾವಣೆ ಸಂದರ್ಭದಲ್ಲೂ ಇದು ಮರುಕಳಿಸಿತ್ತು. ಆದರೆ, ಪಕ್ಷದ ನಾಯಕರ ಭರವಸೆ, ಒತ್ತಾಯದ ಮೇರೆಗೆ ಇಬ್ಬರು ಮುಖಂಡರು ಒಂದಾಗಿದ್ದಾರೆ. ಆದರೆ, ತಳ ಹಂತದ ಕಾರ್ಯಕರ್ತರಲ್ಲಿ ಇದು ಎಷ್ಟರ ಮಟ್ಟಿಗೆ ಸಾಧ್ಯವಾಗಿದೆ ಎಂಬುದು ಇನ್ನೂ ಪ್ರಶ್ನಾರ್ಥಕವಾಗಿಯೇ ಉಳಿದಿದೆ.

2008ರಲ್ಲಿ ಮೊದಲ ಬಾರಿಗೆ ಕುಂದಗೋಳ ಕ್ಷೇತ್ರವನ್ನು ಕಾಂಗ್ರೆಸ್‌, ಜನತಾ ಪರಿವಾರ, ಪಕ್ಷೇತರರ ಆಳ್ವಿಕೆಯಿಂದ ಕಿತ್ತುಕೊಂಡು ತನ್ನ ಅಧಿಪತ್ಯ ಸ್ಥಾಪಿಸುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು. ಬಿಜೆಪಿ ಅಭ್ಯರ್ಥಿ ಎಸ್‌.ಐ.ಚಿಕ್ಕನಗೌಡ್ರ ಸುಮಾರು 6,376 ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ಸಿ.ಎಸ್‌.ಶಿವಳ್ಳಿ ವಿರುದ್ಧ ಗೆಲುವು ಸಾಧಿಸಿದ್ದರು.

2013ರಲ್ಲಿ ಬಿಜೆಪಿಯ ಇಬ್ಭಾಗದಿಂದಾಗಿ ಬಿಜೆಪಿ-ಕೆಜೆಪಿ ನಡುವಿನ ಸೆಣಸಾಟ ಕಾಂಗ್ರೆಸ್‌ಗೆ ಮತ್ತೆ ಗೆಲುವು ತಂದುಕೊಟ್ಟಿತ್ತು. 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ 52,690 ಮತಗಳನ್ನು ಪಡೆದಿತ್ತು. ಕೆಜೆಪಿ ಅಭ್ಯರ್ಥಿ ಎಸ್‌.ಐ.ಚಿಕ್ಕನಗೌಡ್ರ 31,618 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಎಂ.ಆರ್‌.ಪಾಟೀಲ 23,641 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ಸುಮಾರು 21,072 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಿ.ಎಸ್‌.ಶಿವಳ್ಳಿ 64,871 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಎಸ್‌.ಐ.ಚಿಕ್ಕನಗೌಡ್ರ 64,237 ಮತಗಳನ್ನು ಪಡೆದು ಕೇವಲ 634 ಮತಗಳ ಅಂತರದಿಂದ ಸೋಲು ಕಂಡಿದ್ದರು. ಈ ಸಮರದಲ್ಲಿ ಬಿಜೆಪಿಗೆ ಎದುರಾಳಿ ನಡೆಸಿದ ಸೆಣಸಾಟದ ಸಾಮರ್ಥ್ಯ ಎಷ್ಟು, ಪಕ್ಷದೊಳಗಿನ ಒಳಹೊಡೆತದ ಪೆಟ್ಟಿನ ನೋವು ಎಷ್ಟು ಎಂಬುದು ಬಿಜೆಪಿಯವರ ಮನದಲ್ಲಿ ಈಗಲೂ ಸುಳಿದಾಡುತ್ತಿದೆ.

ಮನಸ್ಸುಗಳು ಒಡೆದಿವೆ: ಕುಂದಗೋಳ ಕ್ಷೇತ್ರದಲ್ಲಿ ಇಬ್ಬರು ಮುಖಂಡರ ನಡುವಿನ ಹಲವು ವರ್ಷಗಳ ಆಂತರಿಕ ತಿಕ್ಕಾಟ ತಳಮಟ್ಟದ ಕಾರ್ಯಕರ್ತರ ಹಂತದವರೆಗೂ ತನ್ನದೇ ಪರಿಣಾಮ ಬೀರಿದೆ. ಗ್ರಾಮ ಮಟ್ಟದಲ್ಲಿ ಮನಸ್ಸುಗಳು ಸುಲಭವಾಗಿ ಒಂದಾಗಲಾರದಷ್ಟು ದೂರವಾಗಿವೆ. ನಮ್ಮ ನಾಯಕರಿಗೆ ಅವರಿಂದ ಅನ್ಯಾಯವಾಗಿದೆ ಎಂದು ಇವರು, ಇವರಿಂದ ಅನ್ಯಾಯವಾಗಿದೆ ಎಂದು ಅವರು, ಹೀಗೆ ಎರಡೂ ಕಡೆಯ ಕಾರ್ಯಕರ್ತರು ನಮಗೆ ಅನ್ಯಾಯವಾಗಿದೆ,

ಸಹಿಸಿಕೊಳ್ಳುವುದು ಹೇಗೆ ಎಂಬ ಆಕ್ರೋಶವನ್ನು ಆಂತರಿಕವಾಗಿ ಹೊರ ಹಾಕುತ್ತಿದ್ದಾರೆ. ಇದು ಗುಪ್ತಗಾಮಿನಿಯಾಗಿ ಕ್ಷೇತ್ರದಾದ್ಯಂತ ಸುಳಿದಾಡುತ್ತಿದೆ. ಇಬ್ಬರು ಮುಖಂಡರು ಭಿನ್ನಮತ ಮರೆತಿದ್ದೇವೆ, ನಾವಿಬ್ಬರೂ ಒಂದಾಗಿದ್ದೇವೆ, ನಮ್ಮಲ್ಲಿ ಯಾವುದೇ ತಿಕ್ಕಾಟವಿಲ್ಲ ಎಂದು ಕೈ ಕೈ ಹಿಡಿದು ಕ್ಷೇತ್ರದಲ್ಲಿ ಪ್ರಚಾರಕ್ಕೆ ಮುಂದಾಗಿದ್ದಾರೆ. ಆದರೆ, ತಳಮಟ್ಟದ ಕಾರ್ಯಕರ್ತರ ಮನಸ್ಸು ಒಂದಾಗಿದೆಯೇ, ಪಕ್ಷದ ಅಭ್ಯರ್ಥಿ ಪರವಾಗಿ ಬದ್ಧವಾಗಿ ಕಾರ್ಯ ನಿರ್ವಹಿಸುವ ಕೆಲಸ ಆಗುತ್ತಿದೆಯೇ? ಈ ಕುರಿತ ಗ್ಯಾರಂಟಿ ಇನ್ನೂ ಮೂಡುತ್ತಿಲ್ಲ.

ಖಡಕ್‌ ಎಚ್ಚರಿಕೆ ನೀಡಿದ ನಾಯಕರು: ಪಕ್ಷದೊಳಗಿನ ಆಂತರಿಕ ತಿಕ್ಕಾಟ ಬೇರುಮಟ್ಟಕ್ಕಿಳಿದಿದ್ದು ಈಗಲೂ ಅದು ತನ್ನದೇ ನಿಲುವಿನಿಂದ ಹೊರಬಂದಿಲ್ಲ ಎಂಬ ಸತ್ಯ ಅರಿತೇ ಬಿಜೆಪಿಯ ವಿವಿಧ ನಾಯಕರು ಹಾಗೂ ಮುಖಂಡರು ಪಕ್ಷದ ಕಾರ್ಯಕರ್ತರಿಗೆ ಹಿಂದಿನ ತಿಕ್ಕಾಟ, ಸಿಟ್ಟುಗಳನ್ನು ಬದಿಗಿರಿಸಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಕುಂದಗೋಳ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರದ ವಿರುದ್ಧ ಸೆಣಸಲು, ವಿರೋಧ ಪಕ್ಷವಾಗಿ ಸರ್ಕಾರವನ್ನು ಮಣಿಸಲೇಬೇಕೆಂಬ ಛಲದೊಂದಿಗೆ ತನ್ನ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಂಘಟಿತ ಧ್ವನಿಯನ್ನು ಬಿಜೆಪಿ ಮೊಳಗಿಸಬೇಕಾಗಿದೆ. ಆದರೆ, ಈಗಲೂ ಬಿಜೆಪಿಯಲ್ಲಿ ಸಂಘಟಿತ ಧ್ವನಿಯ ಕೊಂಚ ಕೊರತೆ, ಕೆಲವೊಂದು ನಾಯಕರು, ಮುಖಂಡರ ಗೈರು ಹಾಗೂ ಕೆಲವು ನಾಯಕರು ಸಕ್ರಿಯತೆ ತೋರದಿರುವುದು ಎಲ್ಲವೂ ಸರಿ ಇಲ್ಲ ಎಂಬ ಸಂದೇಶ ರವಾನಿಸುತ್ತಿದೆ.

* ಅಮರೇಗೌಡ ಗೋನವಾರ

ಟಾಪ್ ನ್ಯೂಸ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.